AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಕಾರು, ಎಲುಬಿನ ಚೂರುಗಳು ಪತ್ತೆ

ಪೊಲೀಸರು ನಾಪತ್ತೆಯಾಗಿದ್ದ ಕಾರನ್ನು ಪತ್ತೆ ಮಾಡಿದ್ದಾರೆ. ಕಾರಿನ ಜತೆಗೆ ಕ್ಲೈಲ್​ನ ಐಡಿ ಕಾರ್ಡ್​ ಮತ್ತು ಕ್ರೆಡಿಟ್​ ಕಾರ್ಡ್ ಹಾಗೂ ಮೂಳೆಗಳು ದೊರೆತಿವೆ ಎಂದು ಸುದ್ದಿ ಸಂಸ್ಥೆಗೆ ಪೊಲೀಸರು ತಿಳಿಸಿದ್ದಾರೆ. ಆದರೆ ಮೂಳೆಗಳು ಅದೇ ವಿದ್ಯಾರ್ಥಿಯದ್ದೇ ಎನ್ನುವುದು ಸ್ಪಷ್ಟವಿಲ್ಲ. ಹೀಗಾಗಿ ಪರೀಕ್ಷೆಯ ಬಳಿಕವೇ ಕಾರಿನಲ್ಲಿ ಸಿಕ್ಕ ಮೂಳೆಗಳು ಯಾರದ್ದು ಎಂದು ತಿಳಿಯಬೇಕಿದೆ.

45 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಕಾರು, ಎಲುಬಿನ ಚೂರುಗಳು ಪತ್ತೆ
45 ವರ್ಷಗಳ ಬಳಿಕ ಪತ್ತೆಯಾದ ಕಾರು
TV9 Web
| Updated By: Pavitra Bhat Jigalemane|

Updated on: Dec 10, 2021 | 5:42 PM

Share

ಜಾರ್ಜಿಯಾ: ಯುಎಸ್​ ನ ಜಾರ್ಜಿಯಾದ ಅಬರ್ನ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನ ಕಾರು 45 ವರ್ಷಗಳ ಬಳಿಕ ಪತ್ತೆಯಾಗಿದೆ. ಕಾರಿನಲ್ಲಿ ಮೂಳೆಗಳೂ ಪತ್ತೆಯಾಗಿದ್ದು ತಜ್ಞರು ಸತ್ಯ ತಿಳಿಯಲು ಮುಂದಾಗಿದ್ದಾರೆ. 1976ರಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಕಾರು ಎನ್ನಲಾಗಿದ್ದು, ಕಾರಿನಲ್ಲಿ ಎಲುಬಿನ ತುಂಡುಗಳು ಪತ್ತೆಯಾಗಿವೆ22 ವರ್ಷದ ಕ್ಲೈಲ್​ ಕ್ಲಿಂಕ್ಸ್ಲೇಸ್ ಎನ್ನುವ ವಿದ್ಯಾರ್ಥಿ 1976ರಲ್ಲಿ ಕಾಲೇಜಿಗೆ ಹೋಗುವ ವೇಳೆ ಕಾರು ನದಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದ. ಜಾರ್ಜಿಯಾದಿಂದ ಅಬರ್ನ ವಿಶ್ವವಿದ್ಯಾಲಯಕ್ಕೆ ತೆರಳುತ್ತಿದ್ದ ದಾರಿಯಲ್ಲಿ ವಿದ್ಯಾರ್ಥಿ ಅಪಘಾತಕ್ಕೀಡಾಗಿದ್ದ.

ಇದೀಗ ಪೊಲೀಸರು ನಾಪತ್ತೆಯಾಗಿದ್ದ ಕಾರನ್ನು ಪತ್ತೆ ಮಾಡಿದ್ದಾರೆ. ಕಾರಿನ ಜತೆಗೆ ಕ್ಲೈಲ್​ನ ಐಡಿ ಕಾರ್ಡ್​ ಮತ್ತು ಕ್ರೆಡಿಟ್​ ಕಾರ್ಡ್ ಹಾಗೂ ಮೂಳೆಗಳು ದೊರೆತಿವೆ ಎಂದು ಸುದ್ದಿ ಸಂಸ್ಥೆಗೆ ಪೊಲೀಸರು ತಿಳಿಸಿದ್ದಾರೆ. ಆದರೆ ಮೂಳೆಗಳು ಅದೇ ವಿದ್ಯಾರ್ಥಿಯದ್ದೇ ಎನ್ನುವುದು ಸ್ಪಷ್ಟವಿಲ್ಲ. ಹೀಗಾಗಿ ಪರೀಕ್ಷೆಯ ಬಳಿಕವೇ ಕಾರಿನಲ್ಲಿ ಸಿಕ್ಕ ಮೂಳೆಗಳು ಯಾರದ್ದು ಎಂದು ತಿಳಿಯಬೇಕಿದೆ. ಈಗಾಗಲೇ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ ಯುಎಸ್​ನ ಇನ್ವೆಸ್ಟಿಗೇಷನ್​ ತಂಡವು ಹೆಚ್ಚಿನ ಮಾಹಿತಿ ಕಲೆ ಹಾಕಲು ಪ್ರಯತ್ನಿಸುತ್ತಿದೆ.

ಕ್ಲೈಲ್​ ಅವರ ತಂದೆ ತಾಯಿ ಇಬ್ಬರೂ ಆತನ ಬರುವಿಕೆಗಾಗಿ ಕಾದಿದ್ದರು. ಹಲವು ಬಾರಿ ಪೊಲೀಸರಿಗೆ ದೂರನ್ನು ಕೂಡ ನೀಡಿದ್ದರು. ಆತನ ಸುಳಿವೇ ಇರಲಿಲ್ಲ. ಕಳೆದ 5 ವರ್ಷಗಳ ಅವಧಿಯಲ್ಲಿ ಕ್ಲೈಲ್​ ತಂದೆ ತಾಯಿಗಳಿಬ್ಬರೂ ಮೃತಪಟ್ಟಿದ್ದಾರೆ. ಕ್ಲೈಲ್​ನದ್ದೇ ಎನ್ನಲಾದ ಪುರಾವೆಗಳು ಸಿಕ್ಕಿವೆ. ಅದನ್ನು ಪರಿಶೀಲನೆ ನಡೆಸಿ ಸತ್ಯಾಂಶವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತವೆ ಎಂದು ಯುಎಸ್​ನ ತನಿಖಾಧಿಕಾರಿ ವುಡ್ರಫ್​ ಎನ್ನುವವರು ತಿಳಿಸಿದ್ದಾರೆ.

ಇದನ್ನೂ ಓದಿ:

Rakesh Jhunjhunwala: ಸ್ಟಾರ್ ಹೆಲ್ತ್ ಇನ್ಷೂರೆನ್ಸ್​ ಲಿಸ್ಟಿಂಗ್​ನಿಂದ ರಾಕೇಶ್​ ಜುಂಜುನ್​ವಾಲಾಗೆ 6 ಸಾವಿರ ಕೋಟಿ ರೂ. ಲಾಭ

ವಿಶ್ವದ ಅತ್ಯಂತ ಪ್ರಬಲ ದೇಶದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ಗೆ ಬ್ಲ್ಯೂಟೂಥ್ ಬಡ್ಸ್ ಫೋಬಿಯ!

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು