Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudha murthy: ಅತ್ತೆಗೆ ಪದ್ಮಭೂಷಣ ಪ್ರಶಸ್ತಿ, ಸಂತಸ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್

ಬ್ರಿಟನ್​ ಪ್ರಧಾನಿ ಹಾಗೂ ಸುಧಾ ಮೂರ್ತಿಯ ಅವರ ಮಗಳ ಗಂಡ ರಿಷಿ ಸುನಕ್( ಅಳಿಯ) ತಮ್ಮ ಅತ್ತೆಯರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದಕ್ಕೆ ಹರ್ಷ ವ್ಯಕ್ತಪಡಿಸಿದರು.

Sudha murthy: ಅತ್ತೆಗೆ ಪದ್ಮಭೂಷಣ ಪ್ರಶಸ್ತಿ, ಸಂತಸ ವ್ಯಕ್ತಪಡಿಸಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್
ಸುಧಾ ಮೂರ್ತಿ, ರಿಷಿ ಸುನಕ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 07, 2023 | 6:33 PM

ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ಕರ್ನಾಟಕದ ತಾಯಿ ಎಂದೇ ಪ್ರಸಿದ್ಧಿಯನ್ನು ಪಡೆದ ಸುಧಾಮೂರ್ತಿ (Sudha murthy) ಅವರು ಏ.5ರಂದು ರಾಷ್ಟ್ರಪತಿ ಭವನದಲ್ಲಿ ಸ್ವೀಕರಿಸಿದರು. ಇದೀಗ ಈ ಬಗ್ಗೆ ಬ್ರಿಟನ್​ ಪ್ರಧಾನಿ ಹಾಗೂ ಸುಧಾ ಮೂರ್ತಿಯ ಅವರ ಮಗಳ ಗಂಡ ರಿಷಿ ಸುನಕ್( ಅಳಿಯ) ತಮ್ಮ ಅತ್ತೆಯರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದಕ್ಕೆ ಹರ್ಷ ವ್ಯಕ್ತಪಡಿಸಿದರು. ಬ್ರಿಟನ್ ಪ್ರಧಾನಿ ಅವರ ಪತ್ನಿ ಅಕ್ಷತಾ ಮೂರ್ತಿ ಅವರ ಇನ್‌ಸ್ಟಾಗ್ರಾಮ್​​ನಲ್ಲಿ ಈ ಪೋಸ್ಟ್‌ ಹಂಚಿಕೊಂಡಿದ್ದಾರೆ. ರಿಷಿ ಸುನಕ್ ಹೆಮ್ಮೆಯ ದಿನ ಎಂದು ಹೇಳಿದರು. 72 ವರ್ಷದ ಸುಧಾ ಮೂರ್ತಿ ಅವರು ಸಮಾಜ ಸೇವೆಗೆ ನೀಡಿದ ಕೊಡುಗೆಗಾಗಿ ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿತ್ತು. ಕರ್ನಾಟಕದ ಜನಪ್ರಿಯ ಲೇಖಕಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಅವರು ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಪತಿ, ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಕೂಡ ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪತಿ ಭವನದ ಭವ್ಯ ದರ್ಬಾರ್ ಹಾಲ್‌ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಮುಂದಿನ ಸಾಲಿನಲ್ಲಿ ಸುಧಾಮೂರ್ತಿ ಅವರ ಪುತ್ರಿ ಅಕ್ಷತಾ ಇತರ ಗಣ್ಯರೊಂದಿಗೆ ಕುಳಿತಿದ್ದರು. ನಿನ್ನೆ ನನ್ನ ತಾಯಿಯವರು ಸಾಮಾಜಿಕ ಕಾರ್ಯದಲ್ಲಿ ಅವರ ಕೊಡುಗೆಗಳನ್ನು ಗುರುತಿಸಿ, ನವದೆಹಲಿಯಲ್ಲಿ ನಡೆದ ಪದ್ಮ ಪ್ರಶಸ್ತಿ 2023 ಸಮಾರಂಭದಲ್ಲಿ (ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು) ಭಾರತದ ರಾಷ್ಟ್ರಪತಿಗಳಿಂದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸುವುದನ್ನು ನಾನು ಹೆಮ್ಮೆಯಿಂದ ನೋಡಿದೆ ಎಂದು ಅಕ್ಷತಾ ಅವರ ಪೋಸ್ಟ್​​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Sudha Murthy: ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರ ವೀಕ್ಷಿಸಿ ಸುಧಾ ಮೂರ್ತಿ ಹೇಳಿದ್ದೇನು? ಇಲ್ಲಿದೆ ನೋಡಿ

ನನ್ನ ಅಮ್ಮ ಈ ಸಮಾಜಕ್ಕೆ ಮಾಡಿ ಕೆಲಸಕ್ಕೆ ಇದು ದೊಡ್ಡ ಗೌರವ, ಅವರು ಮಾಡಿದ ಕೆಲಸದ ಬಗ್ಗೆ ಅವರಿಗೆ ಇಂದು ತೃಪ್ತಿ ತಂದಿರಬಹುದು. ನಮಗೆಲ್ಲ ಅವರು ದೊಡ್ಡ ಸ್ಫೂರ್ತಿ. 25 ವರ್ಷಗಳ ಕಾಲ ಪರೋಪಕಾರಿ ಸಂಸ್ಥೆಯನ್ನು ಸ್ಥಾಪಿಸಿ ಅನೇಕ ಬಡಕುಟುಂಬಗಳಿಗೆ ಸೇವೆ ನೀಡಿದ್ದಾರೆ. ಹಲವಾರು ಸಾಕ್ಷರತಾ ಕೆಲಸಗಳಿಗೆ ಧನಸಹಾಯ, ನೈಸರ್ಗಿಕ ವಿಕೋಪಗಳಿಂದ ಜೀವನ ಕಳೆದುಕೊಂಡ ಜನರಿಗೆ ಅಗತ್ಯ ಸಹಾಯ, ದೇಶದ ಅನೇಕ ಕಡೆಗಳಲ್ಲಿ ಸುತ್ತಿ, ಬೇರೆ ಬೇರೆ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ ಎನ್ನುವುದೇ ದೊಡ್ಡ ಹೆಮ್ಮೆ ಎಂದು ಹೇಳಿದ್ದಾರೆ. ತನ್ನ ತಾಯಿ ಹೆಸರು ಗಳಿಸಲು ಬದುಕುವುದಿಲ್ಲ, ನನ್ನ ಪೋಷಕರು ನನ್ನ ಸಹೋದರ, ನನ್ನಲ್ಲಿ ತುಂಬಿದ ಮೌಲ್ಯಗಳು, ಕಠಿಣ ಪರಿಶ್ರಮ, ನಮ್ರತೆ, ನಿಸ್ವಾರ್ಥತೆ ಅದು ಯಾವತ್ತೂ ನನ್ನ ಎಲ್ಲ ಕೆಲಸದಲ್ಲೂ ಇರುತ್ತದೆ ಎಂದು ಹೇಳಿದರು.

Published On - 6:28 pm, Fri, 7 April 23

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ