AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಓರ್ವ ಹಿಂದೂವಾಗಿ ಇಲ್ಲಿಗೆ ಬಂದಿದ್ದೇನೆ, ಪ್ರಧಾನಿಯಾಗಿ ಅಲ್ಲ, ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತು

ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂ ಆಗಿ ಬಂದಿದ್ದೇನೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೇಳಿದ್ದಾರೆ. ಕೇಂಬ್ರಿಡ್ಜ್​ ವಿಶ್ವವಿದ್ಯಾಲಯದ ಜೀಸಸ್ ಕಾಲೇಜಿನಲ್ಲಿ ನಡೆದ ರಾಮಕಥಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ ರಿಷಿ ಸುನಕ್, ನಾನು ಇಂದು ಬ್ರಿಟನ್ ಪ್ರಧಾನಿಯಾಗಿ ಬಂದಿಲ್ಲ ಓರ್ವ ಹಿಂದೂವಾಗಿ ಬಂದಿದ್ದೇನೆ ಎಂದರು

ನಾನು ಓರ್ವ ಹಿಂದೂವಾಗಿ ಇಲ್ಲಿಗೆ ಬಂದಿದ್ದೇನೆ, ಪ್ರಧಾನಿಯಾಗಿ ಅಲ್ಲ, ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಾತು
ರಿಷಿ ಸುನಕ್
ನಯನಾ ರಾಜೀವ್
|

Updated on: Aug 16, 2023 | 1:05 PM

Share

‘ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂ ಆಗಿ ಬಂದಿದ್ದೇನೆ’ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್(Rishi Sunak)  ಹೇಳಿದ್ದಾರೆ. ಕೇಂಬ್ರಿಡ್ಜ್​ ವಿಶ್ವವಿದ್ಯಾಲಯದ ಜೀಸಸ್ ಕಾಲೇಜಿನಲ್ಲಿ ನಡೆದ ರಾಮಕಥಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ ರಿಷಿ ಸುನಕ್, ನಾನು ಇಂದು ಬ್ರಿಟನ್ ಪ್ರಧಾನಿಯಾಗಿ ಬಂದಿಲ್ಲ ಓರ್ವ ಹಿಂದೂವಾಗಿ ಬಂದಿದ್ದೇನೆ ಎಂದರು. ಭಾರತದ ಸ್ವಾತಂತ್ರ್ಯ ದಿನಾಚರಣೆಯಂದೇ ರಾಮಕಥಾ ಕಾರ್ಯಕ್ರಮ ನಡೆಯಿತು. ನನ್ನ ನಂಬಿಕೆ ವೈಯಕ್ತಿಕವಾದದ್ದು, ಪ್ರಧಾನಿಯಾಗಿರುವುದು ದೊಡ್ಡ ಗೌರವವಾದರೂ ಈ ಹುದ್ದೆಯನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಕಠಿಣ ಆಯ್ಕೆಗಳನ್ನು ಮಾಡಬೇಕು, ಜನರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು.

ನನ್ನ ಧರ್ಮವು ನನಗೆ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ, ಯಾವುದೇ ಕೆಲಸವನ್ನು ಮಾಡುವ ಮೊದಲು ಸಮಸ್ಯೆಗಳನ್ನು ಆಲಿಸಿ, ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಧರ್ಮವು ಹೇಳುತ್ತದೆ.

ನನ್ನ ಕಚೇರಿಯ ಮೇಜಿನ ಮೇಲೆ ಗಣೇಶ ಮೂರ್ತಿ ಇದೆ

ಮೊರಾರಿ ಬಾಪು ಅವರ ಆಸನದ ಹಿಂದೆ ಹನುಮಂತನ ವಿಗ್ರಹವನ್ನು ಹೇಗೆ ಇರಿಸಲಾಗಿದೆಯೋ ಅದೇ ರೀತಿ ಗಣೇಶನ ವಿಗ್ರಹವನ್ನು 10 ಡೌನಿಂಗ್ ಸ್ಟ್ರೀಟ್‌ನಲ್ಲಿರುವ ನನ್ನ ಕಚೇರಿಯ ಮೇಜಿನ ಮೇಲೆ ಇರಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಸುನಕ್ ಹೇಳಿದ್ದಾರೆ.

ಮತ್ತಷ್ಟು ಓದಿ:ಯುಕೆ ಪ್ರಧಾನಿ ರಿಷಿ ಸುನಕ್ ಯಾರು?, ಭಾರತದೊಂದಿಗೆ ಅವರಿಗಿರುವ ಸಂಬಂಧ ಏನು?

ಸುನಕ್ ಅವರು ಬ್ರಿಟಿಷ್ ಚಾನ್ಸೆಲರ್ ಆಗಿದ್ದಾಗ (2020) ದೀಪಾವಳಿಯ ದಿನದಂದು ಅಧಿಕೃತ ನಿವಾಸವಾದ 11 ಡೌನಿಂಗ್ ಸ್ಟ್ರೀಟ್‌ನಲ್ಲಿ ಮೊದಲ ಬಾರಿಗೆ ದೀಪವನ್ನು ಬೆಳಗಿಸಿದ್ದೆ. ಪ್ರತಿಯೊಂದು ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತೇನೆ ಎಂದು ಬ್ರಿಟನ್ ಪ್ರಧಾನಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ, ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ, ಜನ್ಮಾಷ್ಟಮಿ ಆಚರಿಸಲು ನಾನು ನನ್ನ ಹೆಂಡತಿಯೊಂದಿಗೆ ಭಕ್ತಿ ವೇದಾಂತ ಮ್ಯಾನರ್ ದೇವಸ್ಥಾನಕ್ಕೆ ಹೋಗಿದ್ದೆವು ಎಂದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ