AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು

ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Nov 09, 2021 | 2:36 PM

Share

ಇಸ್ಲಮಾಬಾದ್​​ನಲ್ಲಿ ಹಿಂದೂ ದೇವಸ್ಥಾನ ಕಟ್ಟಿಸಲು ಜಾಗ ಮಂಜೂರು ಮಾಡಿ, ಬಳಿಕ ಅದನ್ನು ರದ್ದುಗೊಳಿಸಿದ್ದ ಪಾಕಿಸ್ತಾನ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ (CDA) ತೀವ್ರ ಟೀಕೆಯ ಬಳಿಕ ತನ್ನ ಆದೇಶವನ್ನು ಹಿಂಪಡೆದಿದೆ.   ಇಸ್ಲಮಾಬಾದ್​​ನ ಸೆಕ್ಟರ್​ ಎಚ್​ 9/12ರಲ್ಲಿ ಹಿಂದೂ ದೇಗುಲ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಾಗಿತ್ತು. ಅದರೆ ಫೆಬ್ರವರಿಯಲ್ಲಿ ಮತ್ತೆ ಆ ಮಂಜೂರಾತಿಯನ್ನು ರದ್ದುಗೊಳಿಸಲಾಗಿತ್ತು. ಅದಾದ ಬಳಿಕ ವಿವಿಧ ಕಡೆಗಳಿಂತ ತೀವ್ರ ಟೀಕೆ ಕೇಳಿಬಂದಿತ್ತು. ಇಸ್ಲಮಾಬಾದ್​ ಹೈಕೋರ್ಟ್​​ನಲ್ಲಿ ಈ ಸಂಬಂಧ ವಿಚಾರಣೆ ಕೂಡ ನಡೆಯುತ್ತಿತ್ತು. 

ಇಸ್ಲಮಾಬಾದ್​ನ ಹಸಿರು ವಲಯದಲ್ಲಿ ಯಾವುದೇ ಹೊಸ ಕಟ್ಟಡಗಳ ನಿರ್ಮಾಣವನ್ನು ಫೆಡರಲ್​ ಕ್ಯಾಬಿನೆಟ್​ ನಿಷೇಧಿಸಿದ ನಂತರ, ಹಿಂದೂ ದೇವಸ್ಥಾನಕ್ಕೆ ಮಂಜೂರಾಗಿದ್ದ ಜಾಗವನ್ನು ಹಿಂಪಡೆಯಲಾಗಿತ್ತು ಎಂದು ಸಿಡಿಎ ಪರ ವಕೀಲ ಜಾವೇದ್​ ಇಕ್ಬಾಲ್​ ನ್ಯಾಯಾಲಯಕ್ಕೆ ತಿಳಿಸಿದ್ದರು.  ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ. ಅದರಲ್ಲೂ ಹೆಚ್ಚಾಗಿ ಇರುವುದು ಸಿಂಧ್​ ಪ್ರಾಂತ್ಯದಲ್ಲಿ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಂದೂ ಮತ್ತು ಇನ್ನಿತರ ಅಲ್ಪಸಂಖ್ಯಾತರ ಮೇಲೆ ದಾಳಿ ಆಗಾಗ ನಡೆಯುತ್ತಿರುತ್ತದೆ. ಹಿಂದೂ ದೇವಾಲಯಗಳ ಧ್ವಂಸದಂತಹ ದುಷ್ಕೃತ್ಯದ ಬಗ್ಗೆಯೂ ವರದಿ ಆಗುತ್ತಿರುತ್ತದೆ.  ಕಳೆದ ವರ್ಷ ಸಿಂಧ್​ನ ಮಾತಾ ರಾಣಿ ಭಟಿಯಾನಿ ಮಂದಿರ, ಖೈಬರ್​ ಪಕ್ತುಂಖ್ವಾ ಪ್ರಾಂತ್ಯದ ಕರಕ್​ನಲ್ಲಿರುವ ಹಿಂದೂ ದೇವಾಲಯ ಸೇರಿ ಹಲವು ದೇವಸ್ಥಾನಗಳ ಮೇಲೆ ದಾಳಿ ನಡೆದಿತ್ತು.

ಇದನ್ನೂ ಓದಿRafale deal ರಾಹುಲ್ ಗಾಂಧಿ ಉತ್ತರಿಸಲಿ: ಹೊಸ ರಫೇಲ್ ವರದಿ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ