ಕೆನಡಾದಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರಗಳ ಮೆರವಣಿಗೆ

ಖಲಿಸ್ತಾನಿ ಬೆಂಬಲಿಗರು ಕೆನಡಾದಲ್ಲಿ ಇಂದಿರಾ ಗಾಂಧಿ(Indira Gandhi) ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರದ ಮೆರವಣಿಗೆ ನಡೆಸಿದರು.

ಕೆನಡಾದಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಇಂದಿರಾ ಗಾಂಧಿ ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರಗಳ ಮೆರವಣಿಗೆ
ಇಂದಿರಾ ಗಾಂಧಿ
Follow us
|

Updated on: Jun 08, 2023 | 12:05 PM

ಖಲಿಸ್ತಾನಿ ಬೆಂಬಲಿಗರು ಕೆನಡಾದಲ್ಲಿ ಇಂದಿರಾ ಗಾಂಧಿ(Indira Gandhi) ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರದ ಮೆರವಣಿಗೆ ನಡೆಸಿದರು. ಈ ಸ್ತಬ್ಧಚಿತ್ರದಲ್ಲಿ ಅಂಗರಕ್ಷಕರು ಇಂದಿರಾ ಗಾಂಧಿಗೆ ಗುಂಡು ಹಾರಿಸಿರುವಂತೆ , ಹಾಗೆಯೇ ಅವರು ರಕ್ತಸಿಕ್ತವಾಗಿ ಹತಾಷೆಯಲ್ಲಿ ಕೈಯನ್ನು ಮೇಲಕ್ಕೆತ್ತಿ ನಿಂತಿರುವಂತೆ ಚಿತ್ರಿಸಲಾಗಿದೆ. ಈ ಸ್ತಬ್ಧಚಿತ್ರಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆದರೆ, ಇಂದಿರಾ ಗಾಂಧಿ ಅವರಿಗೆ ಸಂಬಂಧಿಸಿದ ಈ ರೀತಿಯ ವಿಡಿಯೋ ಕುರಿತು ಕೆನಡಾದಿಂದ ಯಾವುದೇ ಪ್ರತಿಕ್ರಿಯೆ ಇನ್ನೂ ನೀಡಿಲ್ಲ.

ಆಪರೇಷನ್ ಬ್ಲೂ ಸ್ಟಾರ್‌ನ 39 ನೇ ವರ್ಷಾಚರಣೆಗೆ 4 ದಿನ ಬಾಕಿ ಇರುವಾಗ ಖಲಿಸ್ತಾನಿ ಬೆಂಬಲಿಗರು ಇಂದಿರಾ ಗಾಂಧಿಯವರ ಸ್ತಬ್ದಚಿತ್ರ ಪ್ರದರ್ಶನ ನಡೆಸಿದರು. ತೆರೆದ ಟ್ರಕ್‌ನಲ್ಲಿ, ಅವರು ರಕ್ತಸಿಕ್ತ ಬಟ್ಟೆಯನ್ನು ಧರಿಸಿದ್ದ ಇಂದಿರಾ ಗಾಂಧಿಯವರ ಪ್ರತಿಕೃತಿಯನ್ನು ಇರಿಸಿದ್ದರು. ಹಾಗೆಯೇ ಇಬ್ಬರು ಅಂಗರಕ್ಷಕರಂತೆ ಕಾಣುವ ಇಬ್ಬರ ಕೈಯಲ್ಲಿ ಬಂದೂಕು ಇರಿಸಿ ನಿಲ್ಲಿಸಿದ್ದರು. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಕೂಡ ಶೇರ್ ಮಾಡಿದ್ದಾರೆ.

ಮತ್ತಷ್ಟು ಓದಿ: ಲಂಡನ್​ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ, ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಖಲಿಸ್ತಾನಿ ಉಗ್ರರ ಗದ್ದಲ

ಈ ವಿಡಿಯೋವನ್ನು ಹಂಚಿಕೊಂಡಿರುವ ಮಿಲಿಂದ್ ದಿಯೋರಾ, ಇಂದಿರಾ ಗಾಂಧಿಯವರ ಹತ್ಯೆಯನ್ನು ಬಿಂಬಿಸುವ ಕೆನಡಾದ ಬ್ರಾಂಪ್ಟನ್ ನಗರದಲ್ಲಿ ನಡೆದ 5 ಕಿ.ಮೀ ಉದ್ದದ ಪರೇಡ್ ಅನ್ನು ನೋಡಿ ಭಾರತೀಯನಾಗಿ ನಾನು ಆಘಾತಕ್ಕೊಳಗಾಗಿದ್ದೇನೆ. ಇದು ಯಾರ ಪರವಾಗಿಯೂ ನಿಲ್ಲುವ ವಿಚಾರವಲ್ಲ. ಇದು ಒಂದು ದೇಶಕ್ಕೆ ಗೌರವ ಮತ್ತು ಅದರ ಪ್ರಧಾನ ಮಂತ್ರಿಯ ಹತ್ಯೆಯಿಂದ ಉಂಟಾದ ನೋವಿನ ಕುರಿತು ಆಲೋಚಿಸಬೇಕು, ನಾವು ಒಗ್ಗಟ್ಟಾಗಿ ಪ್ರತಿಕ್ರಿಯೆ ನೀಡಬೇಕು, ಇದು ಸಂಪೂರ್ಣ ಖಂಡನೀಯ ಎಂದು ಹೇಳಿದ್ದಾರೆ.

ಲಂಡನ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಖಲಿಸ್ತಾನಿಗಳು ವಿದೇಶದಲ್ಲಿ ಭಾರತದ ಗೌರವವನ್ನು ಅವಮಾನಿಸಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಅಳವಡಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಖಲಿಸ್ತಾನಿಗಳು ಕಿತ್ತೆಸೆದಿದ್ದರು. ಈ ಬಗ್ಗೆಯೂ ಸಾಕಷ್ಟು ಗದ್ದಲ ನಡೆದಿತ್ತು. ಈ ಸಂಪೂರ್ಣ ವಿಷಯವು ಭಾರತದಲ್ಲಿ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಬಂಧನದ ನಂತರ ಖಲಿಸ್ತಾನಿ ಬೆಂಬಲಿಗರ ಅಟ್ಟಹಾಸ ಹೆಚ್ಚಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ