AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವರ್ಷದಿಂದ ಕೋಮಾದಲ್ಲಿರುವ ಬ್ರಿಟಿಷ್ ಯುವಕ; ಆತನಿಗೆ 2 ಬಾರಿ ಕೋವಿಡ್ ತಗುಲಿದ್ದೇ ಗೊತ್ತಿಲ್ಲ

Coronavirus Pandemic: ಬರ್ಟನ್​ನ ಸೆಂಟ್ರಲ್ ಇಂಗ್ಲಿಷ್ ಟೌನ್​ನಲ್ಲಿ 2020 ಮಾರ್ಚ್ 1ರಂದು ಸಂಭವಿಸಿದ ಅಪಘಾತದಲ್ಲಿ 19ರ ಹರೆಯದ ಜೋಸೆಫ್ ಫ್ಲಾವಿಲ್ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು.

1 ವರ್ಷದಿಂದ ಕೋಮಾದಲ್ಲಿರುವ ಬ್ರಿಟಿಷ್ ಯುವಕ; ಆತನಿಗೆ 2 ಬಾರಿ ಕೋವಿಡ್ ತಗುಲಿದ್ದೇ ಗೊತ್ತಿಲ್ಲ
ಜೋಸೆಫ್ ಫ್ಲಾವಿಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: ಸಾಧು ಶ್ರೀನಾಥ್​|

Updated on: Feb 09, 2021 | 12:53 PM

Share

ನಾಟಿಂಗ್​ಹ್ಯಾಮ್ : ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಬ್ರಿಟನ್​ನ ಯುವಕ ಜೋಸೆಫ್ ಫ್ಲಾವಿಲ್ ಒಂದು ವರ್ಷದ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಬಾರಿ ಕೊರೊನಾ ಸೋಂಕು ತಗಲಿದ್ದರೂ ಸಾಂಕ್ರಾಮಿಕ ರೋಗದ ಬಗ್ಗೆ ಆತನಿಗೆ ಅರಿವು ಇಲ್ಲ ಅಂತಾರೆ ಇವರ ಕುಟುಂಬದವರು.

ಬರ್ಟನ್​ನ ಸೆಂಟ್ರಲ್ ಇಂಗ್ಲಿಷ್ ಟೌನ್​ನಲ್ಲಿ 2020 ಮಾರ್ಚ್ 1ರಂದು ಸಂಭವಿಸಿದ ಅಪಘಾತದಲ್ಲಿ 19ರ ಹರೆಯದ ಜೋಸೆಫ್ ಫ್ಲಾವಿಲ್ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಅಷ್ಟು ಹೊತ್ತಿಗೆ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ಬ್ರಿಟನ್ ರಾಷ್ಟ್ರಾದ್ಯಂತ ಲಾಕ್​ಡೌನ್ ಘೋಷಿಸಿತ್ತು.

ಕೊರೊನಾವೈರಸ್ ಲಾಕ್​ಡೌನ್ ನಿರ್ಬಂಧಗಳಿಂದಾಗಿ ಜೋಸೆಫ್ ಅವರ ಜತೆ ಕುಟುಂಬದ ಸದಸ್ಯರಿಗೆ ಇರಲು ಸಾಧ್ಯವಾಗಲಿಲ್ಲ. ಅವರು ವಿಡಿಯೊ ಕರೆ ಮೂಲಕವೇ ಜೋಸೆಫ್ ಜತೆ ಮಾತನಾಡುತ್ತಿದ್ದರು. ಇತ್ತೀಚೆಗೆ ಜೋಸೆಫ್ ನಿಧಾನವಾಗಿ ಚೇತರಿಸುತ್ತಿದ್ದಾನೆ. ಅದು ಖುಷಿ ಕೊಡುವ ವಿಷಯ. ನಮ್ಮ ಮಾತುಗಳಿಗೆ ಆತ ಸ್ಪಂದಿಸುತ್ತಿದ್ದಾನೆ.

Joseph Flavill

ಜೋಸೆಫ್ ಫ್ಲಾವಿಲ್

ಜೋಸೆಫ್, ನಾವು ನಿನ್ನ ಜತೆ ಇರಲಾಗುವುದಿಲ್ಲ. ನೀನು ಸುರಕ್ಷಿತವಾಗಿದ್ದಿ ಎಂದು ಹೇಳುವಾಗ ಅವನು ಕಣ್ಣು ಮಿಟುಕಿಸಿ ಸ್ಪಂದಿಸುತ್ತಿದ್ದಾನೆ. ಒಂದು ಬಾರಿ ಕಣ್ಣು ಮಿಟುಕಿಸಿ ಹೌದು ಎಂದೂ, ಎರಡು ಬಾರಿ ಮಿಟುಕಿಸಿ ಇಲ್ಲ ಎಂದು ಉತ್ತರಿಸುತ್ತಿದ್ದಾನೆ ಎಂದು ಅವರ ಚಿಕ್ಕಮ್ಮ ಸ್ಯಾಲಿ ಫ್ಲಾವಿಲ್ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಲಾಕ್​ಡೌನ್​ಗೆ ಮೂರು ವಾರಗಳ ಮುಂಚೆ ಜೋಸೆಫ್ ಅಪಘಾತಕ್ಕೊಳಗಾಗಿದ್ದರು. ಕಳೆದ 11 ತಿಂಗಳಲ್ಲಿ ಬ್ರಿಟನ್​ ನಲ್ಲಿ ಕೋವಿಡ್ ರೋಗಿಗಳ ಸಂಖ್ಯೆ 40 ಲಕ್ಷವಾಗಿದ್ದು, 110,000 ಮಂದಿ ಸಾವಿಗೀಡಾಗಿದ್ದಾರೆ.

ಲಾಕ್​ಡೌನ್ ಬದುಕಿನ ಕಥೆಗಳನ್ನು ಜೋಸೆಫ್ ಅರ್ಥ ಮಾಡಿಕೊಳ್ಳಬಲ್ಲನೇ ಎಂಬುದು ನಮಗೆ ತಿಳಿದಿಲ್ಲ. ಆತ ಗುಣಮುಖವಾಗಿ ಸಹಜ ಸ್ಥಿತಿಗೆ ಬರಲು ಇನ್ನೂ ಹಲವು ದಿನಗಳು ಬೇಕಾಗುತ್ತವೆ ಎಂದಿದ್ದಾರೆ ಸ್ಯಾಲಿ ಫ್ಲಾವಿಲ್. ಕ್ರೀಡಾಪಟುವಾಗಿದ್ದ ಜೋಸೆಫ್ ಈಗ ಸೆಂಟ್ರಲ್ ಇಂಗ್ಲೆಂಡ್​ನ ಸ್ಟೋಕ್ ಆನ್ ಟ್ರೆಂಟ್​ನಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಕುಟುಂಬದವರು josephsjourney.co.uk ಮೂಲಕ ಚಿಕಿತ್ಸೆಗಾಗಿ ಹಣ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ.

ಬ್ರಿಟನ್​ನಲ್ಲಿ ಮೂರನೇ ಕೊರೊನಾ ಲಸಿಕೆಗೂ ಸಿಕ್ತು ಅನುಮತಿ.. ಮಾರುಕಟ್ಟೆಗೆ ಬರಲಿದೆ ಮಾಡೆರ್ನಾ

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು