AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ.

California Plane Crash: ಕ್ಯಾಲಿಫೋರ್ನಿಯಾದಲ್ಲಿ ವಿಮಾನ ಪತನ, 6 ಮಂದಿ ಸಾವು
ವಿಮಾನ ಪತನImage Credit source: ZeeNews
ನಯನಾ ರಾಜೀವ್
|

Updated on:Jul 09, 2023 | 8:23 AM

Share

ಕ್ಯಾಲಿಫೋರ್ನಿಯಾ ವಿಮಾನ ನಿಲ್ದಾಣದ ಬಳಿ ವಿಮಾನ ಪತನ(Plane Crash)ಗೊಂಡಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಲಾಸ್ ಏಂಜಲೀಸ್​ನಿಂದ ಆಗ್ನೇಯಕ್ಕೆ 130 ಕಿ.ಮೀ ದೂರದಲ್ಲಿರುವ ಮುರಿಯೇಟಾದಲ್ಲಿ ಸಂಜೆ 4.15ರ ಸುಮಾರಿಗೆ ಅವಘಡ ಸಂಭವಿಸಿದೆ.

ಈ ಅಪಘಾತದಲ್ಲಿ ಸಂಭವಿಸಿದ ಬೆಂಕಿಯಿಂದಾಗಿ ಒಂದು ಎಕರೆಯಲ್ಲಿ ನೆಟ್ಟಿದ್ದ ಗಿಡಗಳು ಕೂಡ ಸುಟ್ಟು ಭಸ್ಮವಾಗಿವೆ. ಈ ವೇಳೆ ವಿಮಾನದಲ್ಲಿರುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಅಮೆರಿಕದ ಫೆಡರಲ್ ಸಿವಿಲ್ ಏವಿಯೇಷನ್ ​​​​ಡಿಪಾರ್ಟ್ಮೆಂಟ್ ಈ ವಿಮಾನ ಅಪಘಾತದ ಕುರಿತು ರಾಷ್ಟ್ರೀಯ ಸಾರಿಗೆ ಭದ್ರತಾ ಮಂಡಳಿ ತಂಡದೊಂದಿಗೆ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: Plane Crash: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಟೇಕ್ ಆಪ್ ಆದ ಕೂಡಲೇ ವಿಮಾನ ಪತನ, ಓರ್ವ ಸಾವು, ಮೂವರಿಗೆ ಗಾಯ

ವರದಿಯ ಪ್ರಕಾರ, ಸೆಸ್ನಾ C550 ವಿಮಾನವು ಲಾಸ್ ವೇಗಾಸ್‌ನಿಂದ ಕ್ಯಾಲಿಫೋರ್ನಿಯಾಗೆ ಹೋಗುತ್ತಿತ್ತು. ವಿಮಾನವು ಲಾಸ್ ವೇಗಾಸ್‌ನ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಜಾನೆ 3.15 ಕ್ಕೆ ಟೇಕಾಫ್ ಆಗಿದ್ದು, ಕ್ಯಾಲಿಫೋರ್ನಿಯಾದ ಮುರ್ರಿಯೆಟಾ ನಗರದ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು.

ಇದಕ್ಕೂ ಮುನ್ನ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ವಿಮಾನವೊಂದು ಮಂಗಳವಾರ ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಪತನಗೊಂಡು ಓರ್ವ ಪ್ರಯಾಣಿಕ ಮೃತಪಟ್ಟು ಇತರ ಮೂವರು ಗಾಯಗೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:23 am, Sun, 9 July 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ