AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು

ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ.

ಹಿಂದು ದೇಗುಲಕ್ಕೆ ಮಂಜೂರಾದ ಜಾಗ ಹಿಂಪಡೆದಿದ್ದ ಪಾಕ್​ ಸಿಡಿಎ; ತೀವ್ರ ಟೀಕೆಯ ಬೆನ್ನಲ್ಲೇ ಮತ್ತೆ ಮಂಜೂರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 09, 2021 | 2:36 PM

Share

ಇಸ್ಲಮಾಬಾದ್​​ನಲ್ಲಿ ಹಿಂದೂ ದೇವಸ್ಥಾನ ಕಟ್ಟಿಸಲು ಜಾಗ ಮಂಜೂರು ಮಾಡಿ, ಬಳಿಕ ಅದನ್ನು ರದ್ದುಗೊಳಿಸಿದ್ದ ಪಾಕಿಸ್ತಾನ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ (CDA) ತೀವ್ರ ಟೀಕೆಯ ಬಳಿಕ ತನ್ನ ಆದೇಶವನ್ನು ಹಿಂಪಡೆದಿದೆ.   ಇಸ್ಲಮಾಬಾದ್​​ನ ಸೆಕ್ಟರ್​ ಎಚ್​ 9/12ರಲ್ಲಿ ಹಿಂದೂ ದೇಗುಲ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಾಗಿತ್ತು. ಅದರೆ ಫೆಬ್ರವರಿಯಲ್ಲಿ ಮತ್ತೆ ಆ ಮಂಜೂರಾತಿಯನ್ನು ರದ್ದುಗೊಳಿಸಲಾಗಿತ್ತು. ಅದಾದ ಬಳಿಕ ವಿವಿಧ ಕಡೆಗಳಿಂತ ತೀವ್ರ ಟೀಕೆ ಕೇಳಿಬಂದಿತ್ತು. ಇಸ್ಲಮಾಬಾದ್​ ಹೈಕೋರ್ಟ್​​ನಲ್ಲಿ ಈ ಸಂಬಂಧ ವಿಚಾರಣೆ ಕೂಡ ನಡೆಯುತ್ತಿತ್ತು. 

ಇಸ್ಲಮಾಬಾದ್​ನ ಹಸಿರು ವಲಯದಲ್ಲಿ ಯಾವುದೇ ಹೊಸ ಕಟ್ಟಡಗಳ ನಿರ್ಮಾಣವನ್ನು ಫೆಡರಲ್​ ಕ್ಯಾಬಿನೆಟ್​ ನಿಷೇಧಿಸಿದ ನಂತರ, ಹಿಂದೂ ದೇವಸ್ಥಾನಕ್ಕೆ ಮಂಜೂರಾಗಿದ್ದ ಜಾಗವನ್ನು ಹಿಂಪಡೆಯಲಾಗಿತ್ತು ಎಂದು ಸಿಡಿಎ ಪರ ವಕೀಲ ಜಾವೇದ್​ ಇಕ್ಬಾಲ್​ ನ್ಯಾಯಾಲಯಕ್ಕೆ ತಿಳಿಸಿದ್ದರು.  ಇಸ್ಲಮಾಬಾದ್​​ ಮತ್ತು ಸುತ್ತಲಿನ ನಗರಗಳಲ್ಲಿ ಏನಿಲ್ಲವೆಂದರೂ ಸುಮಾರು 3000 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಪಾಕಿಸ್ತಾನದಲ್ಲಿ ಹಿಂದುಗಳು ಅಲ್ಪಸಂಖ್ಯಾತರು. ಇಡೀ ದೇಶದಲ್ಲಿ ಒಟ್ಟಾರೆ 75 ಲಕ್ಷ ಹಿಂದೂಗಳಷ್ಟೇ ವಾಸವಾಗಿದ್ದಾರೆ. ಅದರಲ್ಲೂ ಹೆಚ್ಚಾಗಿ ಇರುವುದು ಸಿಂಧ್​ ಪ್ರಾಂತ್ಯದಲ್ಲಿ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಂದೂ ಮತ್ತು ಇನ್ನಿತರ ಅಲ್ಪಸಂಖ್ಯಾತರ ಮೇಲೆ ದಾಳಿ ಆಗಾಗ ನಡೆಯುತ್ತಿರುತ್ತದೆ. ಹಿಂದೂ ದೇವಾಲಯಗಳ ಧ್ವಂಸದಂತಹ ದುಷ್ಕೃತ್ಯದ ಬಗ್ಗೆಯೂ ವರದಿ ಆಗುತ್ತಿರುತ್ತದೆ.  ಕಳೆದ ವರ್ಷ ಸಿಂಧ್​ನ ಮಾತಾ ರಾಣಿ ಭಟಿಯಾನಿ ಮಂದಿರ, ಖೈಬರ್​ ಪಕ್ತುಂಖ್ವಾ ಪ್ರಾಂತ್ಯದ ಕರಕ್​ನಲ್ಲಿರುವ ಹಿಂದೂ ದೇವಾಲಯ ಸೇರಿ ಹಲವು ದೇವಸ್ಥಾನಗಳ ಮೇಲೆ ದಾಳಿ ನಡೆದಿತ್ತು.

ಇದನ್ನೂ ಓದಿRafale deal ರಾಹುಲ್ ಗಾಂಧಿ ಉತ್ತರಿಸಲಿ: ಹೊಸ ರಫೇಲ್ ವರದಿ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್