AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

ಕಳೆದ ಒಂದು ವಾರದ ಅವಧಿಯಲ್ಲಿ ಬ್ರಿಟನ್​ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಶೇ.20ರಷ್ಟು ಏರಿಕೆ ಕಂಡಿದೆ. ಕೊರೊನಾ ಮೊದಲ ಅಲೆ ಉತ್ತುಂಗಕ್ಕೇರಿದ್ದಾಗ ದಾಖಲಾಗುತ್ತಿದ್ದ ಸಾವಿನ ಪ್ರಮಾಣ ಮತ್ತೆ ಮರುಕಳಿಸುತ್ತಿದ್ದು, ಪ್ರತಿನಿತ್ಯ ಸುಮಾರು 1 ಸಾವಿರ ಜನ ಸಾವಿಗೀಡಾಗುತ್ತಿದ್ದಾರೆ.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​
ಬ್ರಿಟನ್​​ ಪ್ರಧಾನಿ ಬೋರಿಸ್​ ಜಾನ್ಸನ್​
Skanda
| Edited By: ಸಾಧು ಶ್ರೀನಾಥ್​|

Updated on: Jan 05, 2021 | 1:10 PM

Share

ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮೂರನೇ ಹಂತದ ಲಾಕ್​ಡೌನ್​ ಘೋಷಿಸಿದ್ದಾರೆ. ವೈಜ್ಞಾನಿಕ ಕಾರಣ ಮತ್ತು ಸಂಗ್ರಹಿಸಿದ ದತ್ತಾಂಶಗಳನ್ನು ಮುಂದಿಟ್ಟುಕೊಂಡು ಮಾತು ಆರಂಭಿಸಿದ ಅಲ್ಲಿನ ಪ್ರಧಾನಿ ತಮ್ಮ ನಿಲುವಿನ ಹಿಂದಿರುವ ಉದ್ದೇಶವನ್ನು ಲಾಕ್​ಡೌನ್​ ಘೋಷಿಸುವ ವೇಳೆಯಲ್ಲಿಯೇ ಸ್ಪಷ್ಟಪಡಿಸಿದ್ದಾರೆ.

ಕಳೆದ ಒಂದು ವಾರದ ಅವಧಿಯಲ್ಲಿ ಬ್ರಿಟನ್​ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಶೇ.20ರಷ್ಟು ಏರಿಕೆ ಕಂಡಿದೆ. ಕೊರೊನಾ ಮೊದಲ ಅಲೆ ಉತ್ತುಂಗಕ್ಕೇರಿದ್ದಾಗ ದಾಖಲಾಗುತ್ತಿದ್ದ ಸಾವಿನ ಪ್ರಮಾಣ ಮತ್ತೆ ಮರುಕಳಿಸುತ್ತಿದ್ದು, ಪ್ರತಿನಿತ್ಯ ಸುಮಾರು 1 ಸಾವಿರ ಜನ ಸಾವಿಗೀಡಾಗುತ್ತಿದ್ದಾರೆ. ಇದು ನಮ್ಮನ್ನು ಮತ್ತೆ ಅಪಾಯದಂಚಿಗೆ ದೂಡುತ್ತಿದೆ. ಆದ್ದರಿಂದ ಮೂರನೇ ಹಂತದ ಲಾಕ್​ಡೌನ್​ ಸದ್ಯದ ಅನಿವಾರ್ಯತೆ ಎಂದು ಬೋರಿಸ್​ ಜಾನ್ಸನ್​ ದಾಖಲೆಗಳ ಸಮೇತ ವಿವರಣೆ ನೀಡಿದ್ದಾರೆ.

ಬ್ರಿಟನ್​ನ ಆಸ್ಪತ್ರೆಗಳು ಕೊರೊನಾ ಆರಂಭವಾದ ಮೇಲೆ ಇದೇ ಮೊದಲ ಬಾರಿಗೆ ಅತಿಹೆಚ್ಚು ಒತ್ತಡಕ್ಕೆ ಸಿಲುಕಿವೆ. ಈಗ ಆಸ್ಪತ್ರೆಗೆ ತೆರಳುತ್ತಿರುವ ಸೋಂಕಿತರ ಸಂಖ್ಯೆ ಏಪ್ರಿಲ್​ ತಿಂಗಳ ಅಂಕಿ ಅಂಶಗಳನ್ನೂ ಮೀರಿಸುವಂತಿದೆ. ಮೊದಲ ಅಲೆ ಮುಗಿಯುವಾಗ ದಾಖಲಾಗುತ್ತಿದ್ದ ಸೋಂಕಿತರಿಗಿಂತ ಶೇ.40ರಷ್ಟು ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್​ 29ರಂದು ಸುಮಾರು 80 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಇದು ದೇಶದ ಮಟ್ಟಿಗೆ ಹೊಸ ದಾಖಲೆಯಾಗಿದೆ. ಇದೇ ರೀತಿ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಹೋದರೆ ರಾಷ್ಟ್ರೀಯ ಆರೋಗ್ಯ ಸೇವಾ ಸಮಿತಿಯೂ ಪರಿಸ್ಥಿತಿ ನಿಭಾಯಿಸುವುದು ಕಷ್ಟ ಎಂದು ತಿಳಿಸಿದೆ. ಆದ್ದರಿಂದ ಸೋಂಕು ಹರಡುವಿಕೆ ತಡೆಗಟ್ಟಲು ನಾವು ಲಾಕ್​ಡೌನ್​ ನಿಯಮಗಳನ್ನು ಪಾಲಿಸಲೇಬೇಕು ಎಂದು ಮನವಿ ಮಾಡಿರುವ ಬೋರಿಸ್​ ವೈಜ್ಞಾನಿಕ ದಾಖಲೆ ಮತ್ತು ದತ್ತಾಂಶಗಳನ್ನಿಟ್ಟುಕೊಂಡು ಗಂಭೀರತೆಯನ್ನು ವಿವರಿಸಲು ಪ್ರಯತ್ನಿಸಿದ್ದಾರೆ.

ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್​ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್‌

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?