AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ 2 ಮಿಷನ್ ವಿಫಲಗೊಂಡಾಗ ಭಾರತವನ್ನು ಗೇಲಿ ಮಾಡಿದ್ದ ಪಾಕ್ ನಾಯಕ ಈಗ ಚಂದ್ರಯಾನ 3ರ ಲೈವ್ ತೋರಿಸಿ ಎನ್ನುತ್ತಿದ್ದಾರಂತೆ!

ಚಂದ್ರಯಾನ 2 ಯೋಜನೆ ವಿಫಲಗೊಂಡಾಗ ಇಸ್ರೋ ಹಾಗೂ ಭಾರತದ ಬಗ್ಗೆ ಗೇಲಿ ಮಾಡಿದ್ದ ಪಾಕಿಸ್ತಾನ ನಾಯಕ ಈಗ ಚಂದ್ರಯಾನ 3ಯನ್ನು ಮನುಕುಲದ ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ. ಇಸ್ರೋದ ಚಂದ್ರಯಾನ 2 ಯೋಜನೆಯು ಅಂತಿಮ ಕ್ಷಣದಲ್ಲಿ ವಿಫಲಗೊಂಡಿತ್ತು, ಈ ಸಮಯ ಭಾರತೀಯರಲ್ಲಿ ಬೇಸರ ಮೂಡಿತ್ತು, ಆ ಸಮಯದಲ್ಲಿ ಪಾಕ್ ಸಚಿವರಾಗಿದ್ದ ಫವಾದ್ ಹುಸೇನ್ ಖಾನ್ ಭಾರತದ ಬಗ್ಗೆ ಲೇವಡಿ ಮಾಡಿದ್ದರು.

ಚಂದ್ರಯಾನ 2 ಮಿಷನ್ ವಿಫಲಗೊಂಡಾಗ ಭಾರತವನ್ನು ಗೇಲಿ ಮಾಡಿದ್ದ ಪಾಕ್ ನಾಯಕ ಈಗ ಚಂದ್ರಯಾನ 3ರ ಲೈವ್ ತೋರಿಸಿ ಎನ್ನುತ್ತಿದ್ದಾರಂತೆ!
ಫವಾದ್ ಹುಸೇನ್Image Credit source: Wikipedia
ನಯನಾ ರಾಜೀವ್
|

Updated on:Aug 23, 2023 | 9:48 AM

Share

ಚಂದ್ರಯಾನ 2 ಯೋಜನೆ ವಿಫಲಗೊಂಡಾಗ ಇಸ್ರೋ ಹಾಗೂ ಭಾರತದ ಬಗ್ಗೆ ಗೇಲಿ ಮಾಡಿದ್ದ ಪಾಕಿಸ್ತಾನ ನಾಯಕ ಈಗ ಚಂದ್ರಯಾನ 3(Chandrayaan 3)ಯನ್ನು ಮನುಕುಲದ ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ. ಇಸ್ರೋದ ಚಂದ್ರಯಾನ 2 ಯೋಜನೆಯು ಅಂತಿಮ ಕ್ಷಣದಲ್ಲಿ ವಿಫಲಗೊಂಡಿತ್ತು, ಈ ಸಮಯ ಭಾರತೀಯರಲ್ಲಿ ಬೇಸರ ಮೂಡಿತ್ತು, ಆ ಸಮಯದಲ್ಲಿ ಪಾಕ್ ಸಚಿವರಾಗಿದ್ದ ಫವಾದ್ ಹುಸೇನ್ ಖಾನ್ ಭಾರತದ ಬಗ್ಗೆ ಲೇವಡಿ ಮಾಡಿದ್ದರು.

ಆದರೆ ಈಗ ಅದೇ ವ್ಯಕ್ತಿ ಚಂದ್ರಯಾನ 3 ಮನುಕುಲಕ್ಕೆ ಇದೊಂದು ಐತಿಹಾಸಿಕ ಕ್ಷಣ, ಚಂದ್ರಯಾನ 3 ನೇರ ಪ್ರಸಾರ ಮಾಡುವಂತೆ ಕೇಳಿಕೊಂಡಿದ್ದಾರೆ. ಬುಧವಾರ ಸಂಜೆ ಚಂದ್ರಯಾನ-3 ರ ಚಂದ್ರನ ಲ್ಯಾಂಡಿಂಗ್ ಅನ್ನು ಪ್ರಸಾರ ಮಾಡುವಂತೆ ತಮ್ಮ ದೇಶವನ್ನು ಒತ್ತಾಯಿಸಿದರು.

ಇಂದು ಸಂಜೆ 6:15 ಕ್ಕೆ ಚಂದ್ರಯಾನದ ಚಂದ್ರನ ಲ್ಯಾಂಡಿಂಗ್ ಅನ್ನು ಪಾಕ್ ಮಾಧ್ಯಮಗಳು ನೇರಪ್ರಸಾರ ಮಾಡಬೇಕು ಎಂದು ಕೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಚಂದ್ರಯಾನಕ್ಕೆ 900 ಕೋಟಿ ಖರ್ಚು ಮಾಡಿದ್ದಕ್ಕಾಗಿ ಪ್ರಶ್ನಿಸಿದರು ಹಾಗೂ ಗೊತ್ತಿಲ್ಲದೇ ಇರುವ ಪ್ರದೇಶಕ್ಕೆ ಇಷ್ಟೆಲ್ಲಾ ಹಣ ಖರ್ಚು ಮಾಡುವ ಅಗತ್ಯವಿತ್ತೇ ಎಂದು ಕೇಳಿದ್ದರು.

ಫವಾದ್ ಟ್ವೀಟ್​

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕೇವಲ 2.1 ಕಿಮೀ ಎತ್ತರದಲ್ಲಿ ನೆಲಮಟ್ಟದೊಂದಿಗೆ ಸಂವಹನವನ್ನು ಕಳೆದುಕೊಂಡಾಗ ಕೊನೆಯ ಕಾರ್ಯಾಚರಣೆಯ ಅಂತಿಮ ಹಂತದ ವೈಫಲ್ಯದ ನಂತರ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಇಂಡಿಯಾ ಫೇಲ್ಡ್ ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿದ್ದರು.

ಮತ್ತಷ್ಟು ಓದಿ: ಇಸ್ರೋ ತಂಡ ಭಾರತಕ್ಕೆ ಸೇರಿದ್ದು, ಯಾವುದೇ ರಾಜಕೀಯ ಘಟಕವಲ್ಲ: ಚಂದ್ರಯಾನ-3 ಬಗ್ಗೆ ಮಮತಾ ಬ್ಯಾನರ್ಜಿ

ಫವಾದ್ ಹುಸೇನ್ ಅವರು ಜುಲೈ 14 ರಂದು ಇಸ್ರೋ ಮೂರನೇ ಚಂದ್ರಯಾನ ಮಿಷನ್​ ಅನ್ನು ಪ್ರಾರಂಭಿಸಿದಾಗ ಭಾರತದ ಬಾಹ್ಯಾಕಾಶ ಮತ್ತು ವಿಜ್ಞಾನ ಸಮಯದಾಯವನ್ನು ಅಭಿನಂದಿಸಿದ್ದಾರೆ.

ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕೇವಲ 2.1 ಕಿ.ಮೀ ಎತ್ತರದಲ್ಲಿ ಸಂವಹನ ಕಳೆದುಕೊಂಡಾಗ ಕೊನೆಯ ಕಾರ್ಯಾಚರಣೆಯ ಅಂತಿಮ ಹಂತದ ವೈಫಲ್ಯದ ನಂತರ ಭಾರತವನ್ನು ಆಡಿಕೊಂಡಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:47 am, Wed, 23 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ