ಈಜಿಪ್ಟ್​ನಲ್ಲಿ ಇಸ್ರೇಲ್-ಹಮಾಸ್ ಮಾತುಕತೆ, ವಿನಾಶದ ನಡುವೆಯೂ ಶಾಂತಿಯ ಭರವಸೆ

ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಬೆಂಬಲಿತ ಯೋಜನೆ ಕುರಿತು ಒಪ್ಪಂದಕ್ಕೆ ಬರಲು ಇಸ್ರೇಲ್ ಮತ್ತು ಹಮಾಸ್ ಅಧಿಕಾರಿಗಳು ಈಜಿಪ್ಟ್​​ನ ರೆಸಾರ್ಟ್​ ನಗರವಾದ ಶರ್ಮ್​ ಅಲ್-ಶೇಖ್​ನಲ್ಲಿ ಪರೋಕ್ಷ ಮಾತುಕತೆ ನಡೆಸುತ್ತಿದ್ದಾರೆ. ಹಲವು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ವಿನಿಮಯ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿವೆ.

ಈಜಿಪ್ಟ್​ನಲ್ಲಿ ಇಸ್ರೇಲ್-ಹಮಾಸ್ ಮಾತುಕತೆ, ವಿನಾಶದ ನಡುವೆಯೂ ಶಾಂತಿಯ ಭರವಸೆ
ಡೊನಾಲ್ಡ್​ ಟ್ರಂಪ್

Updated on: Oct 07, 2025 | 8:02 AM

ಗಾಜಾ, ಅಕ್ಟೋಬರ್ 07: ಗಾಜಾ(Gaza)ದಲ್ಲಿ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಬೆಂಬಲಿತ ಯೋಜನೆ ಕುರಿತು ಒಪ್ಪಂದಕ್ಕೆ ಬರಲು ಇಸ್ರೇಲ್ ಮತ್ತು ಹಮಾಸ್ ಅಧಿಕಾರಿಗಳು ಈಜಿಪ್ಟ್​​ನ ರೆಸಾರ್ಟ್​ ನಗರವಾದ ಶರ್ಮ್​ ಅಲ್-ಶೇಖ್​ನಲ್ಲಿ ಪರೋಕ್ಷ ಮಾತುಕತೆ ನಡೆಸುತ್ತಿದ್ದಾರೆ. ಹಲವು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ವಿನಿಮಯ ಒಪ್ಪಂದದ ಕುರಿತು ಚರ್ಚೆಗಳು ನಡೆಯುತ್ತಿವೆ.

ಅಧ್ಯಕ್ಷ ಟ್ರಂಪ್ ಅವರ ಪ್ರಸ್ತಾವನೆಯಲ್ಲಿರುವ ವಿನಿಮಯ ಸೂತ್ರಕ್ಕೆ ಅನುಗುಣವಾಗಿ, ಎಲ್ಲಾ ಇಸ್ರೇಲಿ ಕೈದಿಗಳನ್ನು, ಬಿಡುಗಡೆ ಮಾಡಲು ಒಪ್ಪಿಕೊಂಡಿರುವುದಾಗಿ ಹಮಾಸ್ ಹೇಳಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮುಂದಿನ ದಿನಗಳಲ್ಲಿ ಒತ್ತೆಯಾಳುಗಳ ಬಿಡುಗಡೆಯನ್ನು ಘೋಷಿಸುವ ನಿರೀಕ್ಷೆಯಿದೆ ಎಂದು ಶನಿವಾರ ಹೇಳಿದ್ದಾರೆ.

ಕೈದಿಗಳ ಬಿಡುಗಡೆ ಮತ್ತು ಕದನ ವಿರಾಮ ಸೇರಿದಂತೆ ಮೊದಲ ಹಂತದ ಹೆಚ್ಚಿನ ವಿಷಯಗಳ ಬಗ್ಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ಇಂದು ಕೂಡ ಕೂಡ ಮಾತುಕತೆ ಮುಂದುವರೆಯಲಿದೆ.
ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನೇತೃತ್ವದ ದಾಳಿ ನಡೆಸಿ ಇಂದಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಮಾತುಕತೆಗಳು ನಡೆಯಲಿವೆ, ಈ ದಾಳಿಯಲ್ಲಿ ಸುಮಾರು 1,200 ಜನರು ಸಾವನ್ನಪ್ಪಿದರು ಮತ್ತು 251 ಒತ್ತೆಯಾಳುಗಳನ್ನು ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಗಾಜಾ ಮೇಲೆ ಇಸ್ರೇಲ್​ನಿಂದ ವೈಮಾನಿಕ ದಾಳಿ, 57 ಮಂದಿ ಸಾವು, ಶಾಂತಿ ಸೂತ್ರಕ್ಕೆ ಇನ್ನೂ ಒಪ್ಪದ ಹಮಾಸ್

ಅಂದಿನಿಂದ, ಇಸ್ರೇಲಿ ಮಿಲಿಟರಿ ಕಾರ್ಯಾಚರಣೆಗಳು ಪ್ಯಾಲೆಸ್ಟೈನ್‌ನಲ್ಲಿ 67,160 ಜನರನ್ನು ಕೊಂದಿವೆ ಎಂದು ಗಾಜಾದ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಅಮೆರಿಕದ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಶ್ವೇತಭವನದ ಮಾಜಿ ಸಲಹೆಗಾರ ಜೇರೆಡ್ ಕುಶ್ನರ್ ಮತ್ತು ಕತಾರ್ ವಿದೇಶಾಂಗ ಸಚಿವ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರೆಹಮಾನ್ ಅಲ್ ಥಾನಿ ಮಾತುಕತೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅನುಮೋದಿಸಿದ ಅಮೆರಿಕ ಬೆಂಬಲಿತ 20 ಅಂಶಗಳ ಶಾಂತಿ ಯೋಜನೆಯು ತಕ್ಷಣದ ಕದನ ವಿರಾಮ ಮತ್ತು 48 ಒತ್ತೆಯಾಳುಗಳನ್ನು (ಅವರಲ್ಲಿ ಕೇವಲ 20 ಮಂದಿ ಜೀವಂತವಾಗಿರುವ ಸಾಧ್ಯತೆಯಿದೆ) ನೂರಾರು ಪ್ಯಾಲೆಸ್ತೀನ್ ಕೈದಿಗಳಿಗೆ ಬದಲಾಗಿ ಬಿಡುಗಡೆ ಮಾಡಲು ಕರೆ ನೀಡುತ್ತದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us