AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ಫೋನಲ್ಲೇ ಕೊವಿಡ್ ಪರೀಕ್ಷೆ.. ಏನಿದು ವಿಜ್ಞಾನಿಗಳ ಹೊಸ ಆವಿಷ್ಕಾರ?

ಸ್ಮಾರ್ಟ್​ಫೋನ್ ಮೊಬೈಲಿನ ಕ್ಯಾಮೆರಾ ಸಹಾಯದಿಂದ ಕೊವಿಡ್​ ಸೋಂಕು ಪತ್ತೆ ಹಚ್ಚುವ ಹೊಸ ತಂತ್ರಜ್ಞಾನ ಆವಿಷ್ಕರಿಸಲು ಕ್ಯಾಲಿಫೋರ್ನಿಯಾ ಹಾಗೂ ಸ್ಯಾನ್​ಪ್ರಾನ್ಸಿಸ್ಕೋ ವಿಜ್ಞಾನಿಗಳ ತಂಡ ಸಿದ್ಧತೆ ನಡೆಸುತ್ತಿದೆ.

ಸ್ಮಾರ್ಟ್​ಫೋನಲ್ಲೇ ಕೊವಿಡ್ ಪರೀಕ್ಷೆ.. ಏನಿದು ವಿಜ್ಞಾನಿಗಳ ಹೊಸ ಆವಿಷ್ಕಾರ?
ಪ್ರಾತಿನಿಧಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 07, 2020 | 12:42 PM

ಕೊರೊನಾ ಪರೀಕ್ಷೆಗೆ ಒಳಪಟ್ಟ ನಂತರ ಅದರ ಫಲಿತಾಂಶಕ್ಕಾಗಿ ಕಾಯುವುದೇ ಜನರಿಗೆ ದೊಡ್ಡ ತಲೆನೋವು. ಸೋಂಕು ತಗುಲಿದೆಯೋ, ಇಲ್ಲವೋ ಎಂದು ತಕ್ಷಣ ತಿಳಿಯುವುದಿಲ್ಲ ಎಂಬುದು ಒಂದೆಡೆಯಾದರೆ ಬಂದಿರುವ ಫಲಿತಾಂಶ ನಿಖರವಿದೆಯಾ ಎಂಬ ಅನುಮಾನ ಇನ್ನೊಂದೆಡೆ.

ಕೊರೊನಾ ಪರೀಕ್ಷೆಗಳಲ್ಲಿನ ಸಾಧಕ, ಬಾಧಕಗಳನ್ನು ಪಟ್ಟಿ ಮಾಡಿಕೊಂಡಿರುವ ವಿಜ್ಞಾನಿಗಳು ಹೊಸ ತಂತ್ರಜ್ಞಾನವನ್ನು ಬಳಸಲು ಮುಂದಾಗಿದ್ದಾರೆ. ಪರೀಕ್ಷೆಗೆ ಒಳಪಟ್ಟ 15ರಿಂದ 30 ನಿಮಿಷದೊಳಗೆ ಸಂಬಂಧಿತ ವ್ಯಕ್ತಿಯ ಮೊಬೈಲಿನಲ್ಲೇ ಫಲಿತಾಂಶ ಲಭಿಸುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಸ್ಮಾರ್ಟ್​ಫೋನ್​ ಕ್ಯಾಮೆರಾ ಸಹಾಯದಿಂದ ಪರೀಕ್ಷೆ ಸ್ಮಾರ್ಟ್​ಫೋನ್ ಮೊಬೈಲಿನ ಕ್ಯಾಮೆರಾ ಸಹಾಯದಿಂದ ಕೊವಿಡ್​ ಸೋಂಕು ಪತ್ತೆ ಹಚ್ಚುವ ಹೊಸ ತಂತ್ರಜ್ಞಾನ ಆವಿಷ್ಕರಿಸಲು ಕ್ಯಾಲಿಫೋರ್ನಿಯಾ ಹಾಗೂ ಸ್ಯಾನ್​ಪ್ರಾನ್ಸಿಸ್ಕೋ ವಿಜ್ಞಾನಿಗಳ ತಂಡ ಸಿದ್ಧತೆ ನಡೆಸುತ್ತಿದೆ. ವಿಜ್ಞಾನಿಗಳ ಈ ಯತ್ನ ಯಶಸ್ವಿಯಾದರೆ ಕೊವಿಡ್​ ನಿಯಂತ್ರಣಕ್ಕೆ ಬಹುದೊಡ್ಡ ಅಸ್ತ್ರ ಸಿಕ್ಕಂತೆಯೇ ಆಗುತ್ತದೆ ಎಂದು ಹಲವು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸದ್ಯ ಬಳಸಲಾಗುತ್ತಿರುವ PCR ಮಾದರಿ ಪರೀಕ್ಷೆಯಲ್ಲಿ ಗಂಟಲು ದ್ರವವನ್ನು RNA ಸ್ವರೂಪದಿಂದ DNAಗೆ ಬದಲಾಯಿಸಬೇಕು. ಈ ಕೆಲಸಕ್ಕೆ ಪರಿಣಿತರೇ ಬೇಕಾಗಿದ್ದು ಬಹಳಷ್ಟು ಸಮಯ ತಗಲುತ್ತದೆ. ಆದ್ದರಿಂದ ವಿಜ್ಞಾನಿಗಳು ಸ್ಮಾರ್ಟ್​ಫೋನ್ ಆಧರಿತ CRISPR ತಂತ್ರಜ್ಞಾನವನ್ನು ಕಂಡುಹಿಡಿದರೆ ಕಡಿಮೆ ಸಮಯದಲ್ಲಿ ಫಲಿತಾಂಶ ಪಡೆಯಬಹುದು ಎನ್ನಲಾಗುತ್ತಿದೆ.

ಕೊರೊನಾ ಲಸಿಕೆಯ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ತಡೆಯಲು ಫೇಸ್​ಬುಕ್​ನಿಂದ ಹೊಸ ಅಸ್ತ್ರ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ