AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​

ಕಳೆದ ಒಂದು ವಾರದ ಅವಧಿಯಲ್ಲಿ ಬ್ರಿಟನ್​ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಶೇ.20ರಷ್ಟು ಏರಿಕೆ ಕಂಡಿದೆ. ಕೊರೊನಾ ಮೊದಲ ಅಲೆ ಉತ್ತುಂಗಕ್ಕೇರಿದ್ದಾಗ ದಾಖಲಾಗುತ್ತಿದ್ದ ಸಾವಿನ ಪ್ರಮಾಣ ಮತ್ತೆ ಮರುಕಳಿಸುತ್ತಿದ್ದು, ಪ್ರತಿನಿತ್ಯ ಸುಮಾರು 1 ಸಾವಿರ ಜನ ಸಾವಿಗೀಡಾಗುತ್ತಿದ್ದಾರೆ.

ಲಾಕ್​ಡೌನ್​ ನಿರ್ಧಾರಕ್ಕೆ ದಾಖಲೆಗಳ ಸಮೇತ ಕಾರಣ ನೀಡಿದ ಬೋರಿಸ್​ ಜಾನ್ಸನ್​
ಬ್ರಿಟನ್​​ ಪ್ರಧಾನಿ ಬೋರಿಸ್​ ಜಾನ್ಸನ್​
Skanda
| Edited By: |

Updated on: Jan 05, 2021 | 1:10 PM

Share

ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮೂರನೇ ಹಂತದ ಲಾಕ್​ಡೌನ್​ ಘೋಷಿಸಿದ್ದಾರೆ. ವೈಜ್ಞಾನಿಕ ಕಾರಣ ಮತ್ತು ಸಂಗ್ರಹಿಸಿದ ದತ್ತಾಂಶಗಳನ್ನು ಮುಂದಿಟ್ಟುಕೊಂಡು ಮಾತು ಆರಂಭಿಸಿದ ಅಲ್ಲಿನ ಪ್ರಧಾನಿ ತಮ್ಮ ನಿಲುವಿನ ಹಿಂದಿರುವ ಉದ್ದೇಶವನ್ನು ಲಾಕ್​ಡೌನ್​ ಘೋಷಿಸುವ ವೇಳೆಯಲ್ಲಿಯೇ ಸ್ಪಷ್ಟಪಡಿಸಿದ್ದಾರೆ.

ಕಳೆದ ಒಂದು ವಾರದ ಅವಧಿಯಲ್ಲಿ ಬ್ರಿಟನ್​ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಶೇ.20ರಷ್ಟು ಏರಿಕೆ ಕಂಡಿದೆ. ಕೊರೊನಾ ಮೊದಲ ಅಲೆ ಉತ್ತುಂಗಕ್ಕೇರಿದ್ದಾಗ ದಾಖಲಾಗುತ್ತಿದ್ದ ಸಾವಿನ ಪ್ರಮಾಣ ಮತ್ತೆ ಮರುಕಳಿಸುತ್ತಿದ್ದು, ಪ್ರತಿನಿತ್ಯ ಸುಮಾರು 1 ಸಾವಿರ ಜನ ಸಾವಿಗೀಡಾಗುತ್ತಿದ್ದಾರೆ. ಇದು ನಮ್ಮನ್ನು ಮತ್ತೆ ಅಪಾಯದಂಚಿಗೆ ದೂಡುತ್ತಿದೆ. ಆದ್ದರಿಂದ ಮೂರನೇ ಹಂತದ ಲಾಕ್​ಡೌನ್​ ಸದ್ಯದ ಅನಿವಾರ್ಯತೆ ಎಂದು ಬೋರಿಸ್​ ಜಾನ್ಸನ್​ ದಾಖಲೆಗಳ ಸಮೇತ ವಿವರಣೆ ನೀಡಿದ್ದಾರೆ.

ಬ್ರಿಟನ್​ನ ಆಸ್ಪತ್ರೆಗಳು ಕೊರೊನಾ ಆರಂಭವಾದ ಮೇಲೆ ಇದೇ ಮೊದಲ ಬಾರಿಗೆ ಅತಿಹೆಚ್ಚು ಒತ್ತಡಕ್ಕೆ ಸಿಲುಕಿವೆ. ಈಗ ಆಸ್ಪತ್ರೆಗೆ ತೆರಳುತ್ತಿರುವ ಸೋಂಕಿತರ ಸಂಖ್ಯೆ ಏಪ್ರಿಲ್​ ತಿಂಗಳ ಅಂಕಿ ಅಂಶಗಳನ್ನೂ ಮೀರಿಸುವಂತಿದೆ. ಮೊದಲ ಅಲೆ ಮುಗಿಯುವಾಗ ದಾಖಲಾಗುತ್ತಿದ್ದ ಸೋಂಕಿತರಿಗಿಂತ ಶೇ.40ರಷ್ಟು ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದು ಅತ್ಯಂತ ಅಪಾಯಕಾರಿ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ಡಿಸೆಂಬರ್​ 29ರಂದು ಸುಮಾರು 80 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಇದು ದೇಶದ ಮಟ್ಟಿಗೆ ಹೊಸ ದಾಖಲೆಯಾಗಿದೆ. ಇದೇ ರೀತಿ ಸೋಂಕಿತರ ಪ್ರಮಾಣದಲ್ಲಿ ಏರಿಕೆಯಾಗುತ್ತಾ ಹೋದರೆ ರಾಷ್ಟ್ರೀಯ ಆರೋಗ್ಯ ಸೇವಾ ಸಮಿತಿಯೂ ಪರಿಸ್ಥಿತಿ ನಿಭಾಯಿಸುವುದು ಕಷ್ಟ ಎಂದು ತಿಳಿಸಿದೆ. ಆದ್ದರಿಂದ ಸೋಂಕು ಹರಡುವಿಕೆ ತಡೆಗಟ್ಟಲು ನಾವು ಲಾಕ್​ಡೌನ್​ ನಿಯಮಗಳನ್ನು ಪಾಲಿಸಲೇಬೇಕು ಎಂದು ಮನವಿ ಮಾಡಿರುವ ಬೋರಿಸ್​ ವೈಜ್ಞಾನಿಕ ದಾಖಲೆ ಮತ್ತು ದತ್ತಾಂಶಗಳನ್ನಿಟ್ಟುಕೊಂಡು ಗಂಭೀರತೆಯನ್ನು ವಿವರಿಸಲು ಪ್ರಯತ್ನಿಸಿದ್ದಾರೆ.

ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್​ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್‌

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ