AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಿಪ್ಟ್​ನಲ್ಲಿ ಇಸ್ರೇಲ್-ಹಮಾಸ್ ಮಾತುಕತೆ, ವಿನಾಶದ ನಡುವೆಯೂ ಶಾಂತಿಯ ಭರವಸೆ

ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಬೆಂಬಲಿತ ಯೋಜನೆ ಕುರಿತು ಒಪ್ಪಂದಕ್ಕೆ ಬರಲು ಇಸ್ರೇಲ್ ಮತ್ತು ಹಮಾಸ್ ಅಧಿಕಾರಿಗಳು ಈಜಿಪ್ಟ್​​ನ ರೆಸಾರ್ಟ್​ ನಗರವಾದ ಶರ್ಮ್​ ಅಲ್-ಶೇಖ್​ನಲ್ಲಿ ಪರೋಕ್ಷ ಮಾತುಕತೆ ನಡೆಸುತ್ತಿದ್ದಾರೆ. ಹಲವು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ವಿನಿಮಯ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿವೆ.

ಈಜಿಪ್ಟ್​ನಲ್ಲಿ ಇಸ್ರೇಲ್-ಹಮಾಸ್ ಮಾತುಕತೆ, ವಿನಾಶದ ನಡುವೆಯೂ ಶಾಂತಿಯ ಭರವಸೆ
ಡೊನಾಲ್ಡ್​ ಟ್ರಂಪ್
ನಯನಾ ರಾಜೀವ್
|

Updated on: Oct 07, 2025 | 8:02 AM

Share

ಗಾಜಾ, ಅಕ್ಟೋಬರ್ 07: ಗಾಜಾ(Gaza)ದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಬೆಂಬಲಿತ ಯೋಜನೆ ಕುರಿತು ಒಪ್ಪಂದಕ್ಕೆ ಬರಲು ಇಸ್ರೇಲ್ ಮತ್ತು ಹಮಾಸ್ ಅಧಿಕಾರಿಗಳು ಈಜಿಪ್ಟ್​​ನ ರೆಸಾರ್ಟ್​ ನಗರವಾದ ಶರ್ಮ್​ ಅಲ್-ಶೇಖ್​ನಲ್ಲಿ ಪರೋಕ್ಷ ಮಾತುಕತೆ ನಡೆಸುತ್ತಿದ್ದಾರೆ. ಹಲವು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ವಿನಿಮಯ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿವೆ.

ಅಧ್ಯಕ್ಷ ಟ್ರಂಪ್ ಅವರ ಪ್ರಸ್ತಾವನೆಯಲ್ಲಿರುವ ವಿನಿಮಯ ಸೂತ್ರಕ್ಕೆ ಅನುಗುಣವಾಗಿ, ಎಲ್ಲಾ ಇಸ್ರೇಲಿ ಕೈದಿಗಳನ್ನು, ಬಿಡುಗಡೆ ಮಾಡಲು ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮುಂದಿನ ದಿನಗಳಲ್ಲಿ ಒತ್ತೆಯಾಳುಗಳ ಬಿಡುಗಡೆಯನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ಶನಿವಾರ ಹೇಳಿದ್ದಾರೆ.

ಕೈದಿಗಳ ಬಿಡುಗಡೆ ಮತ್ತು ಕದನ ವಿರಾಮ ಸೇರಿದಂತೆ ಮೊದಲ ಹಂತದ ಹೆಚ್ಚಿನ ವಿಷಯಗಳ ಬಗ್ಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ಇಂದು ಕೂಡ ಕೂಡ ಮಾತುಕತೆ ಮುಂದುವರೆಯಲಿದೆ. ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನೇತೃತ್ವದ ದಾಳಿ ನಡೆಸಿ ಇಂದಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಮಾತುಕತೆಗಳು ನಡೆಯಲಿವೆ, ಈ ದಾಳಿಯಲ್ಲಿ ಸುಮಾರು 1,200 ಜನರು ಸಾವನ್ನಪ್ಪಿದರು ಮತ್ತು 251 ಒತ್ತೆಯಾಳುಗಳನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಗಾಜಾ ಮೇಲೆ ಇಸ್ರೇಲ್​ನಿಂದ ವೈಮಾನಿಕ ದಾಳಿ, 57 ಮಂದಿ ಸಾವು, ಶಾಂತಿ ಸೂತ್ರಕ್ಕೆ ಇನ್ನೂ ಒಪ್ಪದ ಹಮಾಸ್

ಅಂದಿನಿಂದ, ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಗಳು ಪ್ಯಾಲೆಸ್ಟೈನ್‌ನಲ್ಲಿ 67,160 ಜನರನ್ನು ಕೊಂದಿವೆ ಎಂದು ಗಾಜಾದ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಶ್ವೇತಭವನದ ಮಾಜಿ ಸಲಹೆಗಾರ ಜೇರೆಡ್ ಕುಶ್ನರ್ ಮತ್ತು ಕತಾರ್ ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರೆಹಮಾನ್ ಅಲ್ ಥಾನಿ ಮಾತುಕತೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅನುಮೋದಿಸಿದ ಅಮೆರಿಕ ಬೆಂಬಲಿತ 20 ಅಂಶಗಳ ಶಾಂತಿ ಯೋಜನೆಯು ತಕ್ಷಣದ ಕದನ ವಿರಾಮ ಮತ್ತು 48 ಒತ್ತೆಯಾಳುಗಳನ್ನು (ಅವರಲ್ಲಿ ಕೇವಲ 20 ಮಂದಿ ಜೀವಂತವಾಗಿರುವ ಸಾಧ್ಯತೆಯಿದೆ) ನೂರಾರು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಬಿಡುಗಡೆ ಮಾಡಲು ಕರೆ ನೀಡುತ್ತದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ