AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

ಕಳೆದ ಒಂದು ವಾರದ ಅವಧಿಯಲ್ಲಿ ಬ್ರಿಟನ್​ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಶೇ.20ರಷ್ಟು ಏರಿಕೆ ಕಂಡಿದೆ. ಕೊರೊನಾ ಮೊದಲ ಅಲೆ ಉತ್ತುಂಗಕ್ಕೇರಿದ್ದಾಗ ದಾಖಲಾಗುತ್ತಿದ್ದ ಸಾವಿನ ಪ್ರಮಾಣ ಮತ್ತೆ ಮರುಕಳಿಸುತ್ತಿದ್ದು, ಪ್ರತಿನಿತ್ಯ ಸುಮಾರು 1 ಸಾವಿರ ಜನ ಸಾವಿಗೀಡಾಗುತ್ತಿದ್ದಾರೆ.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​
ಬ್ರಿಟನ್​​ ಪ್ರಧಾನಿ ಬೋರಿಸ್​ ಜಾನ್ಸನ್​
Skanda
| Edited By: ಸಾಧು ಶ್ರೀನಾಥ್​|

Updated on: Jan 05, 2021 | 1:10 PM

Share

ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮೂರನೇ ಹಂತದ ಲಾಕ್​ಡೌನ್​ ಘೋಷಿಸಿದ್ದಾರೆ. ವೈಜ್ಞಾನಿಕ ಕಾರಣ ಮತ್ತು ಸಂಗ್ರಹಿಸಿದ ದತ್ತಾಂಶಗಳನ್ನು ಮುಂದಿಟ್ಟುಕೊಂಡು ಮಾತು ಆರಂಭಿಸಿದ ಅಲ್ಲಿನ ಪ್ರಧಾನಿ ತಮ್ಮ ನಿಲುವಿನ ಹಿಂದಿರುವ ಉದ್ದೇಶವನ್ನು ಲಾಕ್​ಡೌನ್​ ಘೋಷಿಸುವ ವೇಳೆಯಲ್ಲಿಯೇ ಸ್ಪಷ್ಟಪಡಿಸಿದ್ದಾರೆ.

ಕಳೆದ ಒಂದು ವಾರದ ಅವಧಿಯಲ್ಲಿ ಬ್ರಿಟನ್​ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಶೇ.20ರಷ್ಟು ಏರಿಕೆ ಕಂಡಿದೆ. ಕೊರೊನಾ ಮೊದಲ ಅಲೆ ಉತ್ತುಂಗಕ್ಕೇರಿದ್ದಾಗ ದಾಖಲಾಗುತ್ತಿದ್ದ ಸಾವಿನ ಪ್ರಮಾಣ ಮತ್ತೆ ಮರುಕಳಿಸುತ್ತಿದ್ದು, ಪ್ರತಿನಿತ್ಯ ಸುಮಾರು 1 ಸಾವಿರ ಜನ ಸಾವಿಗೀಡಾಗುತ್ತಿದ್ದಾರೆ. ಇದು ನಮ್ಮನ್ನು ಮತ್ತೆ ಅಪಾಯದಂಚಿಗೆ ದೂಡುತ್ತಿದೆ. ಆದ್ದರಿಂದ ಮೂರನೇ ಹಂತದ ಲಾಕ್​ಡೌನ್​ ಸದ್ಯದ ಅನಿವಾರ್ಯತೆ ಎಂದು ಬೋರಿಸ್​ ಜಾನ್ಸನ್​ ದಾಖಲೆಗಳ ಸಮೇತ ವಿವರಣೆ ನೀಡಿದ್ದಾರೆ.

ಬ್ರಿಟನ್​ನ ಆಸ್ಪತ್ರೆಗಳು ಕೊರೊನಾ ಆರಂಭವಾದ ಮೇಲೆ ಇದೇ ಮೊದಲ ಬಾರಿಗೆ ಅತಿಹೆಚ್ಚು ಒತ್ತಡಕ್ಕೆ ಸಿಲುಕಿವೆ. ಈಗ ಆಸ್ಪತ್ರೆಗೆ ತೆರಳುತ್ತಿರುವ ಸೋಂಕಿತರ ಸಂಖ್ಯೆ ಏಪ್ರಿಲ್​ ತಿಂಗಳ ಅಂಕಿ ಅಂಶಗಳನ್ನೂ ಮೀರಿಸುವಂತಿದೆ. ಮೊದಲ ಅಲೆ ಮುಗಿಯುವಾಗ ದಾಖಲಾಗುತ್ತಿದ್ದ ಸೋಂಕಿತರಿಗಿಂತ ಶೇ.40ರಷ್ಟು ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್​ 29ರಂದು ಸುಮಾರು 80 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಇದು ದೇಶದ ಮಟ್ಟಿಗೆ ಹೊಸ ದಾಖಲೆಯಾಗಿದೆ. ಇದೇ ರೀತಿ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಹೋದರೆ ರಾಷ್ಟ್ರೀಯ ಆರೋಗ್ಯ ಸೇವಾ ಸಮಿತಿಯೂ ಪರಿಸ್ಥಿತಿ ನಿಭಾಯಿಸುವುದು ಕಷ್ಟ ಎಂದು ತಿಳಿಸಿದೆ. ಆದ್ದರಿಂದ ಸೋಂಕು ಹರಡುವಿಕೆ ತಡೆಗಟ್ಟಲು ನಾವು ಲಾಕ್​ಡೌನ್​ ನಿಯಮಗಳನ್ನು ಪಾಲಿಸಲೇಬೇಕು ಎಂದು ಮನವಿ ಮಾಡಿರುವ ಬೋರಿಸ್​ ವೈಜ್ಞಾನಿಕ ದಾಖಲೆ ಮತ್ತು ದತ್ತಾಂಶಗಳನ್ನಿಟ್ಟುಕೊಂಡು ಗಂಭೀರತೆಯನ್ನು ವಿವರಿಸಲು ಪ್ರಯತ್ನಿಸಿದ್ದಾರೆ.

ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್​ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್‌

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ