AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಉತ್ಸುಕರಾಗಿದ್ದ ಡೊನಾಲ್ಡ್ ಟ್ರಂಪ್​ಗೆ ಭಾರೀ ಹಿನ್ನಡೆ

ಡೊನಾಲ್ಡ್ ಟ್ರಂಪ್ ಭಾರೀ ಹಿನ್ನಡೆ ಅನುಭವಿಸಿದ್ದಾರೆ. 2024ರ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. ಕ್ಯಾಪಿಟಲ್ ಹಿಲ್ ಗಲಭೆ ಪ್ರಕರಣದಲ್ಲಿ ಕೊಲೊರಾಡೋ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಆದರೆ, ಜನವರಿ 4ರವರೆಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಕ್ಯಾಪಿಟಲ್ ಹಿಲ್ ದಾಳಿಯಲ್ಲಿ ಟ್ರಂಪ್ ಶಾಮೀಲಾಗಿರುವುದನ್ನು ನ್ಯಾಯಾಲಯ ಒಪ್ಪಿಕೊಂಡಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಉತ್ಸುಕರಾಗಿದ್ದ ಡೊನಾಲ್ಡ್ ಟ್ರಂಪ್​ಗೆ ಭಾರೀ ಹಿನ್ನಡೆ
ಡೊನಾಲ್ಡ್ ಟ್ರಂಪ್
ಗಣಪತಿ ಶರ್ಮಾ
|

Updated on:Dec 20, 2023 | 7:59 AM

Share

ನ್ಯೂಯಾರ್ಕ್​, ಡಿಸೆಂಬರ್ 20: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದು, ಚುನಾವಣಾ ಪ್ರಚಾರವನ್ನು ತೀವ್ರಗೊಳಿಸಲು ಮುಂದಾಗಿದ್ದರು. ಆದರೆ ಈ ನಡುವೆ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಈಗ ಅವರು 2024ರ ಚುನಾವಣೆಯಲ್ಲಿ ಸ್ಪರ್ಧಿಸುವುದು ಕಷ್ಟಸಾಧ್ಯವಾಗಿದೆ. ವಾಸ್ತವವಾಗಿ, ಕ್ಯಾಪಿಟಲ್ ಹಿಲ್ ಗಲಭೆ ಪ್ರಕರಣದಲ್ಲಿ ಟ್ರಂಪ್ ಅವರನ್ನು ಕೊಲೊರಾಡೋ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದೆ. ಆದರೆ, ಮೇಲ್ಮನವಿ ಸಲ್ಲಿಸಲು ಅವರಿಗೆ ಜನವರಿ 4ರವರೆಗೆ ಸಮಯವಿದ್ದು, ಆ ಮೂಲಕ ನಿರಾಳರಾಗುವ ಅವಕಾಶವೂ ಇದೆ.

ಮುಂದಿನ ರಿಪಬ್ಲಿಕನ್ ನಾಮನಿರ್ದೇಶನಕ್ಕೆ ಮುಂಚೂಣಿಯಲ್ಲಿರುವ ಅಭ್ಯರ್ಥಿಯು ಅಮೆರಿಕ ಸರ್ಕಾರದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಕುಮ್ಮಕ್ಕಿನ ಕಾರಣದಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಅಮೆರಿಕದ ಸಂವಿಧಾನವು ನಿರ್ಬಂಧಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಕೊಲೊರಾಡೋ ಸುಪ್ರೀಂ ಕೋರ್ಟ್‌ನ ತೀರ್ಪು ಕೊಲೊರಾಡೋಗೆ ಮಾತ್ರ ಅನ್ವಯಿಸುತ್ತದೆ ಎಂದು ವರದಿಯಾಗಿದೆ. ಆದರೆ ಐತಿಹಾಸಿಕ ನಿರ್ಧಾರವು 2024 ರ ಅಧ್ಯಕ್ಷೀಯ ಪ್ರಚಾರದ ಮೇಲೆ ಪರಿಣಾಮ ಬೀರಲಿದೆ. ಕೊಲೊರಾಡೋ ಚುನಾವಣಾ ಅಧಿಕಾರಿಗಳು ಜನವರಿ 5 ರೊಳಗೆ ಪ್ರಕರಣವನ್ನು ಇತ್ಯರ್ಥಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ. ಪ್ರಾಥಮಿಕ ಅಭ್ಯರ್ಥಿಗಳ ಪಟ್ಟಿಯನ್ನು ನಿರ್ಧರಿಸಲು ಮಾರ್ಚ್ 5 ರಂದು ಗಡುವು ವಿಧಿಸಲಾಗಿದೆ. ಅದಕ್ಕೂ ಮುನ್ನ ಪ್ರಕರಣ ಬಗೆಹರಿಯಲಿದೆಯೇ ಎಂಬ ಕುತೂಹಲ ಈಗ ಮೂಡಿದೆ.

ಇದನ್ನೂ ಓದಿ: 2024ರಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾದರೆ ದೇಶ ತೊರೆಯುತ್ತೇನೆ: ಪಾಪ್ ಗಾಯಕಿ ಚೆರ್

ಕ್ಯಾಪಿಟಲ್ ಹಿಲ್ ಮುತ್ತಿಗೆಗೆ ಒಳಗಾದಾಗಲೂ ಟ್ರಂಪ್ ದಾಳಿಯನ್ನು ಪ್ರಚೋದಿಸಿದರು ಮಾತ್ರವಲ್ಲ, ಅವರು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸಲು ನಿರಾಕರಿಸುವಂತೆ ಉಪಾಧ್ಯಕ್ಷ (ಮೈಕ್) ಪೆನ್ಸ್ ಅವರನ್ನು ಪದೇ ಪದೇ ಕೇಳಿಕೊಂಡರು ಎಂದು ನ್ಯಾಯಾಲಯ ಹೇಳಿದೆ. ಅದೇ ಸಮಯದಲ್ಲಿ, ಸೆನೆಟರ್‌ಗಳನ್ನು ಕರೆಯಲಾಯಿತು ಮತ್ತು ಚುನಾವಣಾ ಮತಗಳ ಎಣಿಕೆಯನ್ನು ನಿಲ್ಲಿಸುವಂತೆ ಕೇಳಲಾಯಿತು.

ಇದಲ್ಲದೆ, ಟ್ರಂಪ್ ಅವರ ವಾಕ್ ಸ್ವಾತಂತ್ರ್ಯದ ಹಕ್ಕುಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 am, Wed, 20 December 23

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!