AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಹಿಂದೂ ದೇವಾಲಯದಲ್ಲಿ ಖಲಿಸ್ತಾನಿಗಳಿಂದ ಭಕ್ತರ ಮೇಲೆ ಹಲ್ಲೆ

ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳು ಅತ್ಯಂತ ಕೆಟ್ಟದಾಗಿದೆ. ಈ ಮಧ್ಯೆ, ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಾಲಿಸ್ತಾನಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕೆನಡಾದ ಹಿಂದೂ ದೇವಾಲಯದಲ್ಲಿ ಖಲಿಸ್ತಾನಿಗಳಿಂದ ಭಕ್ತರ ಮೇಲೆ ಹಲ್ಲೆ
ಖಲಿಸ್ತಾನಿ ಉಗ್ರರುImage Credit source: Hindustan Times
Follow us
ನಯನಾ ರಾಜೀವ್
|

Updated on:Nov 04, 2024 | 9:28 AM

ಕೆನಡಾದ ದೇವಸ್ಥಾನದಲ್ಲಿ ಖಲಿಸ್ತಾನಿ ಬೆಂಬಲಿಗರು ಭಕ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಪ್ರತಿಕ್ರಿಯಿಸಿದ್ದಾರೆ. ದೇಶದಲ್ಲಿ ಹಿಂಸಾಚಾರವನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಹಿಂದೂ ದೇವಾಲಯವೊಂದು ಖಲಿಸ್ತಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ ಪೂಜೆಗೆ ಬಂದಿದ್ದ ಜನರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ವಿಡಿಯೋದಲ್ಲಿ ಕೆಲವರು ಹಿಂದೂ ಸಭಾ ಮಂದಿರದ ಹೊರಗೆ ದೊಣ್ಣೆಗಳಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಕೆನಡಾದಲ್ಲಿರುವ ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಅವರು ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಕೆನಡಾದಲ್ಲಿ ಖಲಿಸ್ತಾನಿಗಳು ಹಿಂದೂಗಳು ಮತ್ತು ಅವರ ದೇವಾಲಯಗಳನ್ನು ಗುರಿಯಾಗಿಸಿಕೊಂಡ ಘಟನೆ ಇದೇ ಮೊದಲಲ್ಲ. ಜುಲೈನಲ್ಲಿ, ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಯಿತು ಮತ್ತು ಅದರ ಗೋಡೆಗಳ ಮೇಲೆ ಹಿಂದೂ ವಿರೋಧಿ ಘೋಷಣೆಗಳು ಮತ್ತು ಚಿತ್ರಗಳನ್ನು ಬರೆಯಲಾಯಿತು.

ಮತ್ತಷ್ಟು ಓದಿ: Canada Hindu Temple Defaced: ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲೆ ಭಾರತ ವಿರೋಧಿ ಘೋಷಣೆ ಕೆತ್ತಿ ವಿರೂಪಗೊಳಿಸಿದ ಮತಾಂಧರು

ಬ್ರಾಂಪ್ಟನ್​ನಲ್ಲಿರುವ ಹಿಂದೂ ಸಭಾ ಮಂದಿರದ ಸಹಯೋಗದಲ್ಲಿ ನಡೆದ ಶಿಬಿರದ ಹೊರಗೆ ನಡೆದ ಘಟನೆಯನ್ನು ಕೆನಡಾದಲ್ಲಿರುವ ಭಾರತೀಯ ಹೈಕಮಿಷನ್ ಖಂಡಿಸಿದೆ. ಮಕ್ಕಳು, ಮಹಿಳೆಯರು ಮತ್ತು ಪುರುಷರ ಮೇಲೆ ದಾಳಿ ಮಾಡಲಾಗುತ್ತಿದೆ. ಇದೆಲ್ಲವೂ ಖಲಿಸ್ತಾನಿ ರಾಜಕಾರಣಿಗಳ ಸಹಾನುಭೂತಿಯ ಬೆಂಬಲದಲ್ಲಿ ನಡೆಯುತ್ತಿದೆ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ಈ ಘಟನೆಯು ಕೆನಡಾದಲ್ಲಿ ಮತ್ತು ಹೊರಗೆ ವ್ಯಾಪಕ ಟೀಕೆಗೆ ಕಾರಣವಾಯಿತು.

ಜುಲೈ 23, 2024 ರ ಬೆಳಗ್ಗೆ, ಎಡ್ಮಂಟನ್‌ನಲ್ಲಿರುವ BAPS ಶ್ರೀ ಸ್ವಾಮಿನಾರಾಯಣ ದೇವಸ್ಥಾನದ ಹೊರಭಾಗದಲ್ಲಿ ಹಿಂದೂ ವಿರೋಧಿ ಚಿತ್ರಗಳು ಮತ್ತು ಘೋಷಣೆಗಳನ್ನು ಬರೆದಿರುವುದು ಕಂಡುಬಂದಿದೆ. ದೇವಾಲಯದ ಗೋಡೆಗಳ ಮೇಲೆ ಹಿಂದೂ ಭಯೋತ್ಪಾದಕರು ಎಂದು ಬರೆಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ-ಕೆನಡಾ ಸಂಸದ ಚಂದ್ರ ಆರ್ಯ ಅವರನ್ನು ಗುರಿಯಾಗಿಸಲಾಗಿತ್ತು.

ಸೆಪ್ಟೆಂಬರ್ 2022 ರಿಂದ ಇದು ನಾಲ್ಕನೇ ಬಾರಿ ಕೆನಡಾದಲ್ಲಿ BAPS ದೇವಾಲಯವನ್ನು ಗುರಿಯಾಗಿಸಿಕೊಂಡಿದೆ. 2022ರಿಂದೀಚೆಗೆ ಕೆನಡಾದಲ್ಲಿರುವ 20ಕ್ಕೂ ಹೆಚ್ಚು ದೇವಸ್ಥಾನಗಳ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿರುವ ಘಟನೆಗಳು ವರದಿಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:06 am, Mon, 4 November 24

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ