AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ
ಮಗು ವೇಲಾನ್Image Credit source: NDTV
ನಯನಾ ರಾಜೀವ್
|

Updated on: Feb 23, 2023 | 8:38 AM

Share

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಹೋಂ ಡೇ ಕೇರ್​ನ ಹೊರಾಂಗಣದಲ್ಲಿ ಆಡುತ್ತಿದ್ದ 20 ತಿಂಗಳ ಮಗು ಅರಿವಿಲ್ಲದೆ ಈಜುಕೊಳಕ್ಕೆ ಬಿದ್ದಿತ್ತು. ಪ್ರಜ್ಞೆ ತಪ್ಪಿತ್ತು, ಅಗ್ನಿಶಾಮಕ ಸಿಬ್ಬಂದಿ ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಮಗು ನಿರ್ಜೀವವಾಗಿತ್ತು. ಈ ಘಟನೆ ನಡೆದಿದ್ದು, ಕೆನಡಾದಲ್ಲಿ.

ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಗುವಿನ ಹೃದಯ ಬಡಿತ ನಿಂತಿತ್ತು, ಆದರೂ ವೈದ್ಯರು ನೋಡಿಯೇ ಬಿಡೋಣ ಮಗು ಬದುಕಿದರೂ ಬದುಕಬಹುದು ಎಂದು ನಿರ್ಧಾರ ಮಾಡಿದರು. ಅಲ್ಲಿನ ಷಾರ್ಲೆಟ್ ಎಲೀನರ್ ಎಂಗಲ್ಹಾರ್ಟ್​ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಗುವನ್ನು ಉಳಿಸಲು ನಿರಂತರ ಪ್ರಯತ್ನ ಮಾಡಿ ಕೊನೆಗೂ ಮಗು ಬದುಕುಳಿದಿದೆ.

ಪೆಟ್ರೋಲಿಯಾ ಲಂಡನ್‌ನಿಂದ 100 ಕಿಲೋಮೀಟರ್ ದೂರದಲ್ಲಿದೆ ಮತ್ತು ಆಸ್ಪತ್ರೆಯಲ್ಲಿ ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಇದೆ. ಆ ದಿನ ಲ್ಯಾಬ್ ಕೆಲಸಗಾರರು ಮತ್ತು ನರ್ಸ್​ಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ತಾವು ಮಾಡುವ ಕೆಲಸ ನಿಲ್ಲಿಸದರು, ಮಗು ವೇಲಾನ್ ಜೀವ ಉಳಿಸುವ ಕಾರ್ಯದಲ್ಲಿ ಸಹಾಯ ಮಾಡಲು ಶುರು ಮಾಡಿದರು.

ಮೂರು ಗಂಟೆಗಳ ಕಾಲ ಮಗುವಿಗೆ ಸಿಪಿಆರ್​ ಅನ್ನು ಪರ್ಯಾಯವಾಗಿ ನೀಡಿದರು. ಇದು ನಿಜವಾಗಿಯೂ ತಂಡದ ಪ್ರಯತ್ನವಾಗಿತ್ತು, ಲ್ಯಾಬ್​ ಟೆಕ್​ಗಳು ಕೊಠಡಿಯಲ್ಲಿ ಪೋರ್ಟಬಲ್ ಹೀಟರ್​ಗಳನ್ನು ಹಿಡಿದಿದ್ದರು, ಇಎಂಎಸ್ ಸಿಬ್ಬಂದಿ ಕೂಡ ಕಂಪ್ರೆಸರ್​ಗಳ ಮೂಲಕ ವಾಯುಮಾರ್ಗ ನಿರ್ವಹಿಸುವಲ್ಲಿ ಸಹಾಯ ಮಾಡಿದರು. ಮೆಲಾನ್ ಫೆಬ್ರವರಿ 6 ರಂದು ಆಸ್ಪತ್ರೆಯಿಂದ ಬಿಡುಗಡೆಯಾಯಿತು. ಪೋಷಕರು ಮಗುವಿಗೆ ಮರುಜನ್ಮ ನೀಡಿದ ವೈದ್ಯರಿಗೆ ಧನ್ಯವಾದ ಅರ್ಪಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?