ಕೆನಡಾದಲ್ಲಿ ಮದುವೆ ಆರತಕ್ಷತೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ಆರು ಮಂದಿಗೆ ಗಾಯ

ಕೆನಡಾದ ಒಟ್ಟಾವಾದಲ್ಲಿ ಮದುವೆ ಆರತಕ್ಷತೆ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ಕೆನಡಾದ ಒಟ್ಟಾವಾದಲ್ಲಿ ಮದುವೆ ಆರತಕ್ಷತೆ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಎರಡು ಮದುವೆಗಳು ನಡೆಯುತ್ತಿತ್ತು, ಹೊರಗೆ ಬಂದೂಕಿನ ಸದ್ದು ಕೇಳಿ, ಅತಿಥಿಗಳು ಓಡಲು ಆರಂಭಿಸಿದರು. ಶನಿವಾರ ರಾತ್ರಿ 10:21 ಗಂಟೆಗೆ (ಸ್ಥಳೀಯ ಕಾಲಮಾನ) ಸಂತ್ರಸ್ತರು ಒಟ್ಟಾವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಇನ್ಫಿನಿಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಮದುವೆಯ ಆರತಕ್ಷತೆ ನಡೆಯುತ್ತಿತ್ತು ಆ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ.

ಕೆನಡಾದಲ್ಲಿ ಮದುವೆ ಆರತಕ್ಷತೆ ವೇಳೆ ಗುಂಡಿನ ದಾಳಿ, ಇಬ್ಬರು ಸಾವು, ಆರು ಮಂದಿಗೆ ಗಾಯ
ಪೊಲೀಸ್
Follow us
|

Updated on: Sep 04, 2023 | 8:12 AM

ಕೆನಡಾದ ಒಟ್ಟಾವಾದಲ್ಲಿ ಮದುವೆ ಆರತಕ್ಷತೆ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಎರಡು ಮದುವೆಗಳು ನಡೆಯುತ್ತಿತ್ತು, ಹೊರಗೆ ಬಂದೂಕಿನ ಸದ್ದು ಕೇಳಿ, ಅತಿಥಿಗಳು ಓಡಲು ಆರಂಭಿಸಿದರು. ಶನಿವಾರ ರಾತ್ರಿ 10:21 ಗಂಟೆಗೆ (ಸ್ಥಳೀಯ ಕಾಲಮಾನ) ಸಂತ್ರಸ್ತರು ಒಟ್ಟಾವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಇನ್ಫಿನಿಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಮದುವೆಯ ಆರತಕ್ಷತೆ ನಡೆಯುತ್ತಿತ್ತು ಆ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ.

ಗುಂಡಿನ ದಾಳಿಯ ಕೆಲವು ಗಂಟೆಗಳ ನಂತರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಇಬ್ಬರು ಮೃತರು  26 ವರ್ಷದ ಸೈದ್ ಮೊಹಮ್ಮದ್ ಅಲಿ ಮತ್ತು 29 ವರ್ಷದ ಅಬ್ದಿಶಕುರ್ ಅಬ್ದಿ-ದಾಹಿರ್ — ಟೊರೊಂಟೊ ಮೂಲದವರು. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಆರು ಮಂದಿಗೆ ಪ್ರಾಣಾಪಾಯದಲ್ಲಿಲ್ಲ ಎಂದು ಒಟ್ಟಾವಾ ಪ್ಯಾರಾಮೆಡಿಕ್ ವಕ್ತಾರ ಮಾರ್ಕ್-ಆಂಟೊಯಿನ್ ಡೆಸ್ಚಾಂಪ್ಸ್ ಹೇಳಿದ್ದಾರೆ.

ಗುಂಡಿನ ದಾಳಿ ದ್ವೇಷ ಪ್ರೇರಿತವಾಗಿರಬಹುದು ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ, ತನಿಖೆ ನಡೆಯುತ್ತಿದೆ ಮತ್ತು ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು, ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಗುಂಡಿನ ದಾಳಿ ನಡೆದಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಇಲ್ಲಿಯವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ, ಯಾರ ವಿವರವನ್ನೂ ನೀಡಿಲ್ಲ. ಗುಂಡಿನ ದಾಳಿ ಅಥವಾ ಶಂಕಿತರ ಬಗ್ಗೆ ಏನಾದರೂ ಮಾಹಿತಿ ಇದ್ದರೆ ತಮ್ಮನ್ನು ಸಂಪರ್ಕಿಸುವಂತೆ ಪೊಲೀಸರು ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.

ಕೆನಡಾದ ರಾಜಧಾನಿ ಒಟ್ಟಾವಾವು 1 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ, 2023ರಲ್ಲಿ 12 ಮಂದಿ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. 2009ರಿಂದ ಗುಂಡಿನ ದಾಳಿ ಶೇ.81ರಷ್ಟು ಹೆಚ್ಚಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ