California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು
ವಿಮಾನ ಪತನImage Credit source: ZeeNews
Follow us
|

Updated on:Jul 09, 2023 | 8:23 AM

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಲಾಸ್ ಏಂಜಲೀಸ್​ನಿಂದ ಆಗ್ನೇಯಕ್ಕೆ 130 ಕಿ.ಮೀ ದೂರದಲ್ಲಿರುವ ಮುರಿಯೇಟಾದಲ್ಲಿ ಸಂಜೆ 4.15ರ ಸುಮಾರಿಗೆ ಅವಘಡ ಸಂಭವಿಸಿದೆ.

ಈ ಅಪಘಾತದಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಒಂದು ಎಕರೆಯಲ್ಲಿ ನೆಟ್ಟಿದ್ದ ಗಿಡಗಳು ಕೂಡ ಸುಟ್ಟು ಭಸ್ಮವಾಗಿವೆ. ಈ ವೇಳೆ ವಿಮಾನದಲ್ಲಿರುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಅಮೆರಿಕದ ಫೆಡರಲ್ ಸಿವಿಲ್ ಏವಿಯೇಷನ್ ​​​​ಡಿಪಾರ್ಟ್ಮೆಂಟ್ ಈ ವಿಮಾನ ಅಪಘಾತದ ಕುರಿತು ರಾಷ್ಟ್ರೀಯ ಸಾರಿಗೆ ಭದ್ರತಾ ಮಂಡಳಿ ತಂಡದೊಂದಿಗೆ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: Plane Crash: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಟೇಕ್ ಆಪ್ ಆದ ಕೂಡಲೇ ವಿಮಾನ ಪತನ, ಓರ್ವ ಸಾವು, ಮೂವರಿಗೆ ಗಾಯ

ವರದಿಯ ಪ್ರಕಾರ, ಸೆಸ್ನಾ C550 ವಿಮಾನವು ಲಾಸ್ ವೇಗಾಸ್‌ನಿಂದ ಕ್ಯಾಲಿಫೋರ್ನಿಯಾಗೆ ಹೋಗುತ್ತಿತ್ತು. ವಿಮಾನವು ಲಾಸ್ ವೇಗಾಸ್‌ನ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಜಾನೆ 3.15 ಕ್ಕೆ ಟೇಕಾಫ್ ಆಗಿದ್ದು, ಕ್ಯಾಲಿಫೋರ್ನಿಯಾದ ಮುರ್ರಿಯೆಟಾ ನಗರದ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು.

ಇದಕ್ಕೂ ಮುನ್ನ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ಮಂಗಳವಾರ ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಪತನಗೊಂಡು ಓರ್ವ ಪ್ರಯಾಣಿಕ ಮೃತಪಟ್ಟು ಇತರ ಮೂವರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:23 am, Sun, 9 July 23

ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ