AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ
ಮಗು ವೇಲಾನ್Image Credit source: NDTV
ನಯನಾ ರಾಜೀವ್
|

Updated on: Feb 23, 2023 | 8:38 AM

Share

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಹೋಂ ಡೇ ಕೇರ್​ನ ಹೊರಾಂಗಣದಲ್ಲಿ ಆಡುತ್ತಿದ್ದ 20 ತಿಂಗಳ ಮಗು ಅರಿವಿಲ್ಲದೆ ಈಜುಕೊಳಕ್ಕೆ ಬಿದ್ದಿತ್ತು. ಪ್ರಜ್ಞೆ ತಪ್ಪಿತ್ತು, ಅಗ್ನಿಶಾಮಕ ಸಿಬ್ಬಂದಿ ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಮಗು ನಿರ್ಜೀವವಾಗಿತ್ತು. ಈ ಘಟನೆ ನಡೆದಿದ್ದು, ಕೆನಡಾದಲ್ಲಿ.

ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಗುವಿನ ಹೃದಯ ಬಡಿತ ನಿಂತಿತ್ತು, ಆದರೂ ವೈದ್ಯರು ನೋಡಿಯೇ ಬಿಡೋಣ ಮಗು ಬದುಕಿದರೂ ಬದುಕಬಹುದು ಎಂದು ನಿರ್ಧಾರ ಮಾಡಿದರು. ಅಲ್ಲಿನ ಷಾರ್ಲೆಟ್ ಎಲೀನರ್ ಎಂಗಲ್ಹಾರ್ಟ್​ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಗುವನ್ನು ಉಳಿಸಲು ನಿರಂತರ ಪ್ರಯತ್ನ ಮಾಡಿ ಕೊನೆಗೂ ಮಗು ಬದುಕುಳಿದಿದೆ.

ಪೆಟ್ರೋಲಿಯಾ ಲಂಡನ್‌ನಿಂದ 100 ಕಿಲೋಮೀಟರ್ ದೂರದಲ್ಲಿದೆ ಮತ್ತು ಆಸ್ಪತ್ರೆಯಲ್ಲಿ ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಇದೆ. ಆ ದಿನ ಲ್ಯಾಬ್ ಕೆಲಸಗಾರರು ಮತ್ತು ನರ್ಸ್​ಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ತಾವು ಮಾಡುವ ಕೆಲಸ ನಿಲ್ಲಿಸದರು, ಮಗು ವೇಲಾನ್ ಜೀವ ಉಳಿಸುವ ಕಾರ್ಯದಲ್ಲಿ ಸಹಾಯ ಮಾಡಲು ಶುರು ಮಾಡಿದರು.

ಮೂರು ಗಂಟೆಗಳ ಕಾಲ ಮಗುವಿಗೆ ಸಿಪಿಆರ್​ ಅನ್ನು ಪರ್ಯಾಯವಾಗಿ ನೀಡಿದರು. ಇದು ನಿಜವಾಗಿಯೂ ತಂಡದ ಪ್ರಯತ್ನವಾಗಿತ್ತು, ಲ್ಯಾಬ್​ ಟೆಕ್​ಗಳು ಕೊಠಡಿಯಲ್ಲಿ ಪೋರ್ಟಬಲ್ ಹೀಟರ್​ಗಳನ್ನು ಹಿಡಿದಿದ್ದರು, ಇಎಂಎಸ್ ಸಿಬ್ಬಂದಿ ಕೂಡ ಕಂಪ್ರೆಸರ್​ಗಳ ಮೂಲಕ ವಾಯುಮಾರ್ಗ ನಿರ್ವಹಿಸುವಲ್ಲಿ ಸಹಾಯ ಮಾಡಿದರು. ಮೆಲಾನ್ ಫೆಬ್ರವರಿ 6 ರಂದು ಆಸ್ಪತ್ರೆಯಿಂದ ಬಿಡುಗಡೆಯಾಯಿತು. ಪೋಷಕರು ಮಗುವಿಗೆ ಮರುಜನ್ಮ ನೀಡಿದ ವೈದ್ಯರಿಗೆ ಧನ್ಯವಾದ ಅರ್ಪಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’