AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ಬೀಚ್​ನಲ್ಲಿ ಕೆನಡಾ ಯುವತಿಯ ರಕ್ತಸಿಕ್ತ ಶವ ಪತ್ತೆ, ಡಿಂಗೊ ದಾಳಿ ಶಂಕೆ

ಆಸ್ಟ್ರೇಲಿಯಾದ ಜನಪ್ರಿಯ ಕಗರಿಯಾ ಬೀಚ್‌ನಲ್ಲಿ 19 ವರ್ಷದ ಕೆನಡಾ ಯುವತಿಯ ರಕ್ತಸಿಕ್ತ ಶವ ಪತ್ತೆಯಾಗಿದೆ. ಡಿಂಗೊ ಕಾಡು ನಾಯಿಗಳ ದಾಳಿಯಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಈ ಘಟನೆ ಪ್ರವಾಸಿಗರು ಮತ್ತು ಡಿಂಗೊಗಳ ನಡುವಿನ ಸಂಘರ್ಷದ ಬಗ್ಗೆ ಆತಂಕ ಮೂಡಿಸಿದ್ದು, ಸುರಕ್ಷತಾ ಕ್ರಮಗಳ ಕುರಿತು ಎಚ್ಚರಿಕೆ ನೀಡಲಾಗಿದೆ.

ಆಸ್ಟ್ರೇಲಿಯಾದ ಬೀಚ್​ನಲ್ಲಿ ಕೆನಡಾ ಯುವತಿಯ ರಕ್ತಸಿಕ್ತ ಶವ ಪತ್ತೆ, ಡಿಂಗೊ ದಾಳಿ ಶಂಕೆ
ಡಿಂಗೊImage Credit source: The Seattle Times
ನಯನಾ ರಾಜೀವ್
|

Updated on: Jan 20, 2026 | 9:58 AM

Share

ಮೆಲ್ಬೋರ್ನ್​, ಜನವರಿ 20: ಆಸ್ಟ್ರೇಲಿಯಾದ ಪ್ರಸಿದ್ಧ ಕಡಲತೀರದಲ್ಲಿ 19 ವರ್ಷದ ಕೆನಡಾ ಯುವತಿಯ ರಕ್ತಸಿಕ್ತವಾದ ದೇಹ ಪತ್ತೆಯಾಗಿದ್ದು, ಡಿಂಗೊ( Dingo)( ಆಸ್ಟ್ರೇಲಿಯಾದ ಕಾಡು ನಾಯಿ) ದಾಳಿಗೆ ಬಲಿಯಾಗಿದ್ದಾರಾ ಎನ್ನುವ ಆತಂಕ ಉಂಟಾಗಿದೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಕಗರಿಯಾ ಪೂರ್ವ ಕರಾವಳಿಯಲ್ಲಿರುವ ಕಡಲತೀರದಲ್ಲಿ ಮಹೇನೋ ಹಡಗಿನ ಬಳಿ ಸೋಮವಾರ ಬೆಳಗ್ಗೆ ಯುವತಿಯ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆ ಯುವತಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈಜಲು ಹೋಗುತ್ತಿರುವುದಾಗಿ ತನ್ನ ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ತಿಳಿಸಿದ್ದಳು. ಸುಮಾರು 95 ನಿಮಿಷಗಳ ನಂತರ ಬೆಳಗ್ಗೆ 6.35 ಕ್ಕೆ ಆಕೆಯ ಶವ ಪತ್ತೆಯಾಗಿದೆ ಎಂದು ಪೊಲೀಸರಿಗೆ ತಿಳಿಸಲಾಯಿತು. ವರದಿಗಳ ಪ್ರಕಾರ, ತಮ್ಮ ಎಸ್‌ಯುವಿಯಲ್ಲಿ ಬೀಚ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರು ಯುವಕರು ಶವವನ್ನು ಸುತ್ತುವರೆದಿರುವ ಸುಮಾರು 10 ಡಿಂಗೊಗಳನ್ನು ನೋಡಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ಪಾಲ್ ಅಲ್ಗಿ, ಆಕೆಯ ದೇಹದ ಮೇಲೆ ಡಿಂಗೊಗಳು ಹಲ್ಲೆ ನಡೆಸಿರುವ ಉಗುರಿನ ಗುರುತುಗಳಿವೆ. ಆದರೆ ಸಾವಿನ ನಿಖರವಾದ ಕಾರಣವನ್ನು ಪತ್ತೆ ಹಚ್ಚಲು ಅವರಿಗಿನ್ನು ಸಾಧ್ಯವಾಗಿಲ್ಲ.

ಮತ್ತಷ್ಟು ಓದಿ: ಪ್ರತಿ ದಿನ 100 ಜೀವಂತ ಕೀಟಗಳನ್ನು ತಿನ್ನುವ ವ್ಯಕ್ತಿ, ಕಾರಣವೇನು ಗೊತ್ತೇ?

ಯುವತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆಯೇ ಅಥವಾ ಡಿಂಗೊ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎಂಬುದನ್ನು ನಾವು ಇನ್ನೂ ದೃಢೀಕರಿಸಲು ಸಾಧ್ಯವಿಲ್ಲ. ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ನಿಖರವಾದ ಕಾರಣ ಸ್ಪಷ್ಟವಾಗಲಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ ಬುಧವಾರ ಹೊರಬರುವ ನಿರೀಕ್ಷೆಯಿದೆ. ಮಹಿಳೆ ಕಳೆದ ಆರು ವಾರಗಳಿಂದ ಕಗರಿ ಬೀಚ್‌ನಲ್ಲಿರುವ ಪ್ರವಾಸಿ ಹಾಸ್ಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೆನಡಾದ ಸ್ನೇಹಿತೆಯೂ ಅಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯ ನಂತರ ಆಕೆಯ ಸ್ನೇಹಿತೆ ತೀವ್ರ ಆಘಾತಕ್ಕೊಳಗಾಗಿದ್ದು, ಕೌನ್ಸೆಲಿಂಗ್‌ಗೆ ಒಳಗಾಗುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆನಡಾದಲ್ಲಿರುವ ಮಹಿಳೆಯ ಕುಟುಂಬವನ್ನು ಸಂಪರ್ಕಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಕಗೇರಿ ವಿಶ್ವದ ಅತಿದೊಡ್ಡ ಮರಳು ದ್ವೀಪ ಮತ್ತು ಯುನೆಸ್ಕೋ ವಿಶ್ವ ಪರಂಪರೆಯ ತಾಣ. ಸುಮಾರು 200 ಡಿಂಗೊಗಳು ಇಲ್ಲಿವೆ. COVID-19 ಸಾಂಕ್ರಾಮಿಕ ರೋಗದಿಂದ ದ್ವೀಪದಲ್ಲಿ ಪ್ರವಾಸಿಗರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿದೆ. ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಿವಾಸಿಗಳು ಡಿಂಗೊಗಳ ಬಳಿ ಹೋಗಬಾರದು ಮತ್ತು ಮತ್ತು ಅವುಗಳಿಗೆ ಆಹಾರ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ಮೂರು ವರ್ಷಗಳ ಹಿಂದೆ, ಅದೇ ದ್ವೀಪದಲ್ಲಿ ಜಾಗಿಂಗ್ ಮಾಡುತ್ತಿದ್ದ 23 ವರ್ಷದ ಮಹಿಳೆಯ ಮೇಲೆ ಡಿಂಗೊಗಳ ಗುಂಪೊಂದು ದಾಳಿ ಮಾಡಿತ್ತು ಡಿಂಗೊಗಳು ಅವರನ್ನುಅ ಸಮುದ್ರಕ್ಕೆ ಎಳೆದೊಯ್ದವು, ಆದರೆ ಒಬ್ಬ ಪ್ರವಾಸಿ ಹೇಗೋ ಅವರ ಜೀವವನ್ನು ಉಳಿಸಿದ್ದ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?