AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು
ವಿಮಾನ ಪತನImage Credit source: ZeeNews
ನಯನಾ ರಾಜೀವ್
|

Updated on:Jul 09, 2023 | 8:23 AM

Share

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಲಾಸ್ ಏಂಜಲೀಸ್​ನಿಂದ ಆಗ್ನೇಯಕ್ಕೆ 130 ಕಿ.ಮೀ ದೂರದಲ್ಲಿರುವ ಮುರಿಯೇಟಾದಲ್ಲಿ ಸಂಜೆ 4.15ರ ಸುಮಾರಿಗೆ ಅವಘಡ ಸಂಭವಿಸಿದೆ.

ಈ ಅಪಘಾತದಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಒಂದು ಎಕರೆಯಲ್ಲಿ ನೆಟ್ಟಿದ್ದ ಗಿಡಗಳು ಕೂಡ ಸುಟ್ಟು ಭಸ್ಮವಾಗಿವೆ. ಈ ವೇಳೆ ವಿಮಾನದಲ್ಲಿರುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಅಮೆರಿಕದ ಫೆಡರಲ್ ಸಿವಿಲ್ ಏವಿಯೇಷನ್ ​​​​ಡಿಪಾರ್ಟ್ಮೆಂಟ್ ಈ ವಿಮಾನ ಅಪಘಾತದ ಕುರಿತು ರಾಷ್ಟ್ರೀಯ ಸಾರಿಗೆ ಭದ್ರತಾ ಮಂಡಳಿ ತಂಡದೊಂದಿಗೆ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: Plane Crash: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಟೇಕ್ ಆಪ್ ಆದ ಕೂಡಲೇ ವಿಮಾನ ಪತನ, ಓರ್ವ ಸಾವು, ಮೂವರಿಗೆ ಗಾಯ

ವರದಿಯ ಪ್ರಕಾರ, ಸೆಸ್ನಾ C550 ವಿಮಾನವು ಲಾಸ್ ವೇಗಾಸ್‌ನಿಂದ ಕ್ಯಾಲಿಫೋರ್ನಿಯಾಗೆ ಹೋಗುತ್ತಿತ್ತು. ವಿಮಾನವು ಲಾಸ್ ವೇಗಾಸ್‌ನ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಜಾನೆ 3.15 ಕ್ಕೆ ಟೇಕಾಫ್ ಆಗಿದ್ದು, ಕ್ಯಾಲಿಫೋರ್ನಿಯಾದ ಮುರ್ರಿಯೆಟಾ ನಗರದ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು.

ಇದಕ್ಕೂ ಮುನ್ನ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ಮಂಗಳವಾರ ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಪತನಗೊಂಡು ಓರ್ವ ಪ್ರಯಾಣಿಕ ಮೃತಪಟ್ಟು ಇತರ ಮೂವರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:23 am, Sun, 9 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ