AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು

ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 09, 2021 | 2:36 PM

Share

ಇಸ್ಲಮಾಬಾದ್​​ನಲ್ಲಿ ಹಿಂದೂ ದೇವಸ್ಥಾನ ಕಟ್ಟಿಸಲು ಜಾಗ ಮಂಜೂರು ಮಾಡಿ, ಬಳಿಕ ಅದನ್ನು ರದ್ದುಗೊಳಿಸಿದ್ದ ಪಾಕಿಸ್ತಾನ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ (CDA) ತೀವ್ರ ಟೀಕೆಯ ಬಳಿಕ ತನ್ನ ಆದೇಶವನ್ನು ಹಿಂಪಡೆದಿದೆ.   ಇಸ್ಲಮಾಬಾದ್​​ನ ಸೆಕ್ಟರ್​ ಎಚ್​ 9/12ರಲ್ಲಿ ಹಿಂದೂ ದೇಗುಲ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಾಗಿತ್ತು. ಅದರೆ ಫೆಬ್ರವರಿಯಲ್ಲಿ ಮತ್ತೆ ಆ ಮಂಜೂರಾತಿಯನ್ನು ರದ್ದುಗೊಳಿಸಲಾಗಿತ್ತು. ಅದಾದ ಬಳಿಕ ವಿವಿಧ ಕಡೆಗಳಿಂತ ತೀವ್ರ ಟೀಕೆ ಕೇಳಿಬಂದಿತ್ತು. ಇಸ್ಲಮಾಬಾದ್​ ಹೈಕೋರ್ಟ್​​ನಲ್ಲಿ ಈ ಸಂಬಂಧ ವಿಚಾರಣೆ ಕೂಡ ನಡೆಯುತ್ತಿತ್ತು. 

ಇಸ್ಲಮಾಬಾದ್​ನ ಹಸಿರು ವಲಯದಲ್ಲಿ ಯಾವುದೇ ಹೊಸ ಕಟ್ಟಡಗಳ ನಿರ್ಮಾಣವನ್ನು ಫೆಡರಲ್​ ಕ್ಯಾಬಿನೆಟ್​ ನಿಷೇಧಿಸಿದ ನಂತರ, ಹಿಂದೂ ದೇವಸ್ಥಾನಕ್ಕೆ ಮಂಜೂರಾಗಿದ್ದ ಜಾಗವನ್ನು ಹಿಂಪಡೆಯಲಾಗಿತ್ತು ಎಂದು ಸಿಡಿಎ ಪರ ವಕೀಲ ಜಾವೇದ್​ ಇಕ್ಬಾಲ್​ ನ್ಯಾಯಾಲಯಕ್ಕೆ ತಿಳಿಸಿದ್ದರು.  ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ. ಅದರಲ್ಲೂ ಹೆಚ್ಚಾಗಿ ಇರುವುದು ಸಿಂಧ್​ ಪ್ರಾಂತ್ಯದಲ್ಲಿ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಂದೂ ಮತ್ತು ಇನ್ನಿತರ ಅಲ್ಪಸಂಖ್ಯಾತರ ಮೇಲೆ ದಾಳಿ ಆಗಾಗ ನಡೆಯುತ್ತಿರುತ್ತದೆ. ಹಿಂದೂ ದೇವಾಲಯಗಳ ಧ್ವಂಸದಂತಹ ದುಷ್ಕೃತ್ಯದ ಬಗ್ಗೆಯೂ ವರದಿ ಆಗುತ್ತಿರುತ್ತದೆ.  ಕಳೆದ ವರ್ಷ ಸಿಂಧ್​ನ ಮಾತಾ ರಾಣಿ ಭಟಿಯಾನಿ ಮಂದಿರ, ಖೈಬರ್​ ಪಕ್ತುಂಖ್ವಾ ಪ್ರಾಂತ್ಯದ ಕರಕ್​ನಲ್ಲಿರುವ ಹಿಂದೂ ದೇವಾಲಯ ಸೇರಿ ಹಲವು ದೇವಸ್ಥಾನಗಳ ಮೇಲೆ ದಾಳಿ ನಡೆದಿತ್ತು.

ಇದನ್ನೂ ಓದಿRafale deal ರಾಹುಲ್ ಗಾಂಧಿ ಉತ್ತರಿಸಲಿ: ಹೊಸ ರಫೇಲ್ ವರದಿ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ