AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಬಯಸುತ್ತಿಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ

Justin Trudeau: ಕೆನಡಾದಲ್ಲಿ ತನ್ನ ಕಾರ್ಯಾಚರಣೆಗಳಿ ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವಂತೆ ಭಾರತವು ಕೆನಡಾವನ್ನು ಕೇಳಿದ ದಿನದಂದು ಕೆನಡಾದ ಪ್ರಧಾನ ಮಂತ್ರಿಯ ಹೇಳಿಕೆ ಬಂದಿದೆ. ಪರಸ್ಪರ ರಾಜತಾಂತ್ರಿಕ ಉಪಸ್ಥಿತಿಯಲ್ಲಿ "ಶಕ್ತಿಯಲ್ಲಿ ಸಮಾನತೆ ಮತ್ತು ಶ್ರೇಣಿಯ ಸಮಾನತೆಯ" ಅಗತ್ಯದ ಬಗ್ಗೆ ಕೆನಡಾದ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕಳೆದ ತಿಂಗಳು ಹೇಳಿತ್ತು.

ಭಾರತದೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಬಯಸುತ್ತಿಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
ರಶ್ಮಿ ಕಲ್ಲಕಟ್ಟ
|

Updated on: Oct 03, 2023 | 8:27 PM

Share

ಒಟ್ಟಾವಾ ಅಕ್ಟೋಬರ್ 03: ಕೆನಡಾ (Canada) ಭಾರತದೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಬಯಸುವುದಿಲ್ಲ. ನಾವು ಭಾರತ ಸರ್ಕಾರದೊಂದಿಗೆ ಜವಾಬ್ದಾರಿಯುತವಾಗಿ ಮತ್ತು ರಚನಾತ್ಮಕವಾಗಿ ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತೇವೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ಜೂನ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ (Hardeep Singh Nijjar) ಸಂಬಂಧಿಸಿದಂತೆ ಒಟ್ಟಾವಾ ಭಾರತೀಯ ರಾಜತಾಂತ್ರಿಕನನ್ನು ಹೊರಹಾಕಿದ ನಂತರ ಭಾರತ ಸರ್ಕಾರದ ರಾಜತಾಂತ್ರಿಕ ಜಗಳದ ನಡುವೆ ಟ್ರೂಡೊ ಅವರ ಹೇಳಿಕೆ ಬಂದಿದೆ. ಜೂನ್ 18 ರಂದು ಸರ್ರೆಯಲ್ಲಿ ನಡೆದ ನಿಜ್ಜರ್ ಹತ್ಯೆ ಮತ್ತು ಭಾರತೀಯ ಸರ್ಕಾರಿ ಏಜೆಂಟರ ನಡುವಿನ ಸಂಭಾವ್ಯ ಸಂಬಂಧದ ಆರೋಪಗಳನ್ನು ಟ್ರುಡೊ ಮಾಡಿದ್ದರು.

ಕೆನಡಾದಲ್ಲಿ ತನ್ನ ಕಾರ್ಯಾಚರಣೆಗಳಿ ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವಂತೆ ಭಾರತವು ಕೆನಡಾವನ್ನು ಕೇಳಿದ ದಿನದಂದು ಕೆನಡಾದ ಪ್ರಧಾನ ಮಂತ್ರಿಯ ಹೇಳಿಕೆ ಬಂದಿದೆ. ಪರಸ್ಪರ ರಾಜತಾಂತ್ರಿಕ ಉಪಸ್ಥಿತಿಯಲ್ಲಿ “ಶಕ್ತಿಯಲ್ಲಿ ಸಮಾನತೆ ಮತ್ತು ಶ್ರೇಣಿಯ ಸಮಾನತೆಯ” ಅಗತ್ಯದ ಬಗ್ಗೆ ಕೆನಡಾದ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕಳೆದ ತಿಂಗಳು ಹೇಳಿತ್ತು.

ಭಾನುವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಅಮೆರಿಕಾದಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸುವಾಗ ಕೆನಡಾವನ್ನು ಉಲ್ಲೇಖಿಸಿ, ಭಾರತೀಯ ರಾಜತಾಂತ್ರಿಕರು ಮತ್ತು ಮಿಷನ್‌ಗಳ ವಿರುದ್ಧ ಹಿಂಸಾಚಾರ, ಬೆದರಿಕೆಯಂತಹ ವಿಷಯಗಳನ್ನು ಹೇಳುವುದು ಅಗತ್ಯವಾಗಿದೆ. ಇದು ಬೇರೆ ಯಾವುದೇ ದೇಶದಲ್ಲಿ ಆಗುತ್ತಿದ್ದರೆ ಜಗತ್ತು ಅದನ್ನು ಸಮಚಿತ್ತದಿಂದ ಸ್ವೀಕರಿಸುತ್ತಿತ್ತೇ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇಂದು ಹಿಂಸಾಚಾರದ ವಾತಾವರಣವಿದೆ, ಬೆದರಿಕೆಯ ವಾತಾವರಣವಿದೆ. ಅದರ ಬಗ್ಗೆ ಯೋಚಿಸಿ. ರಾಯಭಾರಿ ಕಚೇರಿ ಮುಂದೆ ಹೊಗೆ ಬಾಂಬ್‌ಗಳನ್ನು ಎಸೆಯಲಾಗಿತ್ತು. ನಾವು ನಮ್ಮ ದೂತಾವಾಸಗಳನ್ನು ಹೊಂದಿದ್ದೇವೆ. ಅವುಗಳ ಮುಂದೆ ಹಿಂಸೆ ನಡೆದಿದೆ. ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಲಾಗಿದೆ. ಜನರ ಬಗ್ಗೆ ಪೋಸ್ಟರ್‌ಗಳನ್ನು ಹಾಕಲಾಗಿದೆ ಎಂದು ಜೈ ಶಂಕರ್ ಹೇಳಿದ್ದಾರೆ.

ಇದನ್ನೂ ಓದಿ: 1980ರಿಂದಲೇ ಕೆನಡಾದೊಂದಿಗೆ ಸಂಘರ್ಷವಿದೆ; ಬ್ಲಿಂಕೆನ್, ಸುಲ್ಲಿವಾನ್‌ ಜತೆ ಮಾತನಾಡಿರುವೆ: ಜೈಶಂಕರ್

ಟ್ರುಡೊ ಅವರ ಆರೋಪಗಳ ಬಗ್ಗೆ ಕೇಳಿದಾಗ, ವಿದೇಶಾಂಗ ವ್ಯವಹಾರಗಳ ಸಚಿವರು ಕೆನಡಾದವರು ಕೆಲವು ಆರೋಪಗಳನ್ನು ಮಾಡಿದ್ದಾರೆ. ಇದು ಭಾರತ ಸರ್ಕಾರದ ನೀತಿಯಲ್ಲ ಎಂದು ನಾವು ಅವರಿಗೆ ಸೂಚಿಸಿದ್ದೇವೆ ಅವರು ನಮ್ಮೊಂದಿಗೆ ನಿರ್ದಿಷ್ಟವಾದದು ಅಥವಾ ಇದಕ್ಕೆ ಸಂಬಂಧಿದ್ದನ್ನು ಹಂಚಿಕೊಳ್ಳಲು ಸಿದ್ಧರಿದ್ದರೆ, ನಾವು ಅದನ್ನು ನೋಡುತ್ತೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ