AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟಿನ್ ಟ್ರುಡೊರನ್ನು ಮೋದಿ ಪ್ರಶ್ನಿಸಿದ ಬೆನ್ನಲ್ಲೇ ಭಾರತದ ಜತೆಗಿನ ವಹಿವಾಟು ಮುಂದೂಡಿದ ಕೆನಡಾ

ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಕೆನಡಾದೊಂದಿಗಿನ ಮಾತುಕತೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರ ಸಹ ಘೋಷಿಸಿತ್ತು. ರಾಜಕೀಯ ಸಮಸ್ಯೆಗಳ ಪರಿಹಾರದ ನಂತರವೇ ಉಭಯ ದೇಶಗಳ ನಡುವಿನ ಮಾತುಕತೆ ಪುನರಾರಂಭವಾಗಲಿದೆ ಎಂದು ಸರ್ಕಾರ ಹೇಳಿದೆ.

ಜಸ್ಟಿನ್ ಟ್ರುಡೊರನ್ನು ಮೋದಿ ಪ್ರಶ್ನಿಸಿದ ಬೆನ್ನಲ್ಲೇ ಭಾರತದ ಜತೆಗಿನ ವಹಿವಾಟು ಮುಂದೂಡಿದ ಕೆನಡಾ
ಜಸ್ಟಿನ್ ಟ್ರುಡೊ
Ganapathi Sharma
|

Updated on: Sep 16, 2023 | 9:32 AM

Share

ಒಟ್ಟಾವಾ, ಸೆಪ್ಟೆಂಬರ್ 16: ಖಲಿಸ್ತಾನಿಗಳು ಭಾರತೀಯ ಸಮುದಾಯ ಮತ್ತು ರಾಜತಾಂತ್ರಿಕರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುತ್ತಿರುವ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊರನ್ನು (Justin Trudeau) ಪ್ರಧಾನಿ ನರೇಂದ್ರ ಮೋದಿ (Narendra Modi) ಜಿ20 ಶೃಂಗಸಭೆ ವೇಳೆ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಇದೀಗ ಕೆನಡಾ ಸರ್ಕಾರವು ಭಾರತದ ಜತೆಗಿನ ವಹಿವಾಟನ್ನು ಮುಂದೂಡಿಕೆ ಮಾಡಿದೆ. ಕೆನಡಾ ವ್ಯಾಪಾರ ಸಚಿವ ಮೇರಿ ಎನ್‌ಜಿ ಅವರು ಭಾರತದ ಜತೆ ಅಕ್ಟೋಬರ್​​​ನಲ್ಲಿ ಹಮ್ಮಿಕೊಂಡಿದ್ದ ಟ್ರೇಡ್ ಮಿಷನ್ ಅನ್ನು ಮುಂದೂಡಿದ್ದಾರೆ.

ಮೇರಿ ಎನ್‌ಜಿಯ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದು, ನಾವು ಭಾರತದ ಜತೆಗಿನ ವ್ಯಾಪಾರ ಕಾರ್ಯಾಚರಣೆಯನ್ನು ಮುಂದೂಡುತ್ತಿದ್ದೇವೆ ಎಂದು ಹೇಳಿದ್ದಾರೆ. ಹೆಚ್ಚಿನ ವಿವರಗಳನ್ನು ಅಥವಾ ಕಾರಣವನ್ನು ಅವರು ನೀಡಿಲ್ಲ.

ಭಾರತ, ಕೆನಡಾ ನಡುವಿನ ಮಾತುಕತೆ ಮುಂದೂಡಿಕೆ ಏಕೆ?

ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಕೆನಡಾದೊಂದಿಗಿನ ಮಾತುಕತೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರ ಘೋಷಿಸಿತು. ರಾಜಕೀಯ ಸಮಸ್ಯೆಗಳ ಪರಿಹಾರದ ನಂತರವೇ ಉಭಯ ದೇಶಗಳ ನಡುವಿನ ಮಾತುಕತೆ ಪುನರಾರಂಭವಾಗಲಿದೆ ಎಂದು ಸರ್ಕಾರ ಹೇಳಿದೆ.

ಈ ತಿಂಗಳ ಆರಂಭದಲ್ಲಿ, ಕೆನಡಾ ಸಹ ಇದೇ ರೀತಿಯ ಪ್ರಕಟಣೆಯನ್ನು ಹೊರಡಿಸಿತ್ತು. ಈ ವರ್ಷಾಂತ್ಯದೊಳಗೆ ವ್ಯಾಪಾರ ಒಪ್ಪಂದಕ್ಕೆ ಮುದ್ರೆ ಹಾಕುವ ಇಚ್ಛೆಯನ್ನು ಉಭಯ ದೇಶಗಳು ಸುಮಾರು ನಾಲ್ಕು ತಿಂಗಳ ಹಿಂದೆಯೇ ವ್ಯಕ್ತಪಡಿಸಿದ್ದವು ಎಂಬುದು ಇಲ್ಲಿ ಉಲ್ಲೇಖಾರ್ಹ.

ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಿದ್ದನ್ನು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಸ್ಟಿನ್ ಟ್ರುಡೋ ಭೇಟಿಯಾಗಿದ್ದನ್ನು ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯ್ಲಿವ್ರೆ ಟೀಕಿಸಿದ್ದರು. ಕೆನಡಾದ ಯಾವೊಬ್ಬ ವ್ಯಕ್ತಿಯು ತಮ್ಮ ದೇಶದ ಪ್ರಧಾನ ಮಂತ್ರಿಯ ಇಂತಹ ನಡವಳಿಕೆಗಳನ್ನು ನೋಡಲು ಇಷ್ಟಪಡುವುದಿಲ್ಲ ಎಂದು ಪಿಯರೆ ಪೊಯ್ಲಿವ್ರೆ ಟೀಕಿಸಿದ್ದರು. ಪ್ರಧಾನಿಯೊಬ್ಬರು ಪದೇ ಪದೇ ಅವಮಾನಕ್ಕೊಳಗಾಗುವುದನ್ನು ಮತ್ತು ತುಳಿದುಕೊಳ್ಳುವುದನ್ನು ನೋಡಲು ಯಾರು ಇಷ್ಟಪಡುವುದಿಲ್ಲಎಂದು ಪೋಯ್ಲಿವ್ರೆ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್