AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ.

ವೈದ್ಯಲೋಕದ ಅಚ್ಚರಿ: 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿತ್ತು, ಮಗುವಿಗೆ ಮತ್ತೆ ಉಸಿರುಕೊಟ್ಟ ವೈದ್ಯರಿಗೊಂದು ಸಲಾಂ
ಮಗು ವೇಲಾನ್Image Credit source: NDTV
ನಯನಾ ರಾಜೀವ್
|

Updated on: Feb 23, 2023 | 8:38 AM

Share

ಒಮ್ಮೆ ಹೃದಯ ಬಡಿತ ನಿಂತು ಹೋದರೆ ಬದುಕಿ ಬರುವ ಮಾತೆಲ್ಲಿ, ಆದರೆ ಈ ಮಗು ಸಾವನ್ನೂ ಗೆದ್ದು ಬಂದಿದೆ. ಸತತ 3 ಗಂಟೆಗಳ ಕಾಲ ಹೃದಯ ಬಡಿತ ನಿಂತಿದ್ದರೂ, ವೈದ್ಯರು ಮಗುವನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ. ಇದು ವೈದ್ಯಲೋಕದ ಅಚ್ಚರಿ ಎಂದೇ ಹೇಳಬಹುದು. ಹೋಂ ಡೇ ಕೇರ್​ನ ಹೊರಾಂಗಣದಲ್ಲಿ ಆಡುತ್ತಿದ್ದ 20 ತಿಂಗಳ ಮಗು ಅರಿವಿಲ್ಲದೆ ಈಜುಕೊಳಕ್ಕೆ ಬಿದ್ದಿತ್ತು. ಪ್ರಜ್ಞೆ ತಪ್ಪಿತ್ತು, ಅಗ್ನಿಶಾಮಕ ಸಿಬ್ಬಂದಿ ಮಗುವನ್ನು ಆಸ್ಪತ್ರೆಗೆ ಕರೆತಂದಾಗ ಮಗು ನಿರ್ಜೀವವಾಗಿತ್ತು. ಈ ಘಟನೆ ನಡೆದಿದ್ದು, ಕೆನಡಾದಲ್ಲಿ.

ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಗುವಿನ ಹೃದಯ ಬಡಿತ ನಿಂತಿತ್ತು, ಆದರೂ ವೈದ್ಯರು ನೋಡಿಯೇ ಬಿಡೋಣ ಮಗು ಬದುಕಿದರೂ ಬದುಕಬಹುದು ಎಂದು ನಿರ್ಧಾರ ಮಾಡಿದರು. ಅಲ್ಲಿನ ಷಾರ್ಲೆಟ್ ಎಲೀನರ್ ಎಂಗಲ್ಹಾರ್ಟ್​ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮಗುವನ್ನು ಉಳಿಸಲು ನಿರಂತರ ಪ್ರಯತ್ನ ಮಾಡಿ ಕೊನೆಗೂ ಮಗು ಬದುಕುಳಿದಿದೆ.

ಪೆಟ್ರೋಲಿಯಾ ಲಂಡನ್‌ನಿಂದ 100 ಕಿಲೋಮೀಟರ್ ದೂರದಲ್ಲಿದೆ ಮತ್ತು ಆಸ್ಪತ್ರೆಯಲ್ಲಿ ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಇದೆ. ಆ ದಿನ ಲ್ಯಾಬ್ ಕೆಲಸಗಾರರು ಮತ್ತು ನರ್ಸ್​ಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ತಾವು ಮಾಡುವ ಕೆಲಸ ನಿಲ್ಲಿಸದರು, ಮಗು ವೇಲಾನ್ ಜೀವ ಉಳಿಸುವ ಕಾರ್ಯದಲ್ಲಿ ಸಹಾಯ ಮಾಡಲು ಶುರು ಮಾಡಿದರು.

ಮೂರು ಗಂಟೆಗಳ ಕಾಲ ಮಗುವಿಗೆ ಸಿಪಿಆರ್​ ಅನ್ನು ಪರ್ಯಾಯವಾಗಿ ನೀಡಿದರು. ಇದು ನಿಜವಾಗಿಯೂ ತಂಡದ ಪ್ರಯತ್ನವಾಗಿತ್ತು, ಲ್ಯಾಬ್​ ಟೆಕ್​ಗಳು ಕೊಠಡಿಯಲ್ಲಿ ಪೋರ್ಟಬಲ್ ಹೀಟರ್​ಗಳನ್ನು ಹಿಡಿದಿದ್ದರು, ಇಎಂಎಸ್ ಸಿಬ್ಬಂದಿ ಕೂಡ ಕಂಪ್ರೆಸರ್​ಗಳ ಮೂಲಕ ವಾಯುಮಾರ್ಗ ನಿರ್ವಹಿಸುವಲ್ಲಿ ಸಹಾಯ ಮಾಡಿದರು. ಮೆಲಾನ್ ಫೆಬ್ರವರಿ 6 ರಂದು ಆಸ್ಪತ್ರೆಯಿಂದ ಬಿಡುಗಡೆಯಾಯಿತು. ಪೋಷಕರು ಮಗುವಿಗೆ ಮರುಜನ್ಮ ನೀಡಿದ ವೈದ್ಯರಿಗೆ ಧನ್ಯವಾದ ಅರ್ಪಿಸಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ