AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ-20 ಶೃಂಗಸಭೆಗೆ ಮುಂಚಿತವಾಗಿ ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಕೆನಡಾ

ಭಾರತದೊಂದಿಗಿನ ಆರಂಭಿಕ ಪ್ರಗತಿ ವ್ಯಾಪಾರ ಒಪ್ಪಂದದ ಕುರಿತು ನಡೆಯುತ್ತಿರುವ ವೇಗದ ಗತಿಯ ಮಾತುಕತೆಗಳಿಗೆ ಕೆನಡಾದ ಕಡೆಯವರು ಸದ್ಯ ವಿರಾಮ ಸೂಚಿಸಿದ್ದಾರೆ ಎಂದು ಸಂಜಯ್ ಕುಮಾರ್ ವರ್ಮಾ ಇಮೇಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. "ನಿಖರವಾದ ಕಾರಣ ಬಗ್ಗೆ ನನಗೆ ತಿಳಿದಿಲ್ಲವಾದರೂ, ಈ ರೀತಿ ತಾತ್ಕಾಲಿಕ ಸ್ಥಗಿತ ಮಧ್ಯಸ್ಥಗಾರರೊಂದಿಗೆ ಹೆಚ್ಚಿನ ಸಮಾಲೋಚನೆಗಳನ್ನು ಅನುಮತಿಸುತ್ತದೆ ಎಂದು ಹೇಳಿದೆ.

ಜಿ-20 ಶೃಂಗಸಭೆಗೆ ಮುಂಚಿತವಾಗಿ ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಕೆನಡಾ
ಜಸ್ಟಿನ್ ಟ್ರುಡೊ- ಮೋದಿ
ರಶ್ಮಿ ಕಲ್ಲಕಟ್ಟ
| Updated By: Digi Tech Desk|

Updated on:Sep 05, 2023 | 10:49 AM

Share

ದೆಹಲಿ ಸೆಪ್ಟಂಬರ್ 02: ಕೆನಡಾದ (Canada) ಜಸ್ಟಿನ್ ಟ್ರುಡೊ(Justin Trudeau) ಅವರ ಸರ್ಕಾರವು ಕಳೆದ ತಿಂಗಳು ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದೆ. ಕೆನಡಾದ ನಾಯಕ 20 ನಾಯಕರ ಶೃಂಗಸಭೆಗಾಗಿ (G 20 Summit) ದೆಹಲಿಗೆ ಪ್ರಯಾಣಿಸಲು ತಯಾರಿ ನಡೆಸುತ್ತಿದ್ದಾರೆ. ಟ್ರುಡೊ ಸರ್ಕಾರ ವ್ಯಾಪಾರ ಮಾತುಕತೆಯನ್ನು ಸದ್ಯ ನಿಲ್ಲಿಸಿದೆ ಎಂದು ಕೆನಡಾದಲ್ಲಿರುವ ಭಾರತದ ಹೈ ಕಮಿಷನರ್ ದೃಢಪಡಿಸಿದ್ದು, ಇದನ್ನು ಕೆನಡಿಯನ್ ಪ್ರೆಸ್ ಶುಕ್ರವಾರ ವರದಿ ಮಾಡಿದೆ.

ಭಾರತದೊಂದಿಗಿನ ಆರಂಭಿಕ ಪ್ರಗತಿ ವ್ಯಾಪಾರ ಒಪ್ಪಂದದ ಕುರಿತು ನಡೆಯುತ್ತಿರುವ ವೇಗದ ಗತಿಯ ಮಾತುಕತೆಗಳಿಗೆ ಕೆನಡಾದ ಕಡೆಯವರು ಸದ್ಯ ವಿರಾಮ ಸೂಚಿಸಿದ್ದಾರೆ ಎಂದು ಸಂಜಯ್ ಕುಮಾರ್ ವರ್ಮಾ ಇಮೇಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಿಖರವಾದ ಕಾರಣ ಬಗ್ಗೆ ನನಗೆ ತಿಳಿದಿಲ್ಲವಾದರೂ, ಈ ರೀತಿ ತಾತ್ಕಾಲಿಕ ಸ್ಥಗಿತ ಮಧ್ಯಸ್ಥಗಾರರೊಂದಿಗೆ ಹೆಚ್ಚಿನ ಸಮಾಲೋಚನೆಗಳನ್ನು ಅನುಮತಿಸುತ್ತದೆ ಎಂದು ಹೇಳಿದೆ.

ವ್ಯಾಪಾರ ಮಾತುಕತೆಗಳು ದೀರ್ಘವಾಗಿವೆ. ಸಂಕೀರ್ಣ ಪ್ರಕ್ರಿಯೆಗಳು ಇದರಲ್ಲಿರುತ್ತವೆ. ಕೆನಡಾ ಸದ್ಯ ಇದನ್ನು ನಿಲ್ಲಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಟ್ರುಡೊ ಅವರ ಮುಂಬರುವ ಭಾರತ ಪ್ರವಾಸದ ಕುರಿತು ಸುದ್ದಿಗೋಷ್ಠಿಯ ವೇಳೆ  ತಿಳಿಸಿದ್ದಾರೆ. ಇವರು ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಮೇ ತಿಂಗಳಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಒಟ್ಟಾವಾಗೆ ಭೇಟಿ ನೀಡಿದ್ದು, ಅಲ್ಲಿ ಎರಡೂ ಕಡೆಯವರು ಈ ಒಪ್ಪಂದ ಬಗ್ಗೆ ಆಶಾವಾದ ವ್ಯಕ್ತ ಪಡಿಸಿದ್ದರು. ಆರಂಭಿಕ ಪ್ರಗತಿ ಒಪ್ಪಂದಕ್ಕೆ ಸಹಿ ಹಾಕಲು ಅವರು ಹತ್ತಿರವಾಗುತ್ತಿದ್ದಾರೆ ಎಂದು ಕೆನಡಾದ ವ್ಯಾಪಾರ ಸಚಿವ ಮ್ಯಾರಿ ಎನ್‌ಜಿ ಹೇಳಿದ್ದಾರೆ. ಆರಂಭಿಕ ಒಪ್ಪಂದವು ಆರ್ಥಿಕ ವ್ಯಾಪಿ ಒಪ್ಪಂದಕ್ಕಿಂತ ಹೆಚ್ಚಾಗಿ ಕೆಲವು ಕೈಗಾರಿಕೆಗಳ ಮೇಲೆ ಕೇಂದ್ರೀಕರಿಸುತ್ತದೆ.

ಕೆನಡಾ ಒಂದು ದಶಕದ ಹಿಂದೆ ಭಾರತದೊಂದಿಗೆ ಮಧ್ಯಂತರ ವ್ಯಾಪಾರ ಮಾತುಕತೆಗಳನ್ನು ಹೊಂದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಟ್ರುಡೊ ಸರ್ಕಾರವು ಚೀನಾದಿಂದ ತನ್ನ ಆರ್ಥಿಕತೆಯನ್ನು ವೈವಿಧ್ಯಗೊಳಿಸಲು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ಭಾರತದೊಂದಿಗಿನ ವ್ಯಾಪಾರ ಒಪ್ಪಂದವು ವಿಶಾಲವಾದ ಇಂಡೋ-ಪೆಸಿಫಿಕ್ ಕಾರ್ಯತಂತ್ರದ ಭಾಗವಾಗಿದೆ.

ಇದನ್ನೂ ಓದಿ: ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ

ಕೆನಡಾ ಭಾರತದ ಹೊರಗಿನ ಅತಿದೊಡ್ಡ ಸಿಖ್ ಜನಸಂಖ್ಯೆಯನ್ನು ಒಳಗೊಂಡಂತೆ ವಿಶಾಲವಾದ ಭಾರತೀಯ ಸಮುದಾಯಕ್ಕೆ ನೆಲೆಯಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತರ ಮಾನವ ಹಕ್ಕುಗಳನ್ನು ಗೌರವಿಸುವ ಭಾರತದ ಮೇಲೆ ವ್ಯಾಪಾರ ಒಪ್ಪಂದವನ್ನು ಉತ್ಸುಕವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಜಿ-20 ಅಧ್ಯಕ್ಷರಾಗಿದ್ದಾರೆ. ಟ್ರುಡೊ ಮುಂದಿನ ವಾರಾಂತ್ಯದಲ್ಲಿ ನಾಯಕರ ಶೃಂಗಸಭೆಗಾಗಿ ನವದೆಹಲಿಗೆ ಪ್ರಯಾಣಿಸಲು ಸಿದ್ಧರಾಗಿದ್ದಾರೆ. ಆದರೆ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಟ್ರುಡೊ ಅವರು ಪ್ರಧಾನಿ ಮೋದಿಯವರೊಂದಿಗೆ ಮಾನವ ಹಕ್ಕುಗಳ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆಯೇ ಪ್ರಶ್ನೆಗೆ, ಅವರು ವಿಶ್ವದ ಪ್ರತಿಯೊಬ್ಬ ಪಾಲುದಾರರೊಂದಿಗೆ ಅಂತಹ ಕಳವಳವನ್ನು ವ್ಯಕ್ತಪಡಿಸುತ್ತಾರೆ ಎಂದು ಸರ್ಕಾರಿ ಅಧಿಕಾರಿ ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Sat, 2 September 23

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!