AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೋಂಕು ತಗುಲಿಸಿ, ನಂತರ ಲಸಿಕೆ ಪ್ರಯೋಗ: ಅಪಾಯಕಾರಿ ಪ್ರಯೋಗಕ್ಕೆ ಮುಂದಾದ ಬ್ರಿಟನ್​

ಇಡೀ ಜಗತ್ತು ಕೊರೊನಾದ ಆರ್ಭಟದಿಂದ ನಲುಗಿ ಹೋಗಿದ್ದರೆ ಇತ್ತ ಬ್ರಿಟಿಷ್ ವಿಜ್ಞಾನಿಗಳು ವೈರಸ್​ನ ಬಗ್ಗುಬಡಿಯಲು ಕೊರೊನಾ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೌದು, ಆರೋಗ್ಯವಂತ ವ್ಯಕ್ತಿಗಳಿಗೆ ಮೊದಲು ಕೊರೊನಾ ಸೋಂಕು ತಗುಲಿಸಿ ನಂತರ ಅವರ ಮೇಲೆ ಲಸಿಕೆ ಪ್ರಯೋಗ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ. Human Challenge Covid Trial: ಜಗತ್ತಿನಲ್ಲಿ, ಇದೇ ಮೊದಲ ಬಾರಿ ಇಂಥ ಪ್ರಯತ್ನ ನಡೆಯುತ್ತಿದೆ. ಅಂದ ಹಾಗೆ, ಈ ಸೋಂಕು ತಗುಲಿಸಿ ಚಿಕಿತ್ಸೆ ಲಸಿಕೆ ಪರೀಕ್ಷೆ ನಡೆಸುವ ಪ್ರಯೋಗ ಜನವರಿಯಿಂದ ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. […]

ಕೋವಿಡ್ ಸೋಂಕು ತಗುಲಿಸಿ, ನಂತರ ಲಸಿಕೆ ಪ್ರಯೋಗ: ಅಪಾಯಕಾರಿ ಪ್ರಯೋಗಕ್ಕೆ ಮುಂದಾದ ಬ್ರಿಟನ್​
KUSHAL V
| Edited By: |

Updated on: Oct 21, 2020 | 12:37 PM

Share

ಇಡೀ ಜಗತ್ತು ಕೊರೊನಾದ ಆರ್ಭಟದಿಂದ ನಲುಗಿ ಹೋಗಿದ್ದರೆ ಇತ್ತ ಬ್ರಿಟಿಷ್ ವಿಜ್ಞಾನಿಗಳು ವೈರಸ್​ನ ಬಗ್ಗುಬಡಿಯಲು ಕೊರೊನಾ ಲಸಿಕೆ ಪ್ರಯೋಗಕ್ಕೆ ಮುಂದಾಗಿದ್ದಾರೆ. ಹೌದು, ಆರೋಗ್ಯವಂತ ವ್ಯಕ್ತಿಗಳಿಗೆ ಮೊದಲು ಕೊರೊನಾ ಸೋಂಕು ತಗುಲಿಸಿ ನಂತರ ಅವರ ಮೇಲೆ ಲಸಿಕೆ ಪ್ರಯೋಗ ಮಾಡಲು ವಿಜ್ಞಾನಿಗಳು ಮುಂದಾಗಿದ್ದಾರೆ.

Human Challenge Covid Trial: ಜಗತ್ತಿನಲ್ಲಿ, ಇದೇ ಮೊದಲ ಬಾರಿ ಇಂಥ ಪ್ರಯತ್ನ ನಡೆಯುತ್ತಿದೆ. ಅಂದ ಹಾಗೆ, ಈ ಸೋಂಕು ತಗುಲಿಸಿ ಚಿಕಿತ್ಸೆ ಲಸಿಕೆ ಪರೀಕ್ಷೆ ನಡೆಸುವ ಪ್ರಯೋಗ ಜನವರಿಯಿಂದ ಆರಂಭಿಸಲು ಯೋಜನೆ ರೂಪಿಸಲಾಗುತ್ತಿದೆ. ಇದರ ಅಂಗವಾಗಿ, ಪ್ರಯೋಗಕ್ಕೆ ಒಳಗಾಗುವ ವ್ಯಕ್ತಿಗಳ ಮೂಗಿನೊಳಗೆ ವೈರಸ್ ಹರಿಯ ಬಿಡಲಾಗುತ್ತದೆ. ಬಳಿಕ, ಸೋಂಕಿತರನ್ನು ಲಂಡನ್‌ನ ರಾಯಲ್‌ ಫ್ರೀ ಹಾಸ್ಪಿಟಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ. ಜೊತೆಗೆ, ನಿತ್ಯವೂ ಕೆಲವು ಗಂಟೆಗಳ ಅಂತರದಲ್ಲಿ ಸೋಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಇದೇ ರೀತಿ, ಎರಡರಿಂದ ಮೂರು ವಾರಗಳವರೆಗೂ ಪರೀಕ್ಷೆ ಮುಂದುವರಿಸಲಾಗುತ್ತದೆ. ಬಳಿಕ ಲಸಿಕೆ ಬೀರುವ ಪರಿಣಾಮ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಈ ‘ಹ್ಯೂಮನ್ ಚಾಲೆಂಜ್‌ ಟ್ರಯಲ್‌’ ಬಗ್ಗೆ ಅಮೇರಿಕಾ ಆತಂಕ ವ್ಯಕ್ತಪಡಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಪ್ರಯೋಗ ಎಂದು ಅಮೆರಿಕದ ಸಂಶೋಧಕರು ಹೇಳಿದ್ದಾರೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್