Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus accident Pakistan: ಶುಭ ಶುಕ್ರವಾರ ಯಾತ್ರಾತ್ರಿಗಳ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿ ಸಾವು

ಶುಭ ಶುಕ್ರವಾರದ ಈ ದುರ್ಘಟನೆಗೂ ಮುನ್ನ ಇತ್ತೀಚೆಗೆ ಎರಡು ಎಕ್ಸ್​ಪ್ರೆಸ್​ ಟ್ರೈನ್​ಗಳು ಅಪಘಾತಕ್ಕೆ ತುತ್ತಾಗಿದ್ದವು. ಅದರಲ್ಲಿ 63 ಮಂದಿ ಅಸುನೀಗಿದ್ದರು. ಕಳಪೆ ಗುಣಮಟ್ಟದ ರಸ್ತೆಗಳು, ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಮತ್ತು ವಾಹನಗಳನ್ನು ಸಕಾಲಕ್ಕೆ ದುರಸ್ತಿಗೊಳಿಸದಿರುವುದು ಪಾಕಿಸ್ತಾನದಲ್ಲಿ ಮಾರಕ ಅಪಘಾತಗಳಿಗೆ ಕಾರಣವಾಗಿದೆ ಎನ್ನಲಾಗಿದೆ.

Bus accident Pakistan: ಶುಭ ಶುಕ್ರವಾರ ಯಾತ್ರಾತ್ರಿಗಳ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ, 20ಕ್ಕೂ ಹೆಚ್ಚು ಮಂದಿ ಸಾವು
Bus accident in Pakistan: ಶುಭ ಶುಕ್ರವಾರ ಪಾಕಿಸ್ತಾನದಲ್ಲಿ ಯಾತ್ರಾತ್ರಿಗಳ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ, 20 ಕ್ಕೂ ಹೆಚ್ಚು ಮಂದಿ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 11, 2021 | 4:16 PM

ಪಾಕಿಸ್ತಾನದಲ್ಲಿ ಯಾತ್ರಾತ್ರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ ಹೊಡೆದು 20 ಕ್ಕೂ ಹೆಚ್ಚು ಮಂದಿ ಕೊನೆಯುಸಿರೆಳೆದಿದ್ದಾರೆ. 50 ಕ್ಕೂ ಹೆಚ್ಚು ಪ್ರವಾಸಿಗರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಂಧ್ ಪ್ರಾಂತ್ಯದ ವಾಯವ್ಯ ಪ್ರದೇಶದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರಿಂದ ತುಂಬಿತುಳುಕುತ್ತಿತ್ತು. ಬಸ್​ ಮೇಲ್ಭಾಗದಲ್ಲೂ ಜನ ಹತ್ತಿ ಕುಳಿತಿದ್ದರು. ನತದೃಷ್ಟ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ಎಲ್ಲರಿಗೂ ಗಾಯಗಳಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸೂಫಿ ಸಂತನ ಕ್ಷೇತ್ರ ದರ್ಶನ (Sufi saint shrine) ಮುಗಿಸಿಕೊಂಡು ಬಸ್​ ವಾಪಸಾಗುತ್ತಿತ್ತು. ಬಲೂಚಿಸ್ತಾನದ (Balochistan province) ಖಜ್ದರ್​ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿ ಹೊಡೆದಿದೆ. ಬಸ್​ ಅತಿ ವೇಗವಾಗಿ ಚಲಿಸುತ್ತಾ ಇದ್ದುದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಬಸ್​ ಚಾಲಕನ ಅಜಾಗರೂಕತೆ ಮಿತಿ ಮೀರಿತ್ತು. ಅನೇಕ ಬಾರಿ ಎಚ್ಚರಿಸಿದ್ದೆವು. ಆದರೂ ಆತ ಜೋರಾಗಿ ಸಂಗೀತ ಹಾಕಿಕೊಂಡು ಬಸ್​ ಚಲಾಯಿಸುತ್ತಿದ್ದ ಎಂದು ಬದುಕುಳಿದ ಪ್ರಯಾಣಿಕರೊಬ್ಬರು ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಗೆ ತಿಳಿಸಿದ್ದಾರೆ.

ಶುಭ ಶುಕ್ರವಾರದ ಈ ದುರ್ಘಟನೆಗೂ ಮುನ್ನ ಇತ್ತೀಚೆಗೆ ಎರಡು ಎಕ್ಸ್​ಪ್ರೆಸ್​ ಟ್ರೈನ್​ಗಳು ಅಪಘಾತಕ್ಕೆ ತುತ್ತಾಗಿದ್ದವು. ಅದರಲ್ಲಿ 63 ಮಂದಿ ಅಸುನೀಗಿದ್ದರು. ದುರಾದೃಷ್ಟಕರ ಘಟನೆಯಲ್ಲಿ ಮೊನ್ನೆ ಸೋಮವಾರ ಬೆಳಗ್ಗೆ ಪಾಕಿಸ್ತಾನದಲ್ಲಿ ಒಂದು ರೈಲು ಹಳಿ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಎಕ್ಸ್​ಪ್ರೆಸ್ ಟ್ರೈನ್​ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 63 ಮಂದಿ ಮೃತಪಟ್ಟಿದ್ದರು. ಲಾಹೋರ್ ಕಡೆಗೆ ಹೊರಟಿದ್ದ ಸರ್​ ಸಯ್ಯದ್ ಎಕ್ಸ್​ಪ್ರೆಸ್ ಟ್ರೈನ್ (Sir Syed Express), ಮಿಲಾತ್​ ಎಕ್ಸ್​ಪ್ರೆಸ್ ಟ್ರೈನ್ ನಡುವೆ ಈ ಅಪಘಾತವಾಗಿತ್ತು. ಘೋಟ್ಕಿ (Ghotki) ಸಮೀಪ ರೇತಿ ಮತ್ತು ದಹಾರ್ಕಿ ರೈಲ್ವೆ ನಿಲ್ದಾಣಗಳ ಮಧ್ಯೆ ಈ ಅಪಘಾತವಾಗಿತ್ತು. ಮಿಲಾತ್​ ಎಕ್ಸ್​ಪ್ರೆಸ್ (Millat Express) ಟ್ರೈನ್ ಕರಾಚಿಯಿಂದ ಸರಗೋಢಾ ಕಡೆಗೆ ತೆರಳುತ್ತಿತ್ತು. ಇನ್ನೂ 50 ಮಂದಿಗೆ ಗಾಯಗಳಾಗಿವೆ.

ಕಳಪೆ ಗುಣಮಟ್ಟದ ರಸ್ತೆಗಳು, ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಮತ್ತು ವಾಹನಗಳನ್ನು ಸಕಾಲಕ್ಕೆ ದುರಸ್ತಿಗೊಳಿಸದಿರುವುದು ಪಾಕಿಸ್ತಾನದಲ್ಲಿ ಮಾರಕ ಅಪಘಾತಗಳಿಗೆ ಕಾರಣವಾಗಿದೆ ಎನ್ನಲಾಗಿದೆ.

(Bus accident at sindh province in Balochistan province 20 pilgrims returning from Sufi saint shrine died)

Pakistan train accident: ಪಾಕಿಸ್ತಾನದಲ್ಲಿ ರೈಲುಗಳ ಡಿಕ್ಕಿ, ದುರಾದೃಷ್ಟಕರ ಘಟನೆಯಲ್ಲಿ ಕನಿಷ್ಠ 30 ಮಂದಿ ಸಾವು- ಚಿತ್ರಗಳಿವೆ

Published On - 4:06 pm, Fri, 11 June 21

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ