Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಎಚ್ಚರಿಕೆ ಬೆನ್ನಲ್ಲೇ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡ ಕೆನಡಾ

India- Canada Row: ಕೆನಡಾ ಮುಂಬೈ, ಬೆಂಗಳೂರು ಮತ್ತು ಚಂಡೀಗಢದಲ್ಲಿರುವ ತನ್ನ ಕಾನ್ಸುಲೇಟ್‌ಗಳಲ್ಲಿ ಎಲ್ಲಾ ವೈಯಕ್ತಿಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕಾನ್ಸುಲರ್ ನೆರವು ಅಗತ್ಯವಿರುವವರು ನವದೆಹಲಿಯಲ್ಲಿರುವ ರಾಯಭಾರ ಕಚೇರಿಗೆ ಭೇಟಿ ನೀಡುವಂತೆ ಅಥವಾ ಫೋನ್ ಅಥವಾ ಇಮೇಲ್ ಮೂಲಕ ಸಂಪರ್ಕಿಸಲು ಒತ್ತಾಯಿಸಲಾಗಿದೆ.

ಭಾರತದ ಎಚ್ಚರಿಕೆ ಬೆನ್ನಲ್ಲೇ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡ ಕೆನಡಾ
ಕೆನಡಾ- ಭಾರತ
Follow us
ರಶ್ಮಿ ಕಲ್ಲಕಟ್ಟ
|

Updated on: Oct 20, 2023 | 12:46 PM

ದೆಹಲಿ ಅಕ್ಟೋಬರ್ 20: ಖಲಿಸ್ತಾನಿ ಭಯೋತ್ಪಾದಕನ (Khalistani terrorist) ಹತ್ಯೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದ ನಡುವೆಯೇ ಭಾರತದ ಎಚ್ಚರಿಕೆ ನಂತರ ಕೆನಡಾ (Canada) ಇಂದು (ಶುಕ್ರವಾರ) 41 ರಾಜತಾಂತ್ರಿಕರನ್ನು ಭಾರತದಿಂದ ಹಿಂತೆಗೆದುಕೊಂಡಿದೆ. ವಿನಾಯಿತಿ ಕಳೆದುಕೊಳ್ಳುವುದು ಅಧಿಕಾರಿಗಳನ್ನು ಅಪಾಯಕ್ಕೆ ಸಿಲುಕಿಸುತ್ತದೆ ಎಂದು ಕೆನಡಾ ಹೇಳಿದೆ. ಕೆನಡಾದ ಹತ್ತಾರು ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳು ನಡೆಯುತ್ತಿರುವ ಗದ್ದಲದ ನಡುವೆ ಭಾರತವನ್ನು ತೊರೆದಿದ್ದಾರೆ.  ಏಕೆಂದರೆ ಭಾರತವು ಅವರ ರಾಜತಾಂತ್ರಿಕ ವಿನಾಯಿತಿಯನ್ನು  ಹಿಂತೆಗೆದುಕೊಳ್ಳಲು ಯೋಜಿಸಿದೆ ಎಂದು ಕೆನಡಾದ ವಿದೇಶಾಂಗ ಸಚಿವ ಮೆಲಾನಿ ಜೋಲಿ (Melanie Joly) ಹೇಳಿದ್ದಾರೆ. ಭಾರತದಲ್ಲಿ ಕೆನಡಾದ ರಾಯಭಾರ ಕಚೇರಿ ಮತ್ತು ಕಾನ್ಸುಲೇಟ್‌ಗಳಿಗೆ ಕೇವಲ 21 ಅಧಿಕಾರಿಗಳನ್ನು ಮಾತ್ರ ಇದ್ದಾರೆ ಎಂದು ಜೋಲಿ ಹೇಳಿದ್ದಾರೆ.

ಕಡಿಮೆ ರಾಜತಾಂತ್ರಿಕ ಸಿಬ್ಬಂದಿಯೊಂದಿಗೆ, ಭಾರತದಲ್ಲಿ ಕೆನಡಾದ ಕಚೇರಿಗಳಿಂದ ಕಡಿಮೆ ಸೇವೆ ಇರುತ್ತದೆ ಹಾಗಾಗಿ ವೀಸಾ ಮತ್ತು ವಲಸೆಗಾಗಿರುವ ಪ್ರಕ್ರಿಯೆ ಸಮಯ ಹಿಡಿಯುತ್ತದೆ. ವಲಸೆ ಮತ್ತು ವೀಸಾ ಪ್ರಕ್ರಿಯೆ “ತೀವ್ರವಾಗಿ ಮೊಟಕುಗೊಳಿಸಲಾಗುವುದು” ಎಂದು ಕೆನಡಾದ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತಕ್ಕೆ ಪ್ರಯಾಣಿಸುವ ನಾಗರಿಕರಿಗೆ ಕೆನಡಾ ಸಲಹೆಯನ್ನು ನೀಡಿದ್ದು ಎಚ್ಚರಿಕೆ ವಹಿಸುವಂತೆ ಒತ್ತಾಯಿಸಿದೆ. ದೇಶದಾದ್ಯಂತ ಭಯೋತ್ಪಾದಕ ದಾಳಿಯ ಬೆದರಿಕೆಯಿಂದಾಗಿ ಭಾರತದಲ್ಲಿ ಹೆಚ್ಚಿನ ಮಟ್ಟದ ಎಚ್ಚರಿಕೆಯನ್ನು ವಹಿಸಿ ಎಂದು ಕೆನಡಾ ಹೇಳಿದೆ.

ಕೆನಡಾ ಮುಂಬೈ, ಬೆಂಗಳೂರು ಮತ್ತು ಚಂಡೀಗಢದಲ್ಲಿರುವ ತನ್ನ ಕಾನ್ಸುಲೇಟ್‌ಗಳಲ್ಲಿ ಎಲ್ಲಾ ವೈಯಕ್ತಿಕ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕಾನ್ಸುಲರ್ ನೆರವು ಅಗತ್ಯವಿರುವವರು ನವದೆಹಲಿಯಲ್ಲಿರುವ ರಾಯಭಾರ ಕಚೇರಿಗೆ ಭೇಟಿ ನೀಡುವಂತೆ ಅಥವಾ ಫೋನ್ ಅಥವಾ ಇಮೇಲ್ ಮೂಲಕ ಸಂಪರ್ಕಿಸಲು ಒತ್ತಾಯಿಸಲಾಗಿದೆ.

ಕಳೆದ ವರ್ಷ ಕೆನಡಾದಲ್ಲಿ ಖಾಯಂ ನಿವಾಸಿಗಳು, ತಾತ್ಕಾಲಿಕ ವಿದೇಶಿ ಕೆಲಸಗಾರರು ಮತ್ತು ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ಉನ್ನತ ಮೂಲ ಭಾರತವಾಗಿತ್ತು. ಕೆನಡಾದ ವಲಸೆ ಸಚಿವ ಮಾರ್ಕ್ ಮಿಲ್ಲರ್ ಅವರು ಭಾರತೀಯ ವಲಸಿಗರನ್ನು ಸ್ವಾಗತಿಸುವುದನ್ನು ಮುಂದುವರಿಸುವುದಾಗಿ ಭರವಸೆ ನೀಡಿದ್ದಾರೆ, ಆದರೆ ವೀಸಾ ಪ್ರಕ್ರಿಯೆಯು ಕನಿಷ್ಠ ಅಲ್ಪಾವಧಿಯಿಂದ ಮಧ್ಯಮ ಅವಧಿಯವರೆಗೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.

ಸಿಬ್ಬಂದಿ ಕಡಿತವು ಡಿಸೆಂಬರ್ ಅಂತ್ಯದ ವೇಳೆಗೆ 17,500 ಅಪ್ಲಿಕೇಶನ್ ಬಾಕಿ ಉಳಿದಿದೆ, ಆದರೂ ಪ್ರಕ್ರಿಯೆಯು 2024 ರ ಆರಂಭದಲ್ಲಿ ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಎಂದು ಕೆನಡಾ ಅಧಿಕಾರಿಯನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಇದನ್ನೂ ಓದಿ:  ಭಾರತದಲ್ಲಿ ಬೆದರಿಕೆ ಅಥವಾ ಕಿರುಕುಳದ ಸಾಧ್ಯತೆಯ ಬಗ್ಗೆ ತಮ್ಮ ನಾಗರಿಕರಿಗೆ ಎಚ್ಚರಿಕೆ ನೀಡಿದ ಕೆನಡಾ

ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ಉಂಟಾಗಿದೆ. 2020 ರಲ್ಲಿ ಭಾರತವು ಭಯೋತ್ಪಾದಕ ಎಂದು ಹೆಸರಿಸಲ್ಪಟ್ಟ ನಿಜ್ಜಾರ್ ನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದಲ್ಲಿ ಮುಸುಕುಧಾರಿ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಕೆನಡಾದ ಭದ್ರತಾ ಏಜೆನ್ಸಿಗಳು ಭಾರತ ಸರ್ಕಾರದ ಏಜೆಂಟ್‌ಗಳು ಮತ್ತು ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜಾರ್ ಅವರ ಹತ್ಯೆಯ ನಡುವಿನ ಸಂಭಾವ್ಯ ಸಂಪರ್ಕದ ವಿಶ್ವಾಸಾರ್ಹ ಆರೋಪಗಳನ್ನು ಸಕ್ರಿಯವಾಗಿ ಅನುಸರಿಸುತ್ತಿವೆ. ಕೆನಡಾದ ನೆಲದಲ್ಲಿ ಕೆನಡಾದ ಪ್ರಜೆಯ ಹತ್ಯೆಯಲ್ಲಿ ವಿದೇಶಿ ಸರ್ಕಾರದ ಯಾವುದೇ ಒಳಗೊಳ್ಳುವಿಕೆ ನಮ್ಮ ಸಾರ್ವಭೌಮತ್ವದ ಸ್ವೀಕಾರಾರ್ಹವಲ್ಲದ ಉಲ್ಲಂಘನೆಯಾಗಿದೆ ಎಂದು ಟ್ರುಡೊ ಹೇಳಿದರು.

ಟ್ರುಡೊ ಅವರ, ಆರೋಪಗಳನ್ನು ಭಾರತ “ಅಸಂಬದ್ಧ” ಮತ್ತು “ಪ್ರಚೋದಿತ” ಎಂದು ಕರೆದಿದೆ. ಇದರ ನಂತರ ಎರಡೂ ಕಡೆಯವರು ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿದ್ದು ಮತ್ತು ಪ್ರಯಾಣ ಸಲಹೆಗಳನ್ನು ನೀಡಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ