AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಿಪ್ಟ್​ನಲ್ಲಿ ಇಸ್ರೇಲ್-ಹಮಾಸ್ ಮಾತುಕತೆ, ವಿನಾಶದ ನಡುವೆಯೂ ಶಾಂತಿಯ ಭರವಸೆ

ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಬೆಂಬಲಿತ ಯೋಜನೆ ಕುರಿತು ಒಪ್ಪಂದಕ್ಕೆ ಬರಲು ಇಸ್ರೇಲ್ ಮತ್ತು ಹಮಾಸ್ ಅಧಿಕಾರಿಗಳು ಈಜಿಪ್ಟ್​​ನ ರೆಸಾರ್ಟ್​ ನಗರವಾದ ಶರ್ಮ್​ ಅಲ್-ಶೇಖ್​ನಲ್ಲಿ ಪರೋಕ್ಷ ಮಾತುಕತೆ ನಡೆಸುತ್ತಿದ್ದಾರೆ. ಹಲವು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ವಿನಿಮಯ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿವೆ.

ಈಜಿಪ್ಟ್​ನಲ್ಲಿ ಇಸ್ರೇಲ್-ಹಮಾಸ್ ಮಾತುಕತೆ, ವಿನಾಶದ ನಡುವೆಯೂ ಶಾಂತಿಯ ಭರವಸೆ
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Oct 07, 2025 | 8:02 AM

Share

ಗಾಜಾ, ಅಕ್ಟೋಬರ್ 07: ಗಾಜಾ(Gaza)ದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಬೆಂಬಲಿತ ಯೋಜನೆ ಕುರಿತು ಒಪ್ಪಂದಕ್ಕೆ ಬರಲು ಇಸ್ರೇಲ್ ಮತ್ತು ಹಮಾಸ್ ಅಧಿಕಾರಿಗಳು ಈಜಿಪ್ಟ್​​ನ ರೆಸಾರ್ಟ್​ ನಗರವಾದ ಶರ್ಮ್​ ಅಲ್-ಶೇಖ್​ನಲ್ಲಿ ಪರೋಕ್ಷ ಮಾತುಕತೆ ನಡೆಸುತ್ತಿದ್ದಾರೆ. ಹಲವು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ವಿನಿಮಯ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿವೆ.

ಅಧ್ಯಕ್ಷ ಟ್ರಂಪ್ ಅವರ ಪ್ರಸ್ತಾವನೆಯಲ್ಲಿರುವ ವಿನಿಮಯ ಸೂತ್ರಕ್ಕೆ ಅನುಗುಣವಾಗಿ, ಎಲ್ಲಾ ಇಸ್ರೇಲಿ ಕೈದಿಗಳನ್ನು, ಬಿಡುಗಡೆ ಮಾಡಲು ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮುಂದಿನ ದಿನಗಳಲ್ಲಿ ಒತ್ತೆಯಾಳುಗಳ ಬಿಡುಗಡೆಯನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ಶನಿವಾರ ಹೇಳಿದ್ದಾರೆ.

ಕೈದಿಗಳ ಬಿಡುಗಡೆ ಮತ್ತು ಕದನ ವಿರಾಮ ಸೇರಿದಂತೆ ಮೊದಲ ಹಂತದ ಹೆಚ್ಚಿನ ವಿಷಯಗಳ ಬಗ್ಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ಇಂದು ಕೂಡ ಕೂಡ ಮಾತುಕತೆ ಮುಂದುವರೆಯಲಿದೆ. ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನೇತೃತ್ವದ ದಾಳಿ ನಡೆಸಿ ಇಂದಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಮಾತುಕತೆಗಳು ನಡೆಯಲಿವೆ, ಈ ದಾಳಿಯಲ್ಲಿ ಸುಮಾರು 1,200 ಜನರು ಸಾವನ್ನಪ್ಪಿದರು ಮತ್ತು 251 ಒತ್ತೆಯಾಳುಗಳನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಗಾಜಾ ಮೇಲೆ ಇಸ್ರೇಲ್​ನಿಂದ ವೈಮಾನಿಕ ದಾಳಿ, 57 ಮಂದಿ ಸಾವು, ಶಾಂತಿ ಸೂತ್ರಕ್ಕೆ ಇನ್ನೂ ಒಪ್ಪದ ಹಮಾಸ್

ಅಂದಿನಿಂದ, ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಗಳು ಪ್ಯಾಲೆಸ್ಟೈನ್‌ನಲ್ಲಿ 67,160 ಜನರನ್ನು ಕೊಂದಿವೆ ಎಂದು ಗಾಜಾದ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಶ್ವೇತಭವನದ ಮಾಜಿ ಸಲಹೆಗಾರ ಜೇರೆಡ್ ಕುಶ್ನರ್ ಮತ್ತು ಕತಾರ್ ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರೆಹಮಾನ್ ಅಲ್ ಥಾನಿ ಮಾತುಕತೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅನುಮೋದಿಸಿದ ಅಮೆರಿಕ ಬೆಂಬಲಿತ 20 ಅಂಶಗಳ ಶಾಂತಿ ಯೋಜನೆಯು ತಕ್ಷಣದ ಕದನ ವಿರಾಮ ಮತ್ತು 48 ಒತ್ತೆಯಾಳುಗಳನ್ನು (ಅವರಲ್ಲಿ ಕೇವಲ 20 ಮಂದಿ ಜೀವಂತವಾಗಿರುವ ಸಾಧ್ಯತೆಯಿದೆ) ನೂರಾರು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಬಿಡುಗಡೆ ಮಾಡಲು ಕರೆ ನೀಡುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?