AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಓರ್ವ ಹಿಂದೂವಾಗಿ ಇಲ್ಲಿಗೆ ಬಂದಿದ್ದೇನೆ, ಪ್ರಧಾನಿಯಾಗಿ ಅಲ್ಲ, ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತು

ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂ ಆಗಿ ಬಂದಿದ್ದೇನೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ. ಕೇಂಬ್ರಿಡ್ಜ್​ ವಿಶ್ವವಿದ್ಯಾಲಯದ ಜೀಸಸ್ ಕಾಲೇಜಿನಲ್ಲಿ ನಡೆದ ರಾಮಕಥಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ ರಿಷಿ ಸುನಕ್, ನಾನು ಇಂದು ಬ್ರಿಟನ್ ಪ್ರಧಾನಿಯಾಗಿ ಬಂದಿಲ್ಲ ಓರ್ವ ಹಿಂದೂವಾಗಿ ಬಂದಿದ್ದೇನೆ ಎಂದರು

ನಾನು ಓರ್ವ ಹಿಂದೂವಾಗಿ ಇಲ್ಲಿಗೆ ಬಂದಿದ್ದೇನೆ, ಪ್ರಧಾನಿಯಾಗಿ ಅಲ್ಲ, ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತು
ರಿಷಿ ಸುನಕ್
ನಯನಾ ರಾಜೀವ್
|

Updated on: Aug 16, 2023 | 1:05 PM

Share

‘ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂ ಆಗಿ ಬಂದಿದ್ದೇನೆ’ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಹೇಳಿದ್ದಾರೆ. ಕೇಂಬ್ರಿಡ್ಜ್​ ವಿಶ್ವವಿದ್ಯಾಲಯದ ಜೀಸಸ್ ಕಾಲೇಜಿನಲ್ಲಿ ನಡೆದ ರಾಮಕಥಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ ರಿಷಿ ಸುನಕ್, ನಾನು ಇಂದು ಬ್ರಿಟನ್ ಪ್ರಧಾನಿಯಾಗಿ ಬಂದಿಲ್ಲ ಓರ್ವ ಹಿಂದೂವಾಗಿ ಬಂದಿದ್ದೇನೆ ಎಂದರು. ಭಾರತದ ಸ್ವಾತಂತ್ರ್ಯ ದಿನಾಚರಣೆಯಂದೇ ರಾಮಕಥಾ ಕಾರ್ಯಕ್ರಮ ನಡೆಯಿತು. ನನ್ನ ನಂಬಿಕೆ ವೈಯಕ್ತಿಕವಾದದ್ದು, ಪ್ರಧಾನಿಯಾಗಿರುವುದು ದೊಡ್ಡ ಗೌರವವಾದರೂ ಈ ಹುದ್ದೆಯನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಕಠಿಣ ಆಯ್ಕೆಗಳನ್ನು ಮಾಡಬೇಕು, ಜನರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು.

ನನ್ನ ಧರ್ಮವು ನನಗೆ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ, ಯಾವುದೇ ಕೆಲಸವನ್ನು ಮಾಡುವ ಮೊದಲು ಸಮಸ್ಯೆಗಳನ್ನು ಆಲಿಸಿ, ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಧರ್ಮವು ಹೇಳುತ್ತದೆ.

ನನ್ನ ಕಚೇರಿಯ ಮೇಜಿನ ಮೇಲೆ ಗಣೇಶ ಮೂರ್ತಿ ಇದೆ

ಮೊರಾರಿ ಬಾಪು ಅವರ ಆಸನದ ಹಿಂದೆ ಹನುಮಂತನ ವಿಗ್ರಹವನ್ನು ಹೇಗೆ ಇರಿಸಲಾಗಿದೆಯೋ ಅದೇ ರೀತಿ ಗಣೇಶನ ವಿಗ್ರಹವನ್ನು 10 ಡೌನಿಂಗ್ ಸ್ಟ್ರೀಟ್‌ನಲ್ಲಿರುವ ನನ್ನ ಕಚೇರಿಯ ಮೇಜಿನ ಮೇಲೆ ಇರಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಸುನಕ್ ಹೇಳಿದ್ದಾರೆ.

ಮತ್ತಷ್ಟು ಓದಿ:ಯುಕೆ ಪ್ರಧಾನಿ ರಿಷಿ ಸುನಕ್ ಯಾರು?, ಭಾರತದೊಂದಿಗೆ ಅವರಿಗಿರುವ ಸಂಬಂಧ ಏನು?

ಸುನಕ್ ಅವರು ಬ್ರಿಟಿಷ್ ಚಾನ್ಸೆಲರ್ ಆಗಿದ್ದಾಗ (2020) ದೀಪಾವಳಿಯ ದಿನದಂದು ಅಧಿಕೃತ ನಿವಾಸವಾದ 11 ಡೌನಿಂಗ್ ಸ್ಟ್ರೀಟ್‌ನಲ್ಲಿ ಮೊದಲ ಬಾರಿಗೆ ದೀಪವನ್ನು ಬೆಳಗಿಸಿದ್ದೆ. ಪ್ರತಿಯೊಂದು ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತೇನೆ ಎಂದು ಬ್ರಿಟನ್ ಪ್ರಧಾನಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ, ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ, ಜನ್ಮಾಷ್ಟಮಿ ಆಚರಿಸಲು ನಾನು ನನ್ನ ಹೆಂಡತಿಯೊಂದಿಗೆ ಭಕ್ತಿ ವೇದಾಂತ ಮ್ಯಾನರ್ ದೇವಸ್ಥಾನಕ್ಕೆ ಹೋಗಿದ್ದೆವು ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ