AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜ್ಜರ್​ ಹತ್ಯೆಯಲ್ಲಿ ಮೋದಿ, ದೋವಲ್ ಕೈವಾಡ ಆರೋಪ: ವರದಿಯಲ್ಲಿ ಹುರುಳಿಲ್ಲವೆಂದ ಕೆನಡಾ

ಭಾರತ ಕೆನಡಾ ಸಂಬಂಧ ಮತ್ತಷ್ಟು ಹದಗೆಡುತ್ತಿರುವ ಸಂದರ್ಭದಲ್ಲೇ ಕೆನಡಾ ಸರ್ಕಾರ ಮಹತ್ವದ ಹೇಳಿಕೆಯೊಂದನ್ನು ನೀಡಿದೆ. ಖಲಿಸ್ತಾನ್​ ಪ್ರತ್ಯೇಕತಾವಾದಿ ಹರ್ದೀಪ್​ ಸಿಂಗ್​ ನಿಜ್ಜರ್​ ಹತ್ಯೆ ಪ್ರಕರಣದಲ್ಲಿ ಭಾರತದ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರರ ಪಾತ್ರ ಇರುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದಿದೆ.

ನಿಜ್ಜರ್​ ಹತ್ಯೆಯಲ್ಲಿ ಮೋದಿ, ದೋವಲ್ ಕೈವಾಡ ಆರೋಪ: ವರದಿಯಲ್ಲಿ ಹುರುಳಿಲ್ಲವೆಂದ ಕೆನಡಾ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on:Nov 22, 2024 | 11:24 AM

Share

ನವದೆಹಲಿ, ನವೆಂಬರ್ 22: ಮಹತ್ವದ ಬೆಳವಣಿಗೆಯೊಂದರಲ್ಲಿ, ಕೆನಡಾದಲ್ಲಿ ಖಲಿಸ್ತಾನ್ ಮುಖಂಡನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಕೆನಡಾ ಸರ್ಕಾರ ಸ್ಪಷ್ಟನೆ ನೀಡಿದೆ. ಖಲಿಸ್ತಾನ್​ ಪ್ರತ್ಯೇಕತಾವಾದಿ ಹರ್ದೀಪ್​ ಸಿಂಗ್​ ನಿಜ್ಜರ್​ ಹತ್ಯೆ ಹಾಗೂ ಕೆನಡಾದ ಅಪರಾಧ ಪ್ರಕರಣಗಳಲ್ಲಿ ಭಾರತದ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಮೀಲಾಗಿದ್ದಾರೆ ಎಂಬ ಆರೋಪ ಹಾಗೂ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಅದು ತಿಳಿಸಿದೆ.

ಪ್ರಧಾನಿ ಮೋದಿ, ಸಚಿವ ಜೈಶಂಕರ್ ಅಥವಾ ಎನ್‌ಎಸ್‌ಎ ಅಜಿತ್ ದೋವಲ್ ಕೆನಡಾದೊಳಗೆ ಯಾವುದೇ ಕ್ರಿಮಿನಲ್ ಚಟುವಟಿಕೆಯಲ್ಲಿ ಶಾಮೀಲಾಗಿದ್ದಾರೆ ಎಂಬುದಕ್ಕೆ ಕೆನಡಾ ಸರ್ಕಾರದ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕೆನಡಾದ ಪತ್ರಿಕೆಯೊಂದರಲ್ಲಿ ಪ್ರಕಟವಾದ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಿಜ್ಜರ್ ಹತ್ಯೆಗೆ ಭಾರತದ ಉನ್ನತ ನಾಯಕರೇ ಸಂಚು ರೂಪಿಸಿದ್ದರು ಎಂದು ವರದಿಯಲ್ಲಿ ಆರೋಪಿಸಲಾಗಿತ್ತು. ಇದೀಗ ಕೆನಡಾ ಸರ್ಕಾರದಿಂದ ಸ್ಪಷ್ಟನೆ ನೀಡಿದೆ.

ಭಾರತದ ವಿರುದ್ಧ ಆರೋಪ ಮಾಡಿ ಪ್ರಕಟವಾದ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಕೆನಡಾ, ಆ ವರದಿ ಊಹಾತ್ಮಕವಾಗಿದ್ದು, ನಿಖರವಾಗಿಲ್ಲ. ಅದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದಿದೆ.

ಪ್ರಕರಣದ ಹಿನ್ನೆಲೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಭಾರತೀಯ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಸಿಂಗ್ ಅವರಿಗೆ ತಿಳಿದಿತ್ತು. ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಸರ್ಕಾರದ ಮೂಲವನ್ನು ಉಲ್ಲೇಖಿಸಿ ಅಲ್ಲಿನ ಗ್ಲೋಬ್ ಆ್ಯಂಡ್ ಮೇಲ್ ಪತ್ರಿಕೆ ವರದಿ ಮಾಡಿತ್ತು.

ಆದರೆ, ವರದಿಗೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಇದು ಕೆನಡಾದ ‘ಭಾರತದ ಮಾನಹಾನಿ ಮಾಡುವ ಅಭಿಯಾನ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಟೀಕಿಸಿದ್ದರು.

ಕಳೆದ ವರ್ಷ ಜೂನ್ 18 ರಂದು ಕೆನಡಾದ ಸರ್ರೆಯಲ್ಲಿ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ವಿಚಾರದಲ್ಲಿ ಕೆನಡಾದ ಎಲ್ಲ ಆರೋಪಗಳನ್ನು ಭಾರತ ತಳ್ಳಿಹಾಕಿದೆ.

ಇದನ್ನೂ ಓದಿ: ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ, ಮೂವರು ಭಾರತೀಯರ ಬಂಧನ: ಜೈಶಂಕರ್​ ಪ್ರತಿಕ್ರಿಯೆ

ಖಲಿಸ್ತಾನ್​ ಪ್ರತ್ಯೇಕತಾವಾದಿ ಹರ್ದೀಪ್​ ಸಿಂಗ್​ ನಿಜ್ಜರ್​ ಹತ್ಯೆ ವಿಚಾರವಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಈ ಹಿಂದೆ ಭಾರತವನ್ನು ಟೀಕಿಸಿದ್ದರು. ಅದಕ್ಕೆ ಭಾರತವೂ ಸೂಕ್ತ ತಿರುಗೇಟು ನೀಡಿತ್ತು. ಈ ವಿದ್ಯಮಾನಗಳು ಉಭಯ ದೇಶಗಳ ನಡುವಣ ಹಳಸಿದ್ದ ಸಂಬಂಧವನ್ನು ಮತ್ತಷ್ಟು ಹದಗೆಡುವಂತೆ ಮಾಡಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 am, Fri, 22 November 24

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ