Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ಹತ್ಯೆಗೆ ಕರೆ; ಗುರುದ್ವಾರದ ಪೋಸ್ಟರ್ ತೆಗೆಯಲು ಆದೇಶ

Canada Gurudwara Poster controversy: ಕೆನಡಾದ ಸರೇ ನಗರದ ಗುರುದ್ವಾರವೊಂದರಲ್ಲಿ ಅಂಟಿಸಲಾದ ಪೋಸ್ಟರ್​ಗಳು ಕೆನಡಾ ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿವೆ. ಮೂವರು ಭಾರತೀಯ ರಾಜತಾಂತ್ರಿಕ ಅಧಿಕಾರಿಗಳನ್ನು ಕೊಲ್ಲುವಂತೆ ಈ ಪೋಸ್ಟರ್​ಗಳಲ್ಲಿ ಕರೆ ನೀಡಲಾಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಸರೇ ನಗರದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಈ ಪೋಸ್ಟರ್​ಗಳನ್ನು ತೆಗೆಯುವಂತೆ ಗುರುದ್ವಾರಕ್ಕೆ ಆದೇಶಿಸಿದ್ದಾರೆ. ಹಾಗೆಯೇ, ಧ್ವನಿವರ್ಧಕ ಬಳಸಿ ಯಾವುದೇ ಉಗ್ರತ್ವದ ಪ್ರಕಟಣೆಗಳನ್ನು ಮಾಡದಂತೆಯೂ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ಹತ್ಯೆಗೆ ಕರೆ; ಗುರುದ್ವಾರದ ಪೋಸ್ಟರ್ ತೆಗೆಯಲು ಆದೇಶ
ಗುರುದ್ವಾರದಲ್ಲಿ ಪೋಸ್ಟರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 24, 2023 | 3:55 PM

ಕೆನಡಾ, ಸೆಪ್ಟೆಂಬರ್ 24: ಭಾರತ ಮತ್ತು ಕೆನಡಾ ಮಧ್ಯೆ ಸಂಬಂಧಕ್ಕೆ ಹಿನ್ನಡೆ ಬರುತ್ತಿರುವ ಹೊತ್ತಿನಲ್ಲೇ ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ಖಲಿಸ್ತಾನೀಗಳು ಕೆನಡಾ ನೆಲದಲ್ಲಿ ಉಗ್ರ ನಿಲುವು ಮುಂದುವರಿಸಿದ್ದಾರೆ. ಕೆನಡಾದ ಸರೇ ನಗರದ ಗುರುದ್ವಾರವೊಂದರಲ್ಲಿ ಅಂಟಿಸಲಾದ ಪೋಸ್ಟರ್​ಗಳು ಕೆನಡಾ ಅಧಿಕಾರಿಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿವೆ. ಮೂವರು ಭಾರತೀಯ ರಾಜತಾಂತ್ರಿಕ ಅಧಿಕಾರಿಗಳನ್ನು (Indian diplomats) ಕೊಲ್ಲುವಂತೆ ಈ ಪೋಸ್ಟರ್​ಗಳಲ್ಲಿ ಕರೆ ನೀಡಲಾಗಿತ್ತು. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಸರೇ ನಗರದ (Canada Surrey city) ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಈ ಪೋಸ್ಟರ್​ಗಳನ್ನು ತೆಗೆಯುವಂತೆ ಗುರುದ್ವಾರಕ್ಕೆ ಆದೇಶಿಸಿದ್ದಾರೆ. ಹಾಗೆಯೇ, ಧ್ವನಿವರ್ಧಕ ಬಳಸಿ ಯಾವುದೇ ಉಗ್ರತ್ವದ ಪ್ರಕಟಣೆಗಳನ್ನು ಮಾಡದಂತೆಯೂ ಸೂಚಿಸಿದ್ದಾರೆ ಎಂದು ನ್ಯೂಸ್18 ವಾಹಿನಿ ವರದಿ ಮಾಡಿದೆ.

ಕೆನಡಾದ ಈ ಗುರುದ್ವಾರದಲ್ಲಿ ಪೋಸ್ಟರ್ ಹಾಕಿದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ವಸ್ತುವಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಈ ಕ್ರಮ ಕೈಗೊಳ್ಳದೇ ವಿಧಿ ಇರಲಿಲ್ಲ. ಕೆನಡಾದಲ್ಲಿ ಖಲಿಸ್ತಾನೀ ಚಟುವಟಿಕೆ ತೀವ್ರವಾಗಿದ್ದು, ಭಾರತೀಯ ಸಮುದಾಯಗಳ (ಹಿಂದೂ ಧರ್ಮೀಯರು) ಮೇಲೆ ಮತ್ತು ಸ್ಥಳಗಳ ಮೇಲೆ ಇತ್ತೀಚೆಗೆ ದಾಳಿ ಘಟನೆಗಳು ಹೆಚ್ಚಾಗಿವೆ. ಆದರೂ ಕೂಡ ಖಲಿಸ್ತಾನೀ ಬೆಂಬಲಿಗರನ್ನು ನಿಯಂತ್ರಿಸಲು ಕೆನಡಾ ಸರ್ಕಾರ ವಿಫಲವಾಗಿದೆ ಎಂಬ ಆರೋಪ ಇದೆ.

ಇದನ್ನೂ ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತು ಪ್ರಧಾನಿ ಟ್ರುಡೊ ಹೇಳಿಕೆಯ ಹಿಂದೆ ಗುಪ್ತಚರ: ಅಮೆರಿಕ ರಾಯಭಾರಿ

ಇದೇ ವಿಚಾರವಾಗಿ ಕೆನಡಾ ಸರ್ಕಾರ ವಿರುದ್ಧ ಭಾರತಕ್ಕೆ ಅಸಮಾಧಾನವೂ ಇತ್ತು. ಖಲಿಸ್ತಾನೀ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಜೂನ್ 18ರಂದು ಸರೆಯ ಗುರುದ್ವಾರದ ಹೊರಗೆ ಹತ್ಯೆಗೈಯಲಾಗಿತ್ತು. ಹಲವು ಭಾರತ ವಿರೋಧಿ ಕೃತ್ಯಗಳಲ್ಲಿ ಬೇಕಾಗಿದ್ದ ಈತನ ತಲೆದಂಡಕ್ಕೆ 10 ಲಕ್ಷ ರೂ ಬಹುಮಾನ ಇಡಲಾಗಿತ್ತು. ಈತನ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟ್​ಗಳ ಹಸ್ತ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಇತ್ತೀಚೆಗೆ ಗಂಭೀರ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದ್ದರು.

ಕೆನಡಾದ ಈ ನಿರ್ಧಾರಕ್ಕೆ ಪ್ರತಿಯಾಗಿ ಭಾರತವೂ ದೆಹಲಿಯಲ್ಲಿರುವ ಕೆನಡಾ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ. ಕೆನಡಿಯನ್ನರಿಗೆ ವೀಸಾ ಸೆವೆ ರದ್ದುಗೊಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ