AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದ ಹಿಂದೂ ದೇವಾಲಯದಲ್ಲಿ ಖಲಿಸ್ತಾನಿಗಳಿಂದ ಭಕ್ತರ ಮೇಲೆ ಹಲ್ಲೆ

ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳು ಅತ್ಯಂತ ಕೆಟ್ಟದಾಗಿದೆ. ಈ ಮಧ್ಯೆ, ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಾಲಿಸ್ತಾನಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕೆನಡಾದ ಹಿಂದೂ ದೇವಾಲಯದಲ್ಲಿ ಖಲಿಸ್ತಾನಿಗಳಿಂದ ಭಕ್ತರ ಮೇಲೆ ಹಲ್ಲೆ
ಖಲಿಸ್ತಾನಿ ಉಗ್ರರುImage Credit source: Hindustan Times
ನಯನಾ ರಾಜೀವ್
|

Updated on:Nov 04, 2024 | 9:28 AM

Share

ಕೆನಡಾದ ದೇವಸ್ಥಾನದಲ್ಲಿ ಖಲಿಸ್ತಾನಿ ಬೆಂಬಲಿಗರು ಭಕ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಪ್ರತಿಕ್ರಿಯಿಸಿದ್ದಾರೆ. ದೇಶದಲ್ಲಿ ಹಿಂಸಾಚಾರವನ್ನು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಹಿಂದೂ ದೇವಾಲಯವೊಂದು ಖಲಿಸ್ತಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಭಾನುವಾರ ಈ ಘಟನೆ ನಡೆದಿದ್ದು, ಇಲ್ಲಿ ಪೂಜೆಗೆ ಬಂದಿದ್ದ ಜನರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ವಿಡಿಯೋದಲ್ಲಿ ಕೆಲವರು ಹಿಂದೂ ಸಭಾ ಮಂದಿರದ ಹೊರಗೆ ದೊಣ್ಣೆಗಳಿಂದ ಹಲ್ಲೆ ನಡೆಸುತ್ತಿರುವುದನ್ನು ಕಾಣಬಹುದು. ಕೆನಡಾದಲ್ಲಿರುವ ಭಾರತೀಯ ಮೂಲದ ಸಂಸದ ಚಂದ್ರ ಆರ್ಯ ಅವರು ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಕೆನಡಾದಲ್ಲಿ ಖಲಿಸ್ತಾನಿಗಳು ಹಿಂದೂಗಳು ಮತ್ತು ಅವರ ದೇವಾಲಯಗಳನ್ನು ಗುರಿಯಾಗಿಸಿಕೊಂಡ ಘಟನೆ ಇದೇ ಮೊದಲಲ್ಲ. ಜುಲೈನಲ್ಲಿ, ಕೆನಡಾದ ಅಲ್ಬರ್ಟಾ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಯಿತು ಮತ್ತು ಅದರ ಗೋಡೆಗಳ ಮೇಲೆ ಹಿಂದೂ ವಿರೋಧಿ ಘೋಷಣೆಗಳು ಮತ್ತು ಚಿತ್ರಗಳನ್ನು ಬರೆಯಲಾಯಿತು.

ಮತ್ತಷ್ಟು ಓದಿ: Canada Hindu Temple Defaced: ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲೆ ಭಾರತ ವಿರೋಧಿ ಘೋಷಣೆ ಕೆತ್ತಿ ವಿರೂಪಗೊಳಿಸಿದ ಮತಾಂಧರು

ಬ್ರಾಂಪ್ಟನ್​ನಲ್ಲಿರುವ ಹಿಂದೂ ಸಭಾ ಮಂದಿರದ ಸಹಯೋಗದಲ್ಲಿ ನಡೆದ ಶಿಬಿರದ ಹೊರಗೆ ನಡೆದ ಘಟನೆಯನ್ನು ಕೆನಡಾದಲ್ಲಿರುವ ಭಾರತೀಯ ಹೈಕಮಿಷನ್ ಖಂಡಿಸಿದೆ. ಮಕ್ಕಳು, ಮಹಿಳೆಯರು ಮತ್ತು ಪುರುಷರ ಮೇಲೆ ದಾಳಿ ಮಾಡಲಾಗುತ್ತಿದೆ. ಇದೆಲ್ಲವೂ ಖಲಿಸ್ತಾನಿ ರಾಜಕಾರಣಿಗಳ ಸಹಾನುಭೂತಿಯ ಬೆಂಬಲದಲ್ಲಿ ನಡೆಯುತ್ತಿದೆ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ಈ ಘಟನೆಯು ಕೆನಡಾದಲ್ಲಿ ಮತ್ತು ಹೊರಗೆ ವ್ಯಾಪಕ ಟೀಕೆಗೆ ಕಾರಣವಾಯಿತು.

ಜುಲೈ 23, 2024 ರ ಬೆಳಗ್ಗೆ, ಎಡ್ಮಂಟನ್‌ನಲ್ಲಿರುವ BAPS ಶ್ರೀ ಸ್ವಾಮಿನಾರಾಯಣ ದೇವಸ್ಥಾನದ ಹೊರಭಾಗದಲ್ಲಿ ಹಿಂದೂ ವಿರೋಧಿ ಚಿತ್ರಗಳು ಮತ್ತು ಘೋಷಣೆಗಳನ್ನು ಬರೆದಿರುವುದು ಕಂಡುಬಂದಿದೆ. ದೇವಾಲಯದ ಗೋಡೆಗಳ ಮೇಲೆ ಹಿಂದೂ ಭಯೋತ್ಪಾದಕರು ಎಂದು ಬರೆಯಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ-ಕೆನಡಾ ಸಂಸದ ಚಂದ್ರ ಆರ್ಯ ಅವರನ್ನು ಗುರಿಯಾಗಿಸಲಾಗಿತ್ತು.

ಸೆಪ್ಟೆಂಬರ್ 2022 ರಿಂದ ಇದು ನಾಲ್ಕನೇ ಬಾರಿ ಕೆನಡಾದಲ್ಲಿ BAPS ದೇವಾಲಯವನ್ನು ಗುರಿಯಾಗಿಸಿಕೊಂಡಿದೆ. 2022ರಿಂದೀಚೆಗೆ ಕೆನಡಾದಲ್ಲಿರುವ 20ಕ್ಕೂ ಹೆಚ್ಚು ದೇವಸ್ಥಾನಗಳ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿರುವ ಘಟನೆಗಳು ವರದಿಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:06 am, Mon, 4 November 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ