AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir Inauguration: ಜನವರಿ 22ನ್ನು ಅಯೋಧ್ಯೆ ರಾಮ ಮಂದಿರ ದಿನವನ್ನಾಗಿ ಘೋಷಿಸಿದ ಕೆನಡಾ

ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಇಡೀ ಭಾರತದ ಜನರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆದರೂ ಜಗತ್ತಿನಾದ್ಯಂತ ರಾಮನ ಪ್ರತಿಧ್ವನಿ ಮೊಳಗಲಿದೆ. ಕೆನಡಾ ಜನವರಿ 22 ರಂದು ಅಯೋಧ್ಯೆ ರಾಮ ದಿನ ಎಂದು ಘೋಷಿಸಲು ನಿರ್ಧರಿಸಿದೆ.

Ram Mandir Inauguration: ಜನವರಿ 22ನ್ನು ಅಯೋಧ್ಯೆ ರಾಮ ಮಂದಿರ ದಿನವನ್ನಾಗಿ ಘೋಷಿಸಿದ ಕೆನಡಾ
ರಾಮ ಮಂದಿರImage Credit source: India Today
ನಯನಾ ರಾಜೀವ್
|

Updated on:Jan 22, 2024 | 8:12 AM

Share

ರಾಮಮಂದಿರ(Ram Mandir) ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಇಡೀ ಭಾರತದ ಜನರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆದರೂ ಜಗತ್ತಿನಾದ್ಯಂತ ರಾಮನ ಪ್ರತಿಧ್ವನಿ ಮೊಳಗಲಿದೆ. ಕೆನಡಾ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ದಿನ ಎಂದು ಘೋಷಿಸಲು ನಿರ್ಧರಿಸಿದೆ.

ಕೆನಡಾದ ಮೂರು ಪುರಸಭೆಗಳು ಜನವರಿ 22 ಅನ್ನು ಅಯೋಧ್ಯೆ ರಾಮಮಂದಿರ ದಿನ ಎಂದು ಘೋಷಿಸಿವೆ. ಹಿಂದೂ ಕೆನಡಿಯನ್ ಫೌಂಡೇಶನ್ (ಎಚ್‌ಸಿಎಫ್) ಸಂಸ್ಥಾಪಕ ಮತ್ತು ಅಧ್ಯಕ್ಷ ಅರುಣೇಶ್ ಗಿರಿ ಮಾತನಾಡಿ, ವಿಶ್ವ ಜೈನ್ ಸಂಘಟನೆ ಕೆನಡಾ (ವಿಜೆಎಸ್‌ಸಿ) ಸಹಯೋಗದೊಂದಿಗೆ ಎಚ್‌ಸಿಎಫ್ ಜನವರಿ 22, 2024 ರಂದು ಮೂರು ನಗರಗಳಾದ ಬ್ರಾಂಪ್ಟನ್, ಓಕ್‌ವಿಲ್ಲೆ ಮತ್ತು ಬ್ರಾಂಟ್‌ಫೋರ್ಡ್‌ನಲ್ಲಿ ಅಯೋಧ್ಯೆ ರಾಮಮಂದಿರ ದಿನವನ್ನು ಯಶಸ್ವಿಯಾಗಿ ಘೋಷಿಸಿದೆ.

ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಅವರು ತಮ್ಮ ಪ್ರಕಟಣೆಯಲ್ಲಿ ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಬಗ್ಗೆ ಮಾತನಾಡಿದ್ದಾರೆ. ಕೆನಡಾದ ಹೊರತಾಗಿ, ಮಾರಿಷಸ್ ಕೂಡ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಂದು ತನ್ನ ಯೋಜನೆಗಳನ್ನು ಘೋಷಿಸಿದೆ.

ಮತ್ತಷ್ಟು ಓದಿ: ಜಪಾನ್​ನಲ್ಲಿ ರಾಮಭಕ್ತಿ ಮೆರೆದ ಕನ್ನಡಿಗರು, ಸೊಗಸಾದ ರಾಮಾಯಣ ರೂಪಕ

ಮಾರಿಷಸ್‌ನಲ್ಲಿ ಈ ದಿನವನ್ನು ಸ್ಮರಣೀಯವಾಗಿಸಲು, ದೀಪಗಳನ್ನು ಬೆಳಗಿಸಲಾಗುತ್ತದೆ. ಅಷ್ಟೇ ಅಲ್ಲ ಅಲ್ಲಿ ರಾಮಾಯಣ ಪಾರಾಯಣವೂ ನಡೆಯಲಿದೆ.

ಪ್ರಾಣ ಪ್ರತಿಷ್ಠೆಯ ದಿನದಂದು ಮಾರಿಷಸ್‌ನ ಎಲ್ಲಾ ದೇವಾಲಯಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಮತ್ತು ರಾಮಾಯಣವನ್ನು ಪಠಿಸಲಾಗುವುದು. ಮಾರಿಷಸ್ ಸರ್ಕಾರವು ಸರ್ಕಾರಿ ಹಿಂದೂ ನೌಕರರಿಗೆ ಜನವರಿ 22 ರಂದು ರಜೆ ನೀಡಲು ನಿರ್ಧರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:12 am, Mon, 22 January 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು