Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ-20 ಶೃಂಗಸಭೆಗೆ ಮುಂಚಿತವಾಗಿ ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಕೆನಡಾ

ಭಾರತದೊಂದಿಗಿನ ಆರಂಭಿಕ ಪ್ರಗತಿ ವ್ಯಾಪಾರ ಒಪ್ಪಂದದ ಕುರಿತು ನಡೆಯುತ್ತಿರುವ ವೇಗದ ಗತಿಯ ಮಾತುಕತೆಗಳಿಗೆ ಕೆನಡಾದ ಕಡೆಯವರು ಸದ್ಯ ವಿರಾಮ ಸೂಚಿಸಿದ್ದಾರೆ ಎಂದು ಸಂಜಯ್ ಕುಮಾರ್ ವರ್ಮಾ ಇಮೇಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. "ನಿಖರವಾದ ಕಾರಣ ಬಗ್ಗೆ ನನಗೆ ತಿಳಿದಿಲ್ಲವಾದರೂ, ಈ ರೀತಿ ತಾತ್ಕಾಲಿಕ ಸ್ಥಗಿತ ಮಧ್ಯಸ್ಥಗಾರರೊಂದಿಗೆ ಹೆಚ್ಚಿನ ಸಮಾಲೋಚನೆಗಳನ್ನು ಅನುಮತಿಸುತ್ತದೆ ಎಂದು ಹೇಳಿದೆ.

ಜಿ-20 ಶೃಂಗಸಭೆಗೆ ಮುಂಚಿತವಾಗಿ ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದ ಕೆನಡಾ
ಜಸ್ಟಿನ್ ಟ್ರುಡೊ- ಮೋದಿ
Follow us
ರಶ್ಮಿ ಕಲ್ಲಕಟ್ಟ
| Updated By: Digi Tech Desk

Updated on:Sep 05, 2023 | 10:49 AM

ದೆಹಲಿ ಸೆಪ್ಟಂಬರ್ 02: ಕೆನಡಾದ (Canada) ಜಸ್ಟಿನ್ ಟ್ರುಡೊ(Justin Trudeau) ಅವರ ಸರ್ಕಾರವು ಕಳೆದ ತಿಂಗಳು ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದೆ. ಕೆನಡಾದ ನಾಯಕ 20 ನಾಯಕರ ಶೃಂಗಸಭೆಗಾಗಿ (G 20 Summit) ದೆಹಲಿಗೆ ಪ್ರಯಾಣಿಸಲು ತಯಾರಿ ನಡೆಸುತ್ತಿದ್ದಾರೆ. ಟ್ರುಡೊ ಸರ್ಕಾರ ವ್ಯಾಪಾರ ಮಾತುಕತೆಯನ್ನು ಸದ್ಯ ನಿಲ್ಲಿಸಿದೆ ಎಂದು ಕೆನಡಾದಲ್ಲಿರುವ ಭಾರತದ ಹೈ ಕಮಿಷನರ್ ದೃಢಪಡಿಸಿದ್ದು, ಇದನ್ನು ಕೆನಡಿಯನ್ ಪ್ರೆಸ್ ಶುಕ್ರವಾರ ವರದಿ ಮಾಡಿದೆ.

ಭಾರತದೊಂದಿಗಿನ ಆರಂಭಿಕ ಪ್ರಗತಿ ವ್ಯಾಪಾರ ಒಪ್ಪಂದದ ಕುರಿತು ನಡೆಯುತ್ತಿರುವ ವೇಗದ ಗತಿಯ ಮಾತುಕತೆಗಳಿಗೆ ಕೆನಡಾದ ಕಡೆಯವರು ಸದ್ಯ ವಿರಾಮ ಸೂಚಿಸಿದ್ದಾರೆ ಎಂದು ಸಂಜಯ್ ಕುಮಾರ್ ವರ್ಮಾ ಇಮೇಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ನಿಖರವಾದ ಕಾರಣ ಬಗ್ಗೆ ನನಗೆ ತಿಳಿದಿಲ್ಲವಾದರೂ, ಈ ರೀತಿ ತಾತ್ಕಾಲಿಕ ಸ್ಥಗಿತ ಮಧ್ಯಸ್ಥಗಾರರೊಂದಿಗೆ ಹೆಚ್ಚಿನ ಸಮಾಲೋಚನೆಗಳನ್ನು ಅನುಮತಿಸುತ್ತದೆ ಎಂದು ಹೇಳಿದೆ.

ವ್ಯಾಪಾರ ಮಾತುಕತೆಗಳು ದೀರ್ಘವಾಗಿವೆ. ಸಂಕೀರ್ಣ ಪ್ರಕ್ರಿಯೆಗಳು ಇದರಲ್ಲಿರುತ್ತವೆ. ಕೆನಡಾ ಸದ್ಯ ಇದನ್ನು ನಿಲ್ಲಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಟ್ರುಡೊ ಅವರ ಮುಂಬರುವ ಭಾರತ ಪ್ರವಾಸದ ಕುರಿತು ಸುದ್ದಿಗೋಷ್ಠಿಯ ವೇಳೆ  ತಿಳಿಸಿದ್ದಾರೆ. ಇವರು ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಮೇ ತಿಂಗಳಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಒಟ್ಟಾವಾಗೆ ಭೇಟಿ ನೀಡಿದ್ದು, ಅಲ್ಲಿ ಎರಡೂ ಕಡೆಯವರು ಈ ಒಪ್ಪಂದ ಬಗ್ಗೆ ಆಶಾವಾದ ವ್ಯಕ್ತ ಪಡಿಸಿದ್ದರು. ಆರಂಭಿಕ ಪ್ರಗತಿ ಒಪ್ಪಂದಕ್ಕೆ ಸಹಿ ಹಾಕಲು ಅವರು ಹತ್ತಿರವಾಗುತ್ತಿದ್ದಾರೆ ಎಂದು ಕೆನಡಾದ ವ್ಯಾಪಾರ ಸಚಿವ ಮ್ಯಾರಿ ಎನ್‌ಜಿ ಹೇಳಿದ್ದಾರೆ. ಆರಂಭಿಕ ಒಪ್ಪಂದವು ಆರ್ಥಿಕ ವ್ಯಾಪಿ ಒಪ್ಪಂದಕ್ಕಿಂತ ಹೆಚ್ಚಾಗಿ ಕೆಲವು ಕೈಗಾರಿಕೆಗಳ ಮೇಲೆ ಕೇಂದ್ರೀಕರಿಸುತ್ತದೆ.

ಕೆನಡಾ ಒಂದು ದಶಕದ ಹಿಂದೆ ಭಾರತದೊಂದಿಗೆ ಮಧ್ಯಂತರ ವ್ಯಾಪಾರ ಮಾತುಕತೆಗಳನ್ನು ಹೊಂದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಟ್ರುಡೊ ಸರ್ಕಾರವು ಚೀನಾದಿಂದ ತನ್ನ ಆರ್ಥಿಕತೆಯನ್ನು ವೈವಿಧ್ಯಗೊಳಿಸಲು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ಭಾರತದೊಂದಿಗಿನ ವ್ಯಾಪಾರ ಒಪ್ಪಂದವು ವಿಶಾಲವಾದ ಇಂಡೋ-ಪೆಸಿಫಿಕ್ ಕಾರ್ಯತಂತ್ರದ ಭಾಗವಾಗಿದೆ.

ಇದನ್ನೂ ಓದಿ: ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ

ಕೆನಡಾ ಭಾರತದ ಹೊರಗಿನ ಅತಿದೊಡ್ಡ ಸಿಖ್ ಜನಸಂಖ್ಯೆಯನ್ನು ಒಳಗೊಂಡಂತೆ ವಿಶಾಲವಾದ ಭಾರತೀಯ ಸಮುದಾಯಕ್ಕೆ ನೆಲೆಯಾಗಿದ್ದು, ಧಾರ್ಮಿಕ ಅಲ್ಪಸಂಖ್ಯಾತರ ಮಾನವ ಹಕ್ಕುಗಳನ್ನು ಗೌರವಿಸುವ ಭಾರತದ ಮೇಲೆ ವ್ಯಾಪಾರ ಒಪ್ಪಂದವನ್ನು ಉತ್ಸುಕವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಜಿ-20 ಅಧ್ಯಕ್ಷರಾಗಿದ್ದಾರೆ. ಟ್ರುಡೊ ಮುಂದಿನ ವಾರಾಂತ್ಯದಲ್ಲಿ ನಾಯಕರ ಶೃಂಗಸಭೆಗಾಗಿ ನವದೆಹಲಿಗೆ ಪ್ರಯಾಣಿಸಲು ಸಿದ್ಧರಾಗಿದ್ದಾರೆ. ಆದರೆ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಟ್ರುಡೊ ಅವರು ಪ್ರಧಾನಿ ಮೋದಿಯವರೊಂದಿಗೆ ಮಾನವ ಹಕ್ಕುಗಳ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾರೆಯೇ ಪ್ರಶ್ನೆಗೆ, ಅವರು ವಿಶ್ವದ ಪ್ರತಿಯೊಬ್ಬ ಪಾಲುದಾರರೊಂದಿಗೆ ಅಂತಹ ಕಳವಳವನ್ನು ವ್ಯಕ್ತಪಡಿಸುತ್ತಾರೆ ಎಂದು ಸರ್ಕಾರಿ ಅಧಿಕಾರಿ ಹೇಳಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Sat, 2 September 23

ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್