AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಪ್ರಕರಣ ಹೆಚ್ಚಳ: ಪ್ರಯಾಣ ಕಾರಿಡಾರ್ ಪಟ್ಟಿಯಿಂದ ಯುಎಇ ತೆಗೆದುಹಾಕಿದ ಬ್ರಿಟನ್

ಮಂಗಳವಾರ ಬೆಳಗ್ಗಿನ ಜಾವ 4 ಗಂಟೆಗೆ ಯುಎಇಯಿಂದ ಇಂಗ್ಲೆಂಡ್, ವೇಲ್ಸ್, ಸ್ಕಾಟ್ ಲೆಂಡ್ ಮತ್ತು ಉತ್ತರ ಐರ್​ಲೆಂಡ್​ಗೆ ಬಂದಿಳಿದ ಪ್ರಯಾಣಿಕರು 10 ದಿನಗಳ ಕಾಲ ಸ್ವಯಂ ಐಸೋಲೇಟ್ ಆಗಬೇಕು ಎಂದು ಸಾರಿಗೆ ಸಂಪರ್ಕ ಇಲಾಖೆ ನಿರ್ದೇಶಿಸಿದೆ.

ಕೋವಿಡ್ ಪ್ರಕರಣ ಹೆಚ್ಚಳ: ಪ್ರಯಾಣ ಕಾರಿಡಾರ್ ಪಟ್ಟಿಯಿಂದ ಯುಎಇ ತೆಗೆದುಹಾಕಿದ ಬ್ರಿಟನ್
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Jan 12, 2021 | 4:25 PM

Share

ಲಂಡನ್: ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಯುಕ್ತ ಅರಬ್ ರಾಷ್ಟ್ರವನ್ನು (ಯುಎಇ) ತಮ್ಮ ಪ್ರಯಾಣ ಕಾರಿಡಾರ್ ಪಟ್ಟಿಯಿಂದ (ಎರಡು ದೇಶಗಳ ನಡುವಿನ ವಿಮಾನಯಾನ) ತಗೆದು ಹಾಕಿರುವುದಾಗಿ ಬ್ರಿಟನ್ ಸಾರಿಗೆ ಸಂಪರ್ಕ ಇಲಾಖೆ ಹೇಳಿದೆ.

ಮಂಗಳವಾರ ಮುಂಜಾನೆ 4 ಗಂಟೆಗೆ ಯುಎಇಯಿಂದ ಇಂಗ್ಲೆಂಡ್, ವೇಲ್ಸ್, ಸ್ಕಾಟ್​ಲೆಂಡ್ ಮತ್ತು ಉತ್ತರ ಐರ್​ಲೆಂಡ್​ಗೆ ಬಂದಿಳಿದ ಪ್ರಯಾಣಿಕರು 10 ದಿನಗಳ ಕಾಲ ಸ್ವಯಂ ಐಸೋಲೇಟ್ ಆಗಬೇಕು ಎಂದು ಸಾರಿಗೆ ಸಂಪರ್ಕ ಇಲಾಖೆ ನಿರ್ದೇಶಿಸಿದೆ. ಕಳೆದ ಒಂದು ವಾರದಲ್ಲಿ ಯುಎಇಯಲ್ಲಿ ಶೇ. 52ರಷ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ.

ಬ್ರಿಟನ್ ನ ಪ್ರಯಾಣ ಕಾರಿಡಾರ್ ಪಟ್ಟಿಯಿಂದ ತಕ್ಷಣವೇ ಯುಎಇಯನ್ನು ತೆಗೆದುಹಾಕಬೇಕು ಎಂದು ಬ್ರಿಟಿಷ್ ಸಾರಿಗೆ ಸಚಿವ ಗ್ರಾಂಟ್ ಶಪ್ಸ್ ಟ್ವೀಟ್ ಮಾಡಿದ್ದಾರೆ .

ಈಗಿರುವ ನಿಯಮಗಳ ಪ್ರಕಾರ ಯುಎಇ ಸೇರಿದಂತೆ ಇತರ ದೇಶಗಳಿಂದ ಬರುವ ಪ್ರಯಾಣಿಕರು ಇಂಗ್ಲೆಂಡ್ ಅಥವಾ ಸ್ಕಾಟ್ಲೆಂಡ್ ಗೆ ಪ್ರಯಾಣ ಬೆಳೆಸುವುದಕ್ಕಿಂತ ಮೂರು ದಿನ ಮುನ್ನ ಕೋವಿಡ್ ಪರೀಕ್ಷೆಗೊಳಗಾಗಿ ರೋಗ ಇಲ್ಲ ಎಂಬ ಪರೀಕ್ಷಾ ವರದಿ ಸಲ್ಲಿಸಬೇಕು.

ಒಂದೆಡೆ ಕೋವಿಡ್​ನಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಕಾಡುತ್ತಿತ್ತು. ಈ ಹೊತ್ತಲ್ಲಿ ಬ್ರಿಟನ್ ಕೋವಿಡ್ ಲಸಿಕೆ ಪ್ರಕ್ರಿಯೆ ಆರಂಭಿಸಿದ್ದು, ಇದು ಸಮಯದ ವಿರುದ್ಧದ ಓಟ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದರು.

ಯುಎಇನಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದ್ದು, ಕಳೆದ ವಾರ ಅಬುದಾಬಿಯಲ್ಲಿ ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್ V ಕೋವಿಡ್ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದಿದೆ.

ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್​ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್‌

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ