AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೆಟ್ಟು ನಿಂತ ಕೆನಡಾ ಪ್ರಧಾನಿ ಪ್ರಯಾಣಿಸಬೇಕಿದ್ದ ವಿಮಾನ, ಮುಜುಗರ ಅನುಭವಿಸಿದ ಟ್ರುಡೊ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ(Justin Trudeau) ಪ್ರಯಾಣಿಸಬೇಕಿದ್ದ ವಿಮಾನ ಮತ್ತೆ ಕೈಕೊಟ್ಟಿದ್ದು, ತೀವ್ರ ಮುಜುಗರ ಅನುಭವಿಸಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ವಿಮಾನ ಕೆಟ್ಟು ನಿಂತಿರುವುದು ಇದು ಎರಡನೇ ಬಾರಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ G20 ಸಮಯದಲ್ಲಿ ಭಾರತದಲ್ಲಿ ಟ್ರೂಡೊ ಅವರ ವಿಮಾನವು ಕೆಟ್ಟುಹೋಯಿತು, ಇದರಿಂದಾಗಿ ಕೆನಡಾದ ಪ್ರಧಾನಿ ಇನ್ನೂ ಎರಡು ದಿನಗಳ ಕಾಲ ಭಾರತದಲ್ಲಿ ಉಳಿಯಬೇಕಾಯಿತು.

ಮತ್ತೆ ಕೆಟ್ಟು ನಿಂತ ಕೆನಡಾ ಪ್ರಧಾನಿ ಪ್ರಯಾಣಿಸಬೇಕಿದ್ದ ವಿಮಾನ, ಮುಜುಗರ ಅನುಭವಿಸಿದ ಟ್ರುಡೊ
ಜಸ್ಟಿನ್Image Credit source: NDTV
ನಯನಾ ರಾಜೀವ್
|

Updated on: Jan 07, 2024 | 8:21 AM

Share

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ(Justin Trudeau) ಪ್ರಯಾಣಿಸಬೇಕಿದ್ದ ವಿಮಾನ ಮತ್ತೆ ಕೈಕೊಟ್ಟಿದ್ದು, ತೀವ್ರ ಮುಜುಗರ ಅನುಭವಿಸಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ ವಿಮಾನ ಕೆಟ್ಟು ನಿಂತಿರುವುದು ಇದು ಎರಡನೇ ಬಾರಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ G20 ಸಮಯದಲ್ಲಿ ಭಾರತದಲ್ಲಿ ಟ್ರೂಡೊ ಅವರ ವಿಮಾನವು ಕೆಟ್ಟುಹೋಯಿತು, ಇದರಿಂದಾಗಿ ಕೆನಡಾದ ಪ್ರಧಾನಿ ಇನ್ನೂ ಎರಡು ದಿನಗಳ ಕಾಲ ಭಾರತದಲ್ಲಿ ಉಳಿಯಬೇಕಾಯಿತು.

ಕೆನಡಾದ ಪ್ರಧಾನಿ ಡಿಸೆಂಬರ್ 26 ರಂದು ಕುಟುಂಬ ವಿಹಾರಕ್ಕಾಗಿ ಜಮೈಕಾಗೆ ಹೋಗಿದ್ದರು, ಅಲ್ಲಿ ಅವರು ತಮ್ಮ ಕುಟುಂಬದೊಂದಿಗೆ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು, ಆದರೆ ಗುರುವಾರ, ಅವರು ಹಿಂದಿರುಗುವಾಗ, ಅವರ ವಿಮಾನವು ಕೆಟ್ಟನಿಂತಿತ್ತು, ಇದರಿಂದಾಗಿ ಅವರು ಒಂದು ದಿನ ಅಲ್ಲೇ ಉಳಿಯಬೇಕಾಯಿತು.

ರಾಷ್ಟ್ರೀಯ ರಕ್ಷಣಾ ಇಲಾಖೆಯು ಜಮೈಕಾಕ್ಕೆ ಎರಡನೇ ವಿಮಾನವನ್ನು ಕಳುಹಿಸಿದೆ ಎಂದು ಕೆನಡಾದ ಔಟ್ಲೆಟ್ CBC ನ್ಯೂಸ್ ಶುಕ್ರವಾರ ವರದಿ ಮಾಡಿದೆ. ಕೆನಡಾದ ವಾರ್ತಾಪತ್ರಿಕೆ ನ್ಯಾಷನಲ್ ಪೋಸ್ಟ್ ಈ ಹಿಂದೆ ಟ್ರೂಡೊ ತನ್ನ ರಜೆಯ ಪ್ರಯಾಣಕ್ಕೆ ತಾನೇ ಪಾವತಿಸುತ್ತಿರುವುದಾಗಿ ಹೇಳಿದ್ದಾಗಿ ವರದಿ ಮಾಡಿತ್ತು.

ಮತ್ತಷ್ಟು ಓದಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬ

ಟ್ರುಡೊ ಅವರ ವಿಮಾನ ಎಷ್ಟು ಹಳೆಯದು? ಟ್ರುಡೊ ಅವರ ಪ್ರಸ್ತುತ ವಿಮಾನವು 36 ವರ್ಷ ಹಳೆಯದು. ಅಕ್ಟೋಬರ್ 2016 ರಲ್ಲಿ, ಅದು ಟೇಕ್ ಆಫ್ ಆದ ಅರ್ಧ ಗಂಟೆಯ ನಂತರ ಒಟ್ಟಾವಾ (ಕೆನಡಾದ ರಾಜಧಾನಿ) ಗೆ ಮರಳಿತು. ಆ ಸಮಯದಲ್ಲಿ ಟ್ರುಡೊ ಬೆಲ್ಜಿಯಂಗೆ ಭೇಟಿ ನೀಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ