AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir Inauguration: ಜನವರಿ 22ನ್ನು ಅಯೋಧ್ಯೆ ರಾಮ ಮಂದಿರ ದಿನವನ್ನಾಗಿ ಘೋಷಿಸಿದ ಕೆನಡಾ

ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಇಡೀ ಭಾರತದ ಜನರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆದರೂ ಜಗತ್ತಿನಾದ್ಯಂತ ರಾಮನ ಪ್ರತಿಧ್ವನಿ ಮೊಳಗಲಿದೆ. ಕೆನಡಾ ಜನವರಿ 22 ರಂದು ಅಯೋಧ್ಯೆ ರಾಮ ದಿನ ಎಂದು ಘೋಷಿಸಲು ನಿರ್ಧರಿಸಿದೆ.

Ram Mandir Inauguration: ಜನವರಿ 22ನ್ನು ಅಯೋಧ್ಯೆ ರಾಮ ಮಂದಿರ ದಿನವನ್ನಾಗಿ ಘೋಷಿಸಿದ ಕೆನಡಾ
ರಾಮ ಮಂದಿರImage Credit source: India Today
ನಯನಾ ರಾಜೀವ್
|

Updated on:Jan 22, 2024 | 8:12 AM

Share

ರಾಮಮಂದಿರ(Ram Mandir) ಪ್ರಾಣ ಪ್ರತಿಷ್ಠಾ ಸಮಾರಂಭದ ಬಗ್ಗೆ ಇಡೀ ಭಾರತದ ಜನರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆದರೂ ಜಗತ್ತಿನಾದ್ಯಂತ ರಾಮನ ಪ್ರತಿಧ್ವನಿ ಮೊಳಗಲಿದೆ. ಕೆನಡಾ ಜನವರಿ 22 ರಂದು ಅಯೋಧ್ಯೆ ರಾಮ ಮಂದಿರ ದಿನ ಎಂದು ಘೋಷಿಸಲು ನಿರ್ಧರಿಸಿದೆ.

ಕೆನಡಾದ ಮೂರು ಪುರಸಭೆಗಳು ಜನವರಿ 22 ಅನ್ನು ಅಯೋಧ್ಯೆ ರಾಮಮಂದಿರ ದಿನ ಎಂದು ಘೋಷಿಸಿವೆ. ಹಿಂದೂ ಕೆನಡಿಯನ್ ಫೌಂಡೇಶನ್ (ಎಚ್‌ಸಿಎಫ್) ಸಂಸ್ಥಾಪಕ ಮತ್ತು ಅಧ್ಯಕ್ಷ ಅರುಣೇಶ್ ಗಿರಿ ಮಾತನಾಡಿ, ವಿಶ್ವ ಜೈನ್ ಸಂಘಟನೆ ಕೆನಡಾ (ವಿಜೆಎಸ್‌ಸಿ) ಸಹಯೋಗದೊಂದಿಗೆ ಎಚ್‌ಸಿಎಫ್ ಜನವರಿ 22, 2024 ರಂದು ಮೂರು ನಗರಗಳಾದ ಬ್ರಾಂಪ್ಟನ್, ಓಕ್‌ವಿಲ್ಲೆ ಮತ್ತು ಬ್ರಾಂಟ್‌ಫೋರ್ಡ್‌ನಲ್ಲಿ ಅಯೋಧ್ಯೆ ರಾಮಮಂದಿರ ದಿನವನ್ನು ಯಶಸ್ವಿಯಾಗಿ ಘೋಷಿಸಿದೆ.

ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಅವರು ತಮ್ಮ ಪ್ರಕಟಣೆಯಲ್ಲಿ ಭಾರತೀಯ ಸಂಸ್ಕೃತಿಯನ್ನು ಗೌರವಿಸುವ ಬಗ್ಗೆ ಮಾತನಾಡಿದ್ದಾರೆ. ಕೆನಡಾದ ಹೊರತಾಗಿ, ಮಾರಿಷಸ್ ಕೂಡ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಂದು ತನ್ನ ಯೋಜನೆಗಳನ್ನು ಘೋಷಿಸಿದೆ.

ಮತ್ತಷ್ಟು ಓದಿ: ಜಪಾನ್​ನಲ್ಲಿ ರಾಮಭಕ್ತಿ ಮೆರೆದ ಕನ್ನಡಿಗರು, ಸೊಗಸಾದ ರಾಮಾಯಣ ರೂಪಕ

ಮಾರಿಷಸ್‌ನಲ್ಲಿ ಈ ದಿನವನ್ನು ಸ್ಮರಣೀಯವಾಗಿಸಲು, ದೀಪಗಳನ್ನು ಬೆಳಗಿಸಲಾಗುತ್ತದೆ. ಅಷ್ಟೇ ಅಲ್ಲ ಅಲ್ಲಿ ರಾಮಾಯಣ ಪಾರಾಯಣವೂ ನಡೆಯಲಿದೆ.

ಪ್ರಾಣ ಪ್ರತಿಷ್ಠೆಯ ದಿನದಂದು ಮಾರಿಷಸ್‌ನ ಎಲ್ಲಾ ದೇವಾಲಯಗಳಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ ಮತ್ತು ರಾಮಾಯಣವನ್ನು ಪಠಿಸಲಾಗುವುದು. ಮಾರಿಷಸ್ ಸರ್ಕಾರವು ಸರ್ಕಾರಿ ಹಿಂದೂ ನೌಕರರಿಗೆ ಜನವರಿ 22 ರಂದು ರಜೆ ನೀಡಲು ನಿರ್ಧರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:12 am, Mon, 22 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?