AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು

ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 09, 2021 | 2:36 PM

Share

ಇಸ್ಲಮಾಬಾದ್​​ನಲ್ಲಿ ಹಿಂದೂ ದೇವಸ್ಥಾನ ಕಟ್ಟಿಸಲು ಜಾಗ ಮಂಜೂರು ಮಾಡಿ, ಬಳಿಕ ಅದನ್ನು ರದ್ದುಗೊಳಿಸಿದ್ದ ಪಾಕಿಸ್ತಾನ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ (CDA) ತೀವ್ರ ಟೀಕೆಯ ಬಳಿಕ ತನ್ನ ಆದೇಶವನ್ನು ಹಿಂಪಡೆದಿದೆ.   ಇಸ್ಲಮಾಬಾದ್​​ನ ಸೆಕ್ಟರ್​ ಎಚ್​ 9/12ರಲ್ಲಿ ಹಿಂದೂ ದೇಗುಲ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಾಗಿತ್ತು. ಅದರೆ ಫೆಬ್ರವರಿಯಲ್ಲಿ ಮತ್ತೆ ಆ ಮಂಜೂರಾತಿಯನ್ನು ರದ್ದುಗೊಳಿಸಲಾಗಿತ್ತು. ಅದಾದ ಬಳಿಕ ವಿವಿಧ ಕಡೆಗಳಿಂತ ತೀವ್ರ ಟೀಕೆ ಕೇಳಿಬಂದಿತ್ತು. ಇಸ್ಲಮಾಬಾದ್​ ಹೈಕೋರ್ಟ್​​ನಲ್ಲಿ ಈ ಸಂಬಂಧ ವಿಚಾರಣೆ ಕೂಡ ನಡೆಯುತ್ತಿತ್ತು. 

ಇಸ್ಲಮಾಬಾದ್​ನ ಹಸಿರು ವಲಯದಲ್ಲಿ ಯಾವುದೇ ಹೊಸ ಕಟ್ಟಡಗಳ ನಿರ್ಮಾಣವನ್ನು ಫೆಡರಲ್​ ಕ್ಯಾಬಿನೆಟ್​ ನಿಷೇಧಿಸಿದ ನಂತರ, ಹಿಂದೂ ದೇವಸ್ಥಾನಕ್ಕೆ ಮಂಜೂರಾಗಿದ್ದ ಜಾಗವನ್ನು ಹಿಂಪಡೆಯಲಾಗಿತ್ತು ಎಂದು ಸಿಡಿಎ ಪರ ವಕೀಲ ಜಾವೇದ್​ ಇಕ್ಬಾಲ್​ ನ್ಯಾಯಾಲಯಕ್ಕೆ ತಿಳಿಸಿದ್ದರು.  ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ. ಅದರಲ್ಲೂ ಹೆಚ್ಚಾಗಿ ಇರುವುದು ಸಿಂಧ್​ ಪ್ರಾಂತ್ಯದಲ್ಲಿ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಂದೂ ಮತ್ತು ಇನ್ನಿತರ ಅಲ್ಪಸಂಖ್ಯಾತರ ಮೇಲೆ ದಾಳಿ ಆಗಾಗ ನಡೆಯುತ್ತಿರುತ್ತದೆ. ಹಿಂದೂ ದೇವಾಲಯಗಳ ಧ್ವಂಸದಂತಹ ದುಷ್ಕೃತ್ಯದ ಬಗ್ಗೆಯೂ ವರದಿ ಆಗುತ್ತಿರುತ್ತದೆ.  ಕಳೆದ ವರ್ಷ ಸಿಂಧ್​ನ ಮಾತಾ ರಾಣಿ ಭಟಿಯಾನಿ ಮಂದಿರ, ಖೈಬರ್​ ಪಕ್ತುಂಖ್ವಾ ಪ್ರಾಂತ್ಯದ ಕರಕ್​ನಲ್ಲಿರುವ ಹಿಂದೂ ದೇವಾಲಯ ಸೇರಿ ಹಲವು ದೇವಸ್ಥಾನಗಳ ಮೇಲೆ ದಾಳಿ ನಡೆದಿತ್ತು.

ಇದನ್ನೂ ಓದಿRafale deal ರಾಹುಲ್ ಗಾಂಧಿ ಉತ್ತರಿಸಲಿ: ಹೊಸ ರಫೇಲ್ ವರದಿ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!