AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Nigeria Bomb Blast: ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟ, 27 ಕುರಿಗಾಹಿಗಳ ಸಾವು

ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟಗೊಂಡು ಜಾನುವಾರು ಸೇರಿದಂತೆ 27 ಜನ ಕುರಿಗಾಹಿಗಳು ಮೃತಪಟ್ಟ ದುರ್ಘಟನೆ ನಡೆದಿದೆ.

Central Nigeria Bomb Blast: ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟ, 27 ಕುರಿಗಾಹಿಗಳ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 26, 2023 | 7:19 AM

Share

ಜನಾಂಗೀಯ ಮತ್ತು ಧಾರ್ಮಿಕ ಉದ್ವಿಗ್ನತೆಗಳಿಗೆ ಕುಖ್ಯಾತ ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟಗೊಂಡು ಜಾನುವಾರು ಸೇರಿದಂತೆ 27 ಜನ ಕುರಿಗಾಹಿಗಳು ಮೃತಪಟ್ಟ ದುರ್ಘಟನೆ ನಡೆದಿದೆ. ನಸರವಾ, ಬೆನ್ಯೂ ರಾಜ್ಯಗಳ ಗಡಿ ಭಾಗ ರುಕುಬಿ ಬಳಿ ಕುರಿಗಾಹಿಗಳು ತಮ್ಮ ಜಾನುವಾರುಗಳನ್ನು ಮೇಯಿಸಲು ಬಂದಾಗ ಘಟನೆ ನಡೆದಿದೆ. ಬಾಬ್ ಸ್ಫೋಟದಲ್ಲಿ 27 ಜನ ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿವೆ. ಈ ಬಗ್ಗೆ ನಸರವಾ ಪೊಲೀಸ್ ಕಮಿಷನರ್ ಮೈಯಾಕಿ ಮಹಮ್ಮದ್ ಬಾಬಾ ಮಾಹಿತಿ ನೀಡಿದ್ದಾರೆ.

ಇನ್ನು ಘಟನೆ ನಡೆದ ಸ್ಥಳದಲ್ಲಿ ಮತ್ತಷ್ಟು ಜನರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ. ಪೊಲೀಸ್ ಬಾಂಬ್ ತಜ್ಞರು ಸ್ಫೋಟದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮಹಮ್ಮದ್ ಬಾಬಾ ತಿಳಿಸಿದರು.

ಇದನ್ನೂ ಓದಿ: ರಿಷಿ ಸುನಾಕ್ ತಮ್ಮ ಪತ್ನಿ ಅಕ್ಷತಾ ಮೂರ್ತಿಯೊಂದಿಗೆ ಇಸ್ಕಾನ್ ದೇವಸ್ಥಾನಕ್ಕೆ ತೆರಳಿ ಜನ್ಮಾಷ್ಟಮಿ ಆಚರಿಸಿದರು

ಮಿಲಿಟರಿ ಸ್ಟ್ರೈಕ್​ನಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ದನಗಾಹಿಗಳನ್ನು ಪ್ರತಿನಿಧಿಸುವ ಗುಂಪಿನ ಸದಸ್ಯರೊಬ್ಬರು ಮಾಹಿತಿ ನೀಡಿದ್ದರೆ. ಘಟನೆ ಸಂಬಂಧ ನೈಜೀರಿಯಾದ ವಾಯುಪಡೆಯ ವಕ್ತಾರರಿಗೆ ಮಾಹಿತಿ ಕೇಳಲಾಗಿದ್ದು ಅವರ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಮಧ್ಯ ನೈಜೀರಿಯಾದಲ್ಲಿ ದನಗಾಹಿಗಳು ಮತ್ತು ರೈತರು ತಮ್ಮ ಜಾನುವಾರುಗಳಿಗೆ ಮೇವು ಮತ್ತು ನೀರಿನ ಸಮಸ್ಯೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದಶಕಗಳ ಕಾಲದ ಈ ಸಂಘರ್ಷವು ಇತ್ತೀಚಿನ ವರ್ಷಗಳಲ್ಲಿ ಜನಾಂಗೀಯ ಮತ್ತು ಧಾರ್ಮಿಕ ಆಯಾಮವನ್ನು ಪಡೆದುಕೊಂಡಿದೆ, ಹೆಚ್ಚಿನ ಕುರುಬರು ಮುಸ್ಲಿಮರು ಮತ್ತು ರೈತರು ಹೆಚ್ಚಾಗಿ ಕ್ರಿಶ್ಚಿಯನ್ನರಾಗಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:09 am, Thu, 26 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್