AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಮದುವೆ ಆರತಕ್ಷತೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ಆರು ಮಂದಿಗೆ ಗಾಯ

ಕೆನಡಾದ ಒಟ್ಟಾವಾದಲ್ಲಿ ಮದುವೆ ಆರತಕ್ಷತೆ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ಕೆನಡಾದ ಒಟ್ಟಾವಾದಲ್ಲಿ ಮದುವೆ ಆರತಕ್ಷತೆ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಎರಡು ಮದುವೆಗಳು ನಡೆಯುತ್ತಿತ್ತು, ಹೊರಗೆ ಬಂದೂಕಿನ ಸದ್ದು ಕೇಳಿ, ಅತಿಥಿಗಳು ಓಡಲು ಆರಂಭಿಸಿದರು. ಶನಿವಾರ ರಾತ್ರಿ 10:21 ಗಂಟೆಗೆ (ಸ್ಥಳೀಯ ಕಾಲಮಾನ) ಸಂತ್ರಸ್ತರು ಒಟ್ಟಾವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಇನ್ಫಿನಿಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಮದುವೆಯ ಆರತಕ್ಷತೆ ನಡೆಯುತ್ತಿತ್ತು ಆ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ.

ಕೆನಡಾದಲ್ಲಿ ಮದುವೆ ಆರತಕ್ಷತೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ಆರು ಮಂದಿಗೆ ಗಾಯ
ಪೊಲೀಸ್
ನಯನಾ ರಾಜೀವ್
|

Updated on: Sep 04, 2023 | 8:12 AM

Share

ಕೆನಡಾದ ಒಟ್ಟಾವಾದಲ್ಲಿ ಮದುವೆ ಆರತಕ್ಷತೆ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಎರಡು ಮದುವೆಗಳು ನಡೆಯುತ್ತಿತ್ತು, ಹೊರಗೆ ಬಂದೂಕಿನ ಸದ್ದು ಕೇಳಿ, ಅತಿಥಿಗಳು ಓಡಲು ಆರಂಭಿಸಿದರು. ಶನಿವಾರ ರಾತ್ರಿ 10:21 ಗಂಟೆಗೆ (ಸ್ಥಳೀಯ ಕಾಲಮಾನ) ಸಂತ್ರಸ್ತರು ಒಟ್ಟಾವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಇನ್ಫಿನಿಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಮದುವೆಯ ಆರತಕ್ಷತೆ ನಡೆಯುತ್ತಿತ್ತು ಆ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ.

ಗುಂಡಿನ ದಾಳಿಯ ಕೆಲವು ಗಂಟೆಗಳ ನಂತರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಇಬ್ಬರು ಮೃತರು  26 ವರ್ಷದ ಸೈದ್ ಮೊಹಮ್ಮದ್ ಅಲಿ ಮತ್ತು 29 ವರ್ಷದ ಅಬ್ದಿಶಕುರ್ ಅಬ್ದಿ-ದಾಹಿರ್ — ಟೊರೊಂಟೊ ಮೂಲದವರು. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಆರು ಮಂದಿಗೆ ಪ್ರಾಣಾಪಾಯದಲ್ಲಿಲ್ಲ ಎಂದು ಒಟ್ಟಾವಾ ಪ್ಯಾರಾಮೆಡಿಕ್ ವಕ್ತಾರ ಮಾರ್ಕ್-ಆಂಟೊಯಿನ್ ಡೆಸ್ಚಾಂಪ್ಸ್ ಹೇಳಿದ್ದಾರೆ.

ಗುಂಡಿನ ದಾಳಿ ದ್ವೇಷ ಪ್ರೇರಿತವಾಗಿರಬಹುದು ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ, ತನಿಖೆ ನಡೆಯುತ್ತಿದೆ ಮತ್ತು ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು, ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆದಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಇಲ್ಲಿಯವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ, ಯಾರ ವಿವರವನ್ನೂ ನೀಡಿಲ್ಲ. ಗುಂಡಿನ ದಾಳಿ ಅಥವಾ ಶಂಕಿತರ ಬಗ್ಗೆ ಏನಾದರೂ ಮಾಹಿತಿ ಇದ್ದರೆ ತಮ್ಮನ್ನು ಸಂಪರ್ಕಿಸುವಂತೆ ಪೊಲೀಸರು ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.

ಕೆನಡಾದ ರಾಜಧಾನಿ ಒಟ್ಟಾವಾವು 1 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ, 2023ರಲ್ಲಿ 12 ಮಂದಿ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. 2009ರಿಂದ ಗುಂಡಿನ ದಾಳಿ ಶೇ.81ರಷ್ಟು ಹೆಚ್ಚಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್