AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ
ಮಗು ವೇಲಾನ್Image Credit source: NDTV
ನಯನಾ ರಾಜೀವ್
|

Updated on: Feb 23, 2023 | 8:38 AM

Share

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಹೋಂ ಡೇ ಕೇರ್​ನ ಹೊರಾಂಗಣದಲ್ಲಿ ಆಡುತ್ತಿದ್ದ 20 ತಿಂಗಳ ಮಗು ಅರಿವಿಲ್ಲದೆ ಈಜುಕೊಳಕ್ಕೆ ಬಿದ್ದಿತ್ತು. ಪ್ರಜ್ಞೆ ತಪ್ಪಿತ್ತು, ಅಗ್ನಿಶಾಮಕ ಸಿಬ್ಬಂದಿ ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಮಗು ನಿರ್ಜೀವವಾಗಿತ್ತು. ಈ ಘಟನೆ ನಡೆದಿದ್ದು, ಕೆನಡಾದಲ್ಲಿ.

ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಗುವಿನ ಹೃದಯ ಬಡಿತ ನಿಂತಿತ್ತು, ಆದರೂ ವೈದ್ಯರು ನೋಡಿಯೇ ಬಿಡೋಣ ಮಗು ಬದುಕಿದರೂ ಬದುಕಬಹುದು ಎಂದು ನಿರ್ಧಾರ ಮಾಡಿದರು. ಅಲ್ಲಿನ ಷಾರ್ಲೆಟ್ ಎಲೀನರ್ ಎಂಗಲ್ಹಾರ್ಟ್​ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಗುವನ್ನು ಉಳಿಸಲು ನಿರಂತರ ಪ್ರಯತ್ನ ಮಾಡಿ ಕೊನೆಗೂ ಮಗು ಬದುಕುಳಿದಿದೆ.

ಪೆಟ್ರೋಲಿಯಾ ಲಂಡನ್‌ನಿಂದ 100 ಕಿಲೋಮೀಟರ್ ದೂರದಲ್ಲಿದೆ ಮತ್ತು ಆಸ್ಪತ್ರೆಯಲ್ಲಿ ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಇದೆ. ಆ ದಿನ ಲ್ಯಾಬ್ ಕೆಲಸಗಾರರು ಮತ್ತು ನರ್ಸ್​ಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ತಾವು ಮಾಡುವ ಕೆಲಸ ನಿಲ್ಲಿಸದರು, ಮಗು ವೇಲಾನ್ ಜೀವ ಉಳಿಸುವ ಕಾರ್ಯದಲ್ಲಿ ಸಹಾಯ ಮಾಡಲು ಶುರು ಮಾಡಿದರು.

ಮೂರು ಗಂಟೆಗಳ ಕಾಲ ಮಗುವಿಗೆ ಸಿಪಿಆರ್​ ಅನ್ನು ಪರ್ಯಾಯವಾಗಿ ನೀಡಿದರು. ಇದು ನಿಜವಾಗಿಯೂ ತಂಡದ ಪ್ರಯತ್ನವಾಗಿತ್ತು, ಲ್ಯಾಬ್​ ಟೆಕ್​ಗಳು ಕೊಠಡಿಯಲ್ಲಿ ಪೋರ್ಟಬಲ್ ಹೀಟರ್​ಗಳನ್ನು ಹಿಡಿದಿದ್ದರು, ಇಎಂಎಸ್ ಸಿಬ್ಬಂದಿ ಕೂಡ ಕಂಪ್ರೆಸರ್​ಗಳ ಮೂಲಕ ವಾಯುಮಾರ್ಗ ನಿರ್ವಹಿಸುವಲ್ಲಿ ಸಹಾಯ ಮಾಡಿದರು. ಮೆಲಾನ್ ಫೆಬ್ರವರಿ 6 ರಂದು ಆಸ್ಪತ್ರೆಯಿಂದ ಬಿಡುಗಡೆಯಾಯಿತು. ಪೋಷಕರು ಮಗುವಿಗೆ ಮರುಜನ್ಮ ನೀಡಿದ ವೈದ್ಯರಿಗೆ ಧನ್ಯವಾದ ಅರ್ಪಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?