AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Flood: ಕ್ಯಾಲಿಫೋರ್ನಿಯಾದಲ್ಲಿ ಭಾರೀ ಪ್ರವಾಹ; ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕಳೆದ 2 ವಾರಗಳಲ್ಲಿ ಚಂಡಮಾರುತಕ್ಕೆ ಕ್ಯಾಲಿಫೋರ್ನಿಯಾದಲ್ಲಿ ಕನಿಷ್ಠ 19 ಸಾವುಗಳು ಸಂಭವಿಸಿದೆ. ಹಲವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

California Flood: ಕ್ಯಾಲಿಫೋರ್ನಿಯಾದಲ್ಲಿ ಭಾರೀ ಪ್ರವಾಹ; ಸಾವಿನ ಸಂಖ್ಯೆ 19ಕ್ಕೆ ಏರಿಕೆ
ಕ್ಯಾಲಿಫೋರ್ನಿಯಾದಲ್ಲಿ ಪ್ರವಾಹ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 17, 2023 | 9:31 AM

Share

ನವದೆಹಲಿ: ಕ್ಯಾಲಿಫೋರ್ನಿಯಾದಲ್ಲಿ (California Flood) ಭಾರೀ ಪ್ರವಾಹದಿಂದ 19 ಜನ ಮೃತಪಟ್ಟಿದ್ದಾರೆ. ಇಲ್ಲಿ ಮತ್ತೊಮ್ಮೆ ಭಾರೀ ಮಳೆ, ಗಾಳಿ ಮತ್ತು ಹಿಮ ಆವರಿಸಿದೆ. ಇದರಿಂದಾಗಿ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಮತ್ತು ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸಿಯೆರಾ ನೆವಾಡಾದಾದ್ಯಂತ ಭಾರೀ ಹಿಮಪಾತ ಉಂಟಾಗಿದೆ. ಇಂಟರ್‌ಸ್ಟೇಟ್ 80, ಸ್ಯಾನ್ ಫ್ರಾನ್ಸಿಸ್ಕೊ ​​ಕೊಲ್ಲಿ ಪ್ರದೇಶದಿಂದ ಲೇಕ್ ತಾಹೋ ಸ್ಕೀ ರೆಸಾರ್ಟ್‌ಗಳವರೆಗಿನ ಪ್ರಮುಖ ಹೆದ್ದಾರಿಯಲ್ಲಿ ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ 2 ವಾರಗಳಲ್ಲಿ ಚಂಡಮಾರುತಕ್ಕೆ ಕ್ಯಾಲಿಫೋರ್ನಿಯಾದಲ್ಲಿ ಕನಿಷ್ಠ 19 ಸಾವುಗಳು ಸಂಭವಿಸಿದೆ. ಹಲವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮರಗಳು ಕೂಡ ನೀರಿನಲ್ಲಿ ಮುಳುಗಿ ಹೋಗಿವೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಬರ್ಕ್ಲಿ ಸೆಂಟ್ರಲ್ ಸಿಯೆರಾ ಸ್ನೋ ಲ್ಯಾಬ್ ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದು, ಶುಕ್ರವಾರದಿಂದ 49.6 ಇಂಚುಗಳು ಹಿಮಪಾತವಾಗಿದೆ.

ಇದನ್ನೂ ಓದಿ: South Africa Church: ದಕ್ಷಿಣ ಆಫ್ರಿಕಾದ ಚರ್ಚ್​ ಪ್ರಾರ್ಥನೆ ವೇಳೆ ಪ್ರವಾಹ; 9 ಜನ ಸಾವು, 8 ಮಂದಿ ನಾಪತ್ತೆ

ಹೆಚ್ಚಿನ ತಾಹೋ ಪ್ರದೇಶವನ್ನು ಒಳಗೊಂಡಂತೆ ಕೇಂದ್ರ ಸಿಯೆರಾಕ್ಕೆ ಹಿಮಪಾತದ ಎಚ್ಚರಿಕೆಯನ್ನು ನೀಡಲಾಯಿತು. ಡಿಸೆಂಬರ್ ಅಂತ್ಯದಿಂದ ಕ್ಯಾಲಿಫೋರ್ನಿಯಾದಲ್ಲಿ ಬಿರುಗಾಳಿಗಳ ಸುರಿಮಳೆ ಮತ್ತು ಹಿಮಪಾತವಾಗಿದೆ. ಉತ್ತರ ಕ್ಯಾಲಿಫೋರ್ನಿಯಾದ ಕೆಲವು ಭಾಗಗಳು ವಾರದ ಮಧ್ಯದಲ್ಲಿ ಹೆಚ್ಚಿನ ಮಳೆ ಉಂಟಾಗಲಿದೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಸೋಮವಾರ ಬಿಸಿಲು ಉಂಟಾಗಿದೆ.

ಬರ್ಕ್ಲಿಯ ಕೊಲ್ಲಿಯಾದ್ಯಂತ ಸೋಮವಾರ ಗುಡ್ಡ ಕುಸಿದು, 10 ಮನೆಗಳಿಗೆ ಹಾನಿಯಾಗಿದೆ. ಆದರೆ, ಯಾವುದೇ ಗಾಯಗಳ ವರದಿಯಾಗಿಲ್ಲ. ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಕ್ಯಾಲಿಫೋರ್ನಿಯಾದಲ್ಲಿ ಒಂದು ದೊಡ್ಡ ದುರಂತ ಉಂಟಾಗಿದೆ ಎಂದು ಘೋಷಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!