AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ
ಮಗು ವೇಲಾನ್Image Credit source: NDTV
ನಯನಾ ರಾಜೀವ್
|

Updated on: Feb 23, 2023 | 8:38 AM

Share

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಹೋಂ ಡೇ ಕೇರ್​ನ ಹೊರಾಂಗಣದಲ್ಲಿ ಆಡುತ್ತಿದ್ದ 20 ತಿಂಗಳ ಮಗು ಅರಿವಿಲ್ಲದೆ ಈಜುಕೊಳಕ್ಕೆ ಬಿದ್ದಿತ್ತು. ಪ್ರಜ್ಞೆ ತಪ್ಪಿತ್ತು, ಅಗ್ನಿಶಾಮಕ ಸಿಬ್ಬಂದಿ ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಮಗು ನಿರ್ಜೀವವಾಗಿತ್ತು. ಈ ಘಟನೆ ನಡೆದಿದ್ದು, ಕೆನಡಾದಲ್ಲಿ.

ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಗುವಿನ ಹೃದಯ ಬಡಿತ ನಿಂತಿತ್ತು, ಆದರೂ ವೈದ್ಯರು ನೋಡಿಯೇ ಬಿಡೋಣ ಮಗು ಬದುಕಿದರೂ ಬದುಕಬಹುದು ಎಂದು ನಿರ್ಧಾರ ಮಾಡಿದರು. ಅಲ್ಲಿನ ಷಾರ್ಲೆಟ್ ಎಲೀನರ್ ಎಂಗಲ್ಹಾರ್ಟ್​ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಗುವನ್ನು ಉಳಿಸಲು ನಿರಂತರ ಪ್ರಯತ್ನ ಮಾಡಿ ಕೊನೆಗೂ ಮಗು ಬದುಕುಳಿದಿದೆ.

ಪೆಟ್ರೋಲಿಯಾ ಲಂಡನ್‌ನಿಂದ 100 ಕಿಲೋಮೀಟರ್ ದೂರದಲ್ಲಿದೆ ಮತ್ತು ಆಸ್ಪತ್ರೆಯಲ್ಲಿ ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಇದೆ. ಆ ದಿನ ಲ್ಯಾಬ್ ಕೆಲಸಗಾರರು ಮತ್ತು ನರ್ಸ್​ಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ತಾವು ಮಾಡುವ ಕೆಲಸ ನಿಲ್ಲಿಸದರು, ಮಗು ವೇಲಾನ್ ಜೀವ ಉಳಿಸುವ ಕಾರ್ಯದಲ್ಲಿ ಸಹಾಯ ಮಾಡಲು ಶುರು ಮಾಡಿದರು.

ಮೂರು ಗಂಟೆಗಳ ಕಾಲ ಮಗುವಿಗೆ ಸಿಪಿಆರ್​ ಅನ್ನು ಪರ್ಯಾಯವಾಗಿ ನೀಡಿದರು. ಇದು ನಿಜವಾಗಿಯೂ ತಂಡದ ಪ್ರಯತ್ನವಾಗಿತ್ತು, ಲ್ಯಾಬ್​ ಟೆಕ್​ಗಳು ಕೊಠಡಿಯಲ್ಲಿ ಪೋರ್ಟಬಲ್ ಹೀಟರ್​ಗಳನ್ನು ಹಿಡಿದಿದ್ದರು, ಇಎಂಎಸ್ ಸಿಬ್ಬಂದಿ ಕೂಡ ಕಂಪ್ರೆಸರ್​ಗಳ ಮೂಲಕ ವಾಯುಮಾರ್ಗ ನಿರ್ವಹಿಸುವಲ್ಲಿ ಸಹಾಯ ಮಾಡಿದರು. ಮೆಲಾನ್ ಫೆಬ್ರವರಿ 6 ರಂದು ಆಸ್ಪತ್ರೆಯಿಂದ ಬಿಡುಗಡೆಯಾಯಿತು. ಪೋಷಕರು ಮಗುವಿಗೆ ಮರುಜನ್ಮ ನೀಡಿದ ವೈದ್ಯರಿಗೆ ಧನ್ಯವಾದ ಅರ್ಪಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ