ಕರೀಮಾ ಬಲೂಚ್ ಹತ್ಯೆಯಾದಾಗ ಕೆನಡಾ ಯಾಕೆ ಮೌನವಹಿಸಿತ್ತು? ಮಾನವ ಹಕ್ಕು ಸಂಸ್ಥೆ ಪ್ರಶ್ನೆ; ಯಾರಿದು ಕರೀಮಾ?

Baloch Human Rights Activists: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಹರ್ದೀಪ್ ಸಿಂಗ್ ನಿಜ್ಜರ್​ರ ಹತ್ಯೆ ವಿರುದ್ಧ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಬಲೂಚಿಸ್ತಾನದ ಮಾನವ ಹಕ್ಕು ಹೋರಾಟಗಾರ್ತಿಯಾಗಿದ್ದ ಕರೀಮಾ ಬಲೂಚ್ ಅವರ ಹತ್ಯೆ ಬಗ್ಗೆ ಪ್ರಧಾನಿ ಜಸ್ಟಿನ್ ಟ್ರುಡೋ ಮೌನ ವಹಿಸಿದ್ದು ಅಚ್ಚರಿ ಎನಿಸುತ್ತದೆ. ಕೆನಡಿಯನ್ ಸರ್ಕಾರದ ವೈರುದ್ಧ್ಯತೆ ಇಲ್ಲಿ ಗೋಚರವಾಗುತ್ತದೆ. ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯಿಂದ ನಡೆಯುತ್ತಿರುವ ಮಾನವ ಹಕ್ಕು ಉಲ್ಲಂಘನೆ ವಿಚಾರದಲ್ಲಿ ಕೆನಡಾ ನಿಲುವು ಕೂಡ ಪ್ರಶ್ನಾರ್ಹವಾಗಿದೆ ಎಂದು ಬಲೂಚಿಸ್ತಾನ್ ಮಾನವ ಹಕ್ಕು ಮಂಡಳಿ ಅಧ್ಯಕ್ಷ ಡಾ. ಜಾಫರ್ ಜಾವೇದ್ ಹೇಳಿದ್ದಾರೆ.

ಕರೀಮಾ ಬಲೂಚ್ ಹತ್ಯೆಯಾದಾಗ ಕೆನಡಾ ಯಾಕೆ ಮೌನವಹಿಸಿತ್ತು? ಮಾನವ ಹಕ್ಕು ಸಂಸ್ಥೆ ಪ್ರಶ್ನೆ; ಯಾರಿದು ಕರೀಮಾ?
ಕರೀಮಾ ಬಲೂಚ್
Follow us
|

Updated on: Sep 24, 2023 | 4:43 PM

ಒಟ್ಟಾವ, ಸೆಪ್ಟೆಂಬರ್ 24: ಖಲಿಸ್ತಾನೀ ಪ್ರತ್ಯೇಕತಾವಾದಿ ಹೋರಾಟಗಾರ ಹರ್ದೀಪ್ ಸಿಂಗ್ ನಿಜ್ಜರ್​ನನ್ನು (Hardeep Singh Nijjar) ಸಿಖ್ ಗುರುದ್ವಾರದ ಬಳಿ ಹತ್ಯೆಗೈಯಲಾದ ಘಟನೆಯನ್ನು ಕೆನಡಾ ಗಂಭೀರವಾಗಿ ಪರಿಗಣಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರುದ್ಧ ದೊಡ್ಡ ಧ್ವನಿ ಎತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆನಡಾದ ಬಲೂಚ್ ಮಾನವ ಹಕ್ಕು ಸಮಿತಿ (Baloch Human Rights Coucil of Canada), ಕರೀಮಾ ಬಲೂಚ್ ಹತ್ಯೆ ಘಟನೆಯನ್ನು ಪ್ರಸ್ತಾಪಿಸಿದೆ. ನಿಜ್ಜರ್ ಹತ್ಯೆಯಲ್ಲಿ ಭಾರತ ವಿರುದ್ಧ ಕ್ರಮ ಕೈಗೊಂಡಿರುವ ಕೆನಡಾ, ಕರೀಮಾ ಬಲೂಚ್ ಹತ್ಯೆ ಘಟನೆಯಲ್ಲಿ ಪಾಕಿಸ್ತಾನದ ಮೇಲೆ ಯಾಕೆ ಯಾವ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿ ಮಾನವ ಹಕ್ಕು ಸಂಸ್ಥೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರಿಗೆ ಪತ್ರ ಬರೆದಿದೆ.

‘ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಹರ್ದೀಪ್ ಸಿಂಗ್ ನಿಜ್ಜರ್​ರ ಹತ್ಯೆ ವಿರುದ್ಧ ಭಾಷಣ ಮತ್ತು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಬಲೂಚಿಸ್ತಾನದ ಮಾನವ ಹಕ್ಕು ಹೋರಾಟಗಾರ್ತಿಯಾಗಿದ್ದ ಕರೀಮಾ ಬಲೂಚ್ ಅವರ ಹತ್ಯೆ ಬಗ್ಗೆ ಪ್ರಧಾನಿ ಜಸ್ಟಿನ್ ಟ್ರುಡೋ ಮೌನ ವಹಿಸಿದ್ದು ಅಚ್ಚರಿ ಎನಿಸುತ್ತದೆ. ಕೆನಡಿಯನ್ ಸರ್ಕಾರದ ವೈರುದ್ಧ್ಯತೆ ಇಲ್ಲಿ ಗೋಚರವಾಗುತ್ತದೆ. ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯಿಂದ ನಡೆಯುತ್ತಿರುವ ಮಾನವ ಹಕ್ಕು ಉಲ್ಲಂಘನೆ ವಿಚಾರದಲ್ಲಿ ಕೆನಡಾ ನಿಲುವು ಕೂಡ ಪ್ರಶ್ನಾರ್ಹವಾಗಿದೆ’ ಎಂದು ಬಲೂಚಿಸ್ತಾನ್ ಮಾನವ ಹಕ್ಕು ಮಂಡಳಿ ಅಧ್ಯಕ್ಷ ಡಾ. ಜಾಫರ್ ಜಾವೇದ್ ಹೇಳಿದ್ದಾರೆ.

ಇದನ್ನೂ ಓದಿ: ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳ ಹತ್ಯೆಗೆ ಕರೆ; ಗುರುದ್ವಾರದ ಪೋಸ್ಟರ್ ತೆಗೆಯಲು ಆದೇಶ

ಯಾರಿದು ಕರೀಮಾ ಬಲೂಚ್?

ಪಾಕಿಸ್ತಾನದಲ್ಲಿ ಪ್ರತ್ಯೇಕ ಬಲೂಚಿಸ್ತಾನ್ ದೇಶಕ್ಕಾಗಿ ಹೋರಾಟ ನಡೆಯುತ್ತಿದೆ. ಅದನ್ನು ನಿಯಂತ್ರಿಸಲು ಪಾಕಿಸ್ತಾನ ಸೇನೆ ಸಾಕಷ್ಟು ಸಂಖ್ಯೆಯಲ್ಲಿ ಬಲೂಚಿಸ್ತಾನದಲ್ಲಿ ನಿಯೋಜಿತವಾಗಿದೆ. ಅಲ್ಲಿ ಹೇರಳವಾಗಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುತ್ತಿದ್ದವರಲ್ಲಿ ಕರೀಮಾ ಬಲೂಚ್ ಒಬ್ಬಳು. ಆಜಾದ್ ಎಂಬ ಬಲೂಚ್ ಸ್ಟುಡೆಂಟ್ಸ್ ಆರ್ಗನೈಸೇಶನ್​ನ ಅಧ್ಯಕ್ಷೆಯಾಗಿ ಅವರು ಕಾನೂನು ಮಾರ್ಗದಲ್ಲಿ ಹೋರಾಟ ನಡೆಸುತ್ತಿದ್ದಳು.

ಬಲೂಚಿ ವ್ಯಕ್ತಿಗಳ ಕೊಲೆ, ನಾಪತ್ತೆ ಘಟನೆಗಳ ವಿರುದ್ಧ ಧ್ವನಿ ಎತ್ತುತ್ತಿದ್ದ ಕರೀಮಾ ಬಲೂಚ್ ಅವರೆಯೇ ನಿಗೂಢವಾಗಿ ನಾಪತ್ತೆಯಾಗಿದ್ದರು. ಪಾಕಿಸ್ತಾನದಿಂದ ಬಹಿಷ್ಕೃತಗೊಂಡು ಕೆನಡಾದ ಟೊರಂಟೋದಲ್ಲಿ ಇದ್ದ ಕರೀಮಾ ಬಲೂಚ್ 2020ರ ಡಿಸೆಂಬರ್ 20ರಂದು ನಾಪತ್ತೆಯಾಗಿದ್ದರು. ಒಂದು ದಿನದ ಬಳಿಕ ಲೇಕ್ ಒಂಟಾರಿಯೋ ಬಳಿ ಆಕೆಯ ಶವ ಪತ್ತೆಯಾಗಿತ್ತು.

ಇದನ್ನೂ ಓದಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಕುರಿತು ಪ್ರಧಾನಿ ಟ್ರುಡೊ ಹೇಳಿಕೆಯ ಹಿಂದೆ ಗುಪ್ತಚರ: ಅಮೆರಿಕ ರಾಯಭಾರಿ

ಆಕೆಯನ್ನು ಕೊಲೆ ಮಾಡಲಾಗಿದ್ದು ಪಾಕಿಸ್ತಾನದ ಕೈವಾಡ ಇದ್ದಿರಬಹುದು ಎಂಬ ಅನುಮಾನಗಳಿದ್ದವು. ಆದರೆ, ಕೆನಡಾದ ಅಧಿಕಾರಿಗಳು ಈ ಘಟನೆಯಲ್ಲಿ ಅನುಮಾನ ಪಡುವಂಥದ್ದು ಏನೂ ಇಲ್ಲ ಎಂದು ಕ್ಲೀನ್ ಚಿಟ್ ಕೊಟ್ಟುಬಿಟ್ಟಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ