AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರದ ಪ್ರಕರಣಗಳು ಹೆಚ್ಚುತ್ತಿವೆ!

ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತೆಯನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಅಲ್ಲಿದ್ದ ವೈದ್ಯಾಧಿಕಾರಿ ಚಿಕಿತ್ಸೆ ನೀಡಲು ನಿರಾಕರಿಸಿದನಲ್ಲದೆ ಆಕೆಗೆ ಅಗತ್ಯವಿದ್ದ ವೈದ್ಯಕೀಯ ಪ್ರಮಾಣ ಪತ್ರವನ್ನು ನೀಡಲಿಲ್ಲ ಎಂದು ಪ್ರತಿಭಟನೆಕಾರರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರದ ಪ್ರಕರಣಗಳು ಹೆಚ್ಚುತ್ತಿವೆ!
ಫೈಲ್ ಚಿತ್ರ
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Sep 23, 2022 | 12:55 PM

Share

ಇಸ್ಲಾಮಾಬಾದ್: ಕಳ್ಳತನದ ಸುಳ್ಳು ಅರೋಪ ಹೊರೆಸಿ ಒಬ್ಬ ಹಿಂದೂ ಮಹಿಳೆಯ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದರೆಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಸೋಮವಾರದಂದು ಭಾವಲ್ಪುರದ ಜಿಲ್ಲಾ ಪೊಲೀಸ್ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಭಾರೀ ಸಂಖ್ಯೆಯಲ್ಲಿ ನೆರೆದ ಜನ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಒಬ್ಬ ಹಿಂದೂ ಮಹಿಳೆಯ ಮೇಲೆ ಕಳ್ಳತನದ ಸುಳ್ಳು ಆರೋಪ ಹೊರಿಸಿ ಅದೇ ನೆಪದಲ್ಲಿ ಆಕೆಯನ್ನು ಥಳಿಸಲಾಗಿದೆ ಎಂದು ಪ್ರತಿಭಟನೆಕಾರರು ಹೇಳಿದರು. ಸಂತ್ರಸ್ತೆಯು ಯಜಮಾನ ಮಂಡಿಯ ನಿವಾಸಿಯಾಗಿದ್ದು ಮನೆಗೆಲಸದವಳಾಗಿ ಕೆಲಸ ಮಾಡುತ್ತಾಳೆ.

ವರದಿಯ ಪ್ರಕಾರ ಜನರ ಗುಂಪೊಂದು ಹಿಂದೂ ಮಹಿಳೆಯ ನಿವಾಸದ ಮೇಲೆ ದಾಳಿ ನಡೆಸಿ ಆಕೆಯನ್ನು ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತೆಯನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಅಲ್ಲಿದ್ದ ವೈದ್ಯಾಧಿಕಾರಿ ಚಿಕಿತ್ಸೆ ನೀಡಲು ನಿರಾಕರಿಸಿದನಲ್ಲದೆ ಆಕೆಗೆ ಅಗತ್ಯವಿದ್ದ ವೈದ್ಯಕೀಯ ಪ್ರಮಾಣ ಪತ್ರವನ್ನು ನೀಡಲಿಲ್ಲ ಎಂದು ಪ್ರತಿಭಟನೆಕಾರರು ಹೇಳಿದ್ದಾರೆ.

ಪ್ರತಿಭಟನಾ ರ್ಯಾಲಿಯಲ್ಲಿ ಮಾತಾಡಿದ ಅಲ್ಪಸಮುದಾಯಗಳ ಕೆಲ ಮುಖಂಡರು ಪ್ರಕರಣದ ಸೂಕ್ತ ಮತ್ತು ನ್ಯಾಯಯುತ ತನಿಖೆಯಾಗಬೇಕೆಂದು ಆಗ್ರಹಿಸಿದರು. ಮಹಿಳೆ ಮೇಲೆ ಹಲ್ಲೆ ನಡೆಸಿದವರು ಮತ್ತು ವೈದ್ಯನ ವಿರುದ್ಧ ಕ್ರಮ ಜರುಗಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಅಪಹರಣ, ಹತ್ಯೆ, ರೇಪ್ ಮತ್ತು ಬಲವಂತದ ಮತಾಂತರ ಸೇರಿದಂತೆ ಪಾಕಿಸ್ತಾನದ ಅಲ್ಪಸಂಖ್ಯಾತರ ಮೇಲೆ ಅನೇಕ ದೌರ್ಜನ್ಯಗಳು ನಡೆಯುತ್ತಿದ್ದು ಅವರು ದಯನೀಯ ಮತ್ತು ಅತ್ಯಂತ ಕಳವಳಕಾರಿ ಸ್ಥಿತಿಯಲ್ಲಿ ಬ್ಉಕು ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಮೇಲೆ ಹಿಂಸಾಚಾರದ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ.

ವೈಯಕ್ತಿಕ ದ್ವೇಷಗಳನ್ನು ಸಾಧಿಸಲು, ಅಲ್ಪಸಂಖ್ಯಾತರು ಮತ್ತು ಮುಸ್ಲಿಂ ಸಮುದಾಯದ ಸದಸ್ಯರ ವಿರುದ್ಧ ಕ್ರೂರವೆನಿಸುವ ಧರ್ಮನಿಂದೆಯ ಕಾನೂನುಗಳ ದುರುಪಯೋಗ ಹೆಚ್ಚುತ್ತಲೇ ಇದೆ.

ಪಾಕಿಸ್ತಾನದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಮುದಾಯಗಳು ದುಸ್ಥಿತಿಯಲ್ಲಿ ಜೀವಿಸುತ್ತಿರುವುದು ನಿಜವೇ, ಆದರೆ ಈ ಸಮುದಾಯಗಳ ಮಹಿಳೆಯರು ಅಧಿಕಾರಿ ವರ್ಗದ, ರಾಜಕೀಯ ಗುಂಪು, ಧಾರ್ಮಿಕ ಪಕ್ಷಗಳು, ಊಳಿಗಮಾನ್ಯ ಮತ್ತು ಮುಸ್ಲಿಂ ಬಹುಸಂಖ್ಯಾತರ ತಾರತಮ್ಯದ ಧೋರಣೆಗಳಿಗೆ ಬಲಿಪಶುಗಳಾಗಿದ್ದಾರೆ.

ಬಲವಂತದ ಮತಾಂತರ ಮತ್ತು ವಿವಾಹಗಳ ಸಂದಿಗ್ಧತೆಯು ಅಲ್ಪಸಂಖ್ಯಾತ ಮಹಿಳೆಯರನ್ನು ಅಪಾಯಕ್ಕೆ ದೂಡುತ್ತಿದೆ ಮತ್ತು ಈ ದೇಶದಲ್ಲಿ ಅವರಿಗೆ ತಮ್ಮ ಕಾನೂನುಬದ್ಧ ಹಕ್ಕುಗಳನ್ನು ದೊರಕಿಸಿಕೊಡುವುದು ಜಟಿಲ ಸಮಸ್ಯೆಯೆನಿಸಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?