ಸಿಖ್ ಯಾತ್ರಾರ್ಥಿಗಳಿದ್ದ ಬಸ್​ಗೆ ರೈಲು ಡಿಕ್ಕಿ, 19 ಮಂದಿ ದುರ್ಮರಣ

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಬಸ್​ ಹಾಗೂ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 19 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಾಕ್​ನ ಶೇಖುಪುರದಲ್ಲಿ ಸಿಖ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್​ಗೆ ರೈಲು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ 19 ಮಂದಿ ಮೃತಪಟ್ಟಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾಚಿಯಿಂದ ಲಾಹೋರ್​ಗೆ ರೈಲು ಹೊರಡುತ್ತಿತ್ತು. ಫಾರೂಕಾಬಾದ್ ಸಮೀಪ ಹಳಿ ದಾಟುತ್ತಿದ್ದಾಗ ಬಸ್​ಗೆ ಟೈನ್ ಡಿಕ್ಕಿಯೊಡೆದಿದೆ. ಗುರುದ್ವಾರದಿಂದ ಸಿಖ್ ಯಾತ್ರಿಗಳು ಮರಳುತ್ತಿದ್ದರು ಎನ್ನಲಾಗಿದೆ.

ಸಿಖ್ ಯಾತ್ರಾರ್ಥಿಗಳಿದ್ದ ಬಸ್​ಗೆ ರೈಲು ಡಿಕ್ಕಿ, 19 ಮಂದಿ ದುರ್ಮರಣ
ಸಾಧು ಶ್ರೀನಾಥ್​

Updated on: Jul 03, 2020 | 6:04 PM

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಬಸ್​ ಹಾಗೂ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 19 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಾಕ್​ನ ಶೇಖುಪುರದಲ್ಲಿ ಸಿಖ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್​ಗೆ ರೈಲು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಅಪಘಾತದಲ್ಲಿ 19 ಮಂದಿ ಮೃತಪಟ್ಟಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾಚಿಯಿಂದ ಲಾಹೋರ್​ಗೆ ರೈಲು ಹೊರಡುತ್ತಿತ್ತು. ಫಾರೂಕಾಬಾದ್ ಸಮೀಪ ಹಳಿ ದಾಟುತ್ತಿದ್ದಾಗ ಬಸ್​ಗೆ ಟೈನ್ ಡಿಕ್ಕಿಯೊಡೆದಿದೆ. ಗುರುದ್ವಾರದಿಂದ ಸಿಖ್ ಯಾತ್ರಿಗಳು ಮರಳುತ್ತಿದ್ದರು ಎನ್ನಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us